ಶಿವಮೊಗ್ಗ : ಶಿವಮೊಗ್ಗದ ಕುಸ್ಕೂರಿನಲ್ಲಿ ನೆನ್ನೆ ರಾತ್ರಿ ಮಾಜಿ ಕಾರ್ಪೊರೇಟರ್ ಸತ್ಯನಾರಾಯಣ ( ಮೊಟ್ಟೆ ಸತೀಶ್ ) ಮೇಲೆ ನಡೆದ ಹಲ್ಲೆ ಸಂಬಂಧ ಶಿವಮೊಗ್ಗ ಜಿಲ್ಲಾ ವರಿಷ್ಟಾಧಿಕಾರಿ ಎಸ್. ಪಿ ಮಿಥುನ್ ಕುಮಾರ್ ಜಿ.. ಕೆ ಮಾಹಿತಿ ನೀಡಿದ್ದಾರೆ.
ಹಲ್ಲೆ ನಡೆದಿರುವುದು ಜಮೀನು ವ್ಯಾಜ್ಯದ ಸಲುವಾಗಿ ಜಮೀನು ಖರೀದಿಯ ವಿಚಾರಕ್ಕೆ ಸತ್ಯನಾರಾಯಣ ರಾಜು ವ್ಯಾಜ್ಯ ಹೊಂದಿದ್ದರು. ಅದೇ ಕಾರಣಕ್ಕೆ ಅವರ ಮೇಲೆ ಹಲ್ಲೆ ನಡೆದಿದೆ. ಈ ಪ್ರಕರಣದಲ್ಲಿ ರೌಡಿ ಎಲಿಮೆಂಟ್ಸ್ ಕಂಡು ಬಂದಿಲ್ಲ ಎಂದು ಎಸ್. ಪಿ ಸ್ಪಷ್ಟಪಡಿಸಿದ್ದಾರೆ.
ಮಾಜಿ ಕಾರ್ಪೊರೇಟರ್ ಸತ್ಯನಾರಾಯಣ ರಾಜು (ಮೊಟ್ಟೆ ಸತೀಶ್) ಕುಸ್ಕೂರು ಬಳಿ ಜಮೀನು ವಿಚಾರವಾಗಿ ಈ ಹಲ್ಲೆ ನಡೆದಿದೆ. ಜಮೀನು ಖರೀದಿ ವಿಚಾರಕ್ಕೆ ಸತೀಶ್ ವ್ಯಾಜ್ಯ ಹೊಂದಿದ್ದರು. ನಿನ್ನೆ ದಿನ ರಾತ್ರಿ ತಮ್ಮ ಜಮೀನಿನ ಬಳಿ ಸತೀಶ್ ತೆರಳಿದ್ದಾಗ. ಅವರ ಕಾರಿನ ಮೇಲೆ ದೊಣ್ಣೆಗಳಿಂದ ಗುಂಪೊಂದು ದಾಳಿ ನಡೆಸಿದೆ . ಬಳಿಕ ಸತೀಶ್ ಮೇಲೆ ಗುಂಪು ಹಲ್ಲೆ ಮಾಡಿದೆ. ಸತೀಶ್ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ತಮ್ಮ ಮೇಲೆ ಹಲ್ಲೆಯ ಆತಂಕದಿಂದ ಸತೀಶ್ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ನಿನ್ನೆಯೇ ದೂರು ನೀಡಿದ್ದಾರೆ.
ಸದ್ಯ ಮೊಟ್ಟೆ ಸತೀಶ್ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕೆತ್ಸೆ ಪಡೆಯುತ್ತಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply