ರಾಜ್ಯ ಬಜೆಟ್ -2024 : ಬಜೆಟ್ ನಲ್ಲಿ ಶಿವಮೊಗ್ಗಕ್ಕೆ ಸಿಕ್ಕಿದ್ದೇನು ? ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯ ಬಜೆಟ್ -2024 : ಬಜೆಟ್ ನಲ್ಲಿ ಶಿವಮೊಗ್ಗಕ್ಕೆ ಸಿಕ್ಕಿದ್ದೇನು ? ಇಲ್ಲಿದೆ ಸಂಪೂರ್ಣ ಮಾಹಿತಿ 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಇಂದು ಮಾಡಿದ್ದಾರೆ ನಡುವೆ ಆರಂಭದಲ್ಲಿ ಅವರು ಕೇಂಧ್ರ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು.

14 ಬಾರಿ ಬಜೆಟ್ ಮಂಡಿಸಿ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯವನ್ನು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್​ ಪ್ರತಿಗಳನ್ನು ಸರ್ಕಾರಿ ಸ್ವಾಮ್ಯದ ಲೀಡ್ಕರ್ ಸಂಸ್ಥೆಯ ಬ್ಯಾಗ್​ನಲ್ಲಿ ಸಿಎಂ ತೆಗೆದುಕೊಂಡು ಬಂದು, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ

ಬಜೆಟ್ ನಲ್ಲಿ ಶಿವಮೊಗ್ಗಕ್ಕೆ ಕೆಲವು ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

  • ಜಿಲ್ಲೆಯಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಹೈ-ಸೆಕ್ಯೂರಿಟಿ ಕಾರಾಗೃಹವನ್ನು ನಿರ್ಮಾಣ
  • ಫುಡ್ ಪಾರ್ಕ್: ಶಿವಮೊಗ್ಗದ ಸೋಗಾನ ವಿಮಾನ ನಿಲ್ದಾಣದ ಬಳಿಯಲ್ಲಿ ಆಹಾರ ಪಾರ್ಕ್ ನಿರ್ಮಾಣ
  •  ಶಿವಮೊಗ್ಗದಲ್ಲಿ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ: ಮುಂದಿನ 4 ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು ಸ್ಥಾಪಿಸುವ ಮೂಲಕ ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಉತ್ತಮ ಪ್ರಯೋಗಾಲಯ ಸೇವೆಗಳನ್ನು ಒದಗಿಸಲು ಕ್ರಮ
  • ರೈಲ್ವೆ ಮೇಲ್ಸ್ತುವೆ: ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿರುವ ಬೊಮ್ಮನಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್‌’ನಲ್ಲಿ ಮೇಲ್ಲೇತುವೆ ನಿರ್ಮಾಣ
  •  ತಾರಾಲಯ: ಶಿವಮೊಗ್ಗದಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ವಿಜ್ಞಾನ ಕೇಂದ್ರ/ ತಾರಾಲಯಗಳನ್ನು ಹೊಸದಾಗಿ ಸ್ಥಾಪಿಸಲಾಗುವುದು.
  • ಶಿವಮೊಗ್ಗ, ರಾಯಚೂರು, ಚಿಕ್ಕಮಗಳೂರು, ಯಾದಗಿರಿ ಮತ್ತು ಮೈಸೂರಿನಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ವಿಜ್ಞಾನ ಕೇಂದ್ರ/ ತಾರಾಲಯಗಳನ್ನು ಹೊಸದಾಗಿ ಸ್ಥಾಪನೆ
  • ಭದ್ರಾವತಿಯಲ್ಲಿ ಅತ್ಯಾಧುನಿಕ ಹೈಟೆಕ್‌ ಮೀನು ಮಾರುಕಟ್ಟೆ ನಿರ್ಮಾಣ

ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಕೆಲವೊಂದು ಘೋಷಣೆ ಮಾಡಿರುವ ಸಿದ್ದರಾಮಯ್ಯ ಅನುದಾನವನ್ನೂ ಸಹ ಮೀಸಲಿಡುವುದಾಗಿ ಹೇಳಿದ್ದಾರೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.