ಶಿವಮೊಗ್ಗದಲ್ಲಿ ಪೊಲೀಸ್ ಹೈ ಅಲರ್ಟ್ : ರೌಡಿ ಶೀಟರ್ಗಳ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಿ: ಎಡಿಜಿಪಿ ಹಿತೇಂದ್ರ ಸೂಚನೆ
ಶಿವಮೊಗ್ಗ : ಎಡಿಜಿಪಿ (ಕಾನೂನು ಸುವ್ಯವಸ್ಥೆ) ಹಿತೇಂದ್ರ ಅವರು ಇಂದು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಸೇವಾ ಪೆರೇಡ್ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದರು.
ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಪೆರೇಡ್ ಕಮಾಂಡರ್ ಆಗಿ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ವಿವಿಧ ಜಿಲ್ಲೆಯ ಪೊಲೀಸ್ ಅಧಿಕಾರಿ,ಸಿಬ್ಬಂದ್ದಿಗಳಿಗೆ ಪ್ರಶಂಸನಾ ಪತ್ರಗಳನ್ನು ನೀಡಿ ಅಭಿನಂದಿಸಿ, ಪೊಲೀಸ್ ವಾಹನಗಳ ಪರಿವೀಕ್ಷಣೆ ನಡೆಸಿದರು.
ನಿನ್ನೆ ಡಿಎಆರ್ ಸಭಾಂಗಣದಲ್ಲಿ ಜಿಲ್ಲೆಯ ಅಪರಾಧ ವಿಮರ್ಶನಾ ಸಭೆ ನಡೆಸಿ, ಸಭೆಯಲ್ಲಿ ಹಾಜರಿದ್ದ ಪೊಲೀಸ್ ಅಧಿಕಾರಿಗಳಿಗೆ ತನಿಖೆ ಯಲ್ಲಿರುವ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವಂತೆ, ರೌಡಿ ಆಸಾಮಿಗಳ ಚಟುವಟಿಕೆಗಳ ಮೇಲೆ ನಿಗಾವಹಿಸಿ, ರೌಡಿ ಶೀಟರ್ಗಳ ವಿರುದ್ದ ಗಡಿಪಾರು, ಗೂಂಡಾ ಕಾಯ್ದೆ ಮತ್ತು ಮುಂಜಾಗ್ರತಾ ಕ್ರಮದ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಸಂಘಟಿತ ಅಪರಾಧಗಳ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ, ಮಾದಕದ್ರವ್ಯ ಮಾರಾಟ ಮತ್ತು ಮಾದಕ ದ್ರವ್ಯ ವ್ಯಸನಿಗಳ ವಿರುದ್ದ ಹೆಚ್ಚಿನ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ದಾವಣಗೆರೆ ಪೂರ್ವ ವಲಯ ಡಿಐಜಿಪಿ ತ್ಯಾಗರಾಜನ್, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ – ಅನಿಲ್ ಕುಮಾರ್ ಭೂಮರಡ್ಡಿ, ಕಾರಿಯಪ್ಪ ಎ ಜಿ, ಪೊಲೀಸ್ – ಉಪಾಧೀಕ್ಷಕರಾದ ಕೃಷ್ಣಮೂರ್ತಿ, ಬಾಲರಾಜ್ ಬಿ, ಸುರೇಶ್ ಎಂ, ಗೋಪಾಲಕೃಷ್ಣ ಟಿ ನಾಯಕ್, ನಾಗರಾಜ್, ಶಿವಾನಂದ ಮದರ ಖಂಡಿ, ಸಹಾಯಕ ಆಡಳಿತಾಧಿಕಾರಿ ಸತೀಶ್ ಮತ್ತು ಜಿಲ್ಲೆಯ ಎಲ್ಲಾ – ಪೊಲೀಸ್ ನಿರೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ ಪೊಲೀಸ್ ಉಪ ನಿರೀಕ್ಷಕರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply