ನೈರುತ್ಯ ಪದವಿಧರ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಭರ್ಜರಿ ಮುನ್ನಡೆ !

ಶಿವಮೊಗ್ಗ : ವಿಧಾನಪರಿಷತ್ತಿನ ನೈರುತ್ಯ ಪದವಿದರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಇದೇ ಜೂನ್ ಮೂರರಂದು ನಡೆದಿತ್ತು, ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರವು ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ದಕ್ಷಿಣ ಕನ್ನಡ, ಕೊಡಗು, ದಾವಣಗೆರೆ ಜಿಲ್ಲೆಯ ಹೊನ್ನಾಳಿ, ಚನ್ನಗಿರಿ, ನ್ಯಾಮತಿ ತಾಲೂಕುಗಳು ಈ ಕ್ಷೇತ್ರದಲ್ಲಿ ಒಳಗೊಂಡಿರುತ್ತದೆ, ನೈರುತ್ಯ ಪದವಿಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಖ್ಯಾತ ಮಕ್ಕಳ ತಜ್ಞರಾದ ಡಾ. ಧನಂಜಯ ಸರ್ಜಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಎಸ್ ಪಿ ದಿನೇಶ್, ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ರಘುಪತಿ ಭಟ್ ಸ್ಪರ್ಧಿಸಿದ್ದರು

ನೈರುತ್ಯ ಪದವಿಧರ ಕ್ಷೇತ್ರದಲ್ಲಿ ಒಟ್ಟು 85,089 ಇದ್ದು ಅದರಲ್ಲಿ 66,529 ಮತದಾರರು ಮತ ಚಲಾಯಿಸಿದ್ದಾರೆ. 10 ಜನ ಅಭ್ಯರ್ಥಿಗಳು ಕಣದಲ್ಲಿದ್ದರು 

ಮೊದಲ ಸುತ್ತಿನಲ್ಲಿ 

ಡಾ. ಧನಂಜಯ ಸರ್ಜಿ : 6714

ರಘುಪತಿ ಭಟ್ : 3128

ಆಯನೂರು ಮಂಜುನಾಥ್ : 2434

 ಎಸ್ ಪಿ ದಿನೇಶ್ : 578

ಮೊದಲನೇ ಸುತ್ತಿನಲ್ಲಿ ಡಾ. ಧನಂಜಯ ಸರ್ಜಿ 3586 ಅಂತರಗಳ ಮುನ್ನಡೆಯನ್ನು ಸಾಧಿಸಿದ್ದಾರೆ 

 ಎರಡನೇ ಸುತ್ತಿನಲ್ಲಿ 

ಡಾ. ಧನಂಜಯ ಸರ್ಜಿ : 7363

ಆಯನೂರು ಮಂಜುನಾಥ್ : 2816

ರಘುಪತಿ ಭಟ್ : 1963

ಎಸ್ ಪಿ ದಿನೇಶ್ : 709

ಎರಡನೇ ಸುತ್ತಿನಲ್ಲಿ ಡಾ. ಧನಂಜಯ್ ಸರ್ಜಿ 4547 ಅಂತರಗಳ ಭರ್ಜರಿ ಮುನ್ನಡೆಯನ್ನು ಸಾಧಿಸಿದ್ದಾರೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 

ಇದನ್ನೂ ಓದಿ   : ನೈರುತ್ಯ ಶಿಕ್ಷಕರ ಕ್ಷೇತ್ರ: ಜೆಡಿಎಸ್‌ನ ಭೋಜೇಗೌಡಗೆ ಭರ್ಜರಿ ಗೆಲುವು


Leave a Reply

Your email address will not be published.