ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದ ಕಾರು: 6 ಜನರಿಗೆ ಗಂಭೀರ ಗಾಯ

ಶಿವಮೊಗ್ಗ : ಚಾಲಕನ ನಿಯಂತ್ರಣತಪ್ಪಿದ ಕಾರೊಂದು ಸೇತುವೆ ಮೇಲಿಂದ ಕೆಳಗೆ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಅಗರದಹಳ್ಳಿ ಬಳಿ ನಡೆದಿದೆ.

ಕುಟುಂಬವೊಂದು ಕಾರಿನಲ್ಲಿ ಕೊಲ್ಲೂರು, ಸಿಗಂದೂರು, ಜೋಗ ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ.

ಚಾಲಕನ ನಿಯಂತ್ರಣತಪ್ಪಿದ ಕಾರು ಸೇತುವೆಯಿಂದ ಕೆಳಗೆ ಬಿದ್ದಿದೆ.

ಘಟನೆಯಲ್ಲಿ ಮಕ್ಕಳು ಸೇರಿ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಬೆಳಗಿನ ಜಾವ 2:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.