ಕಿಡಿಗೇಡಿಗಳಿಂದ ಮನೆಯೊಂದರ ಮೇಲೆ ಕಲ್ಲು ತುರಾಟ !

ಶಿವಮೊಗ್ಗ : ನಗರದ ಕಾಮಾಕ್ಷಿ ಬೀದಿಯ ಮನೆಯೆೊಂದರ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಏನೋಶಬ್ದವಾಗಿದೆ ಎಂದು ಹೊರಗೆ ಬಂದು ನೋಡಿದ ವೃದ್ಧನ ಮೇಲು ಇಟ್ಟಿಗೆ ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ.

ರಾಮಣ್ಣ ಎಂಬುವವರ ಮನೆಯ ಮೇಲೆ ಆಗಸ್ಟ್ 11ರ ರಾತ್ರಿ ಯಾರೋ ಕಿರಿಕಿಡಿಗಳು ಕಲ್ಲು ತೂರಿದ್ದಾರೆ. ರಾಮಣ್ಣ ಎಂಬವವರು ಆಗಸ್ಟ್ 11ರ ರಾತ್ರಿ ಊಟ ಮುಗಿಸಿ ಮಾತ್ರೆ ತೆಗೆದುಕೊಳ್ಳುತ್ತಿದ್ದರು.ಈ ವೇಳೆ ಹೊರಗೆ ಶಬ್ದವಾಗಿದೆ. ರಾಮಣ್ಣ ಮತ್ತು ಅವರ ಪತ್ನಿ ಬಾಗಿಲು ತೆಗೆದಾಗ ಕಿಡಿಗೇಡಿಗಳು ತೂರಿದ ಇಟ್ಟಿಗೆ ರಾಮಣ್ಣ ಅವರ ಭುಜದ ಮೇಲೆ ಬಿದ್ದಿದೆ. ಕೂಡಲೆ ಮೊಮ್ಮಗನಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.

ಪೊಲೀಸ್‌ ಠಾಣೆಗೆ ದೂರು ನೀಡಲು ಮೊಮ್ಮಗನೊಂದಿಗೆ ತೆರಳುತ್ತಿದ್ದಾಗ ಕಿಡಿಗೇಡಿಗಳು ಪುನಃ ಕಲ್ಲು ತೂರಿದ್ದಾರೆ. ಅದೃಷ್ಟವಶಾತ್‌ ಪಾರಾಗಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ರಾಮಣ್ಣ ಅವರಿಗೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.