ಹರ್ಷ ಕೊಲೆ ಕೇಸ್ ಆರೋಪಿಗಳಿಂದ ಸೆಂಟ್ರಲ್ ಜೈಲಲ್ಲಿ ಹೊಡೆದಾಟ ! ಹಲವರಿಗೆ ಗಂಭೀರ ಗಾಯ !

ಹರ್ಷ ಕೊಲೆ ಕೇಸ್ ಆರೋಪಿಗಳಿಂದ ಸೆಂಟ್ರಲ್ ಜೈಲಲ್ಲಿ ಹೊಡೆದಾಟ ! ಹಲವರಿಗೆ ಗಂಭೀರ ಗಾಯ !

ಕಲುಬುರಗಿ : ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಜೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿದ್ದು, ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ.

ಶಿವಮೊಗ್ಗ ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿದ್ದು, ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ

ಈ ಹೊಡೆದಾಟದಲ್ಲಿ ಎರಡು ಗುಂಪಿನ ಕೆಲವರಿಗೆ ಗಾಯಗಳಾಗಿವೆ. 

ಘಟನೆಯ ಬಳಿಕ ಡಿಸಿಪಿ ನೇತೃತ್ವದಲ್ಲಿ ಜೈಲಿನ ಮೇಲೆ ದಾಳಿ ಮಾಡಲಾಗಿದ್ದು, ದಾಳಿ ವೇಳೆ ಮಾರಾಕಾಸ್ತ್ರ 10 ಸಾವಿರ ನಗದು ಹಾಗೂ ಎರಡು ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.