ಚಿಕ್ಕಮಗಳೂರಿನಲ್ಲಿ ಆತಂಕಕಾರಿ ಘಟನೆ: ಮೆಡಿಕಲ್ ಶಾಪ್‌ನಲ್ಲಿ ಮಾತ್ರೆ ಖರೀದಿಸುತ್ತಿದ್ದಾಗ ಹೃದಯಾಘಾತದಿಂದ ವ್ಯಕ್ತಿ ಸಾವು!

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ದೀಪ ನರ್ಸಿಂಗ್‌ ಹೋಂ ಬಳಿಯ ಮೆಡಿಕಲ್ ಶಾಪ್‌ನಲ್ಲಿ ಮಾತ್ರೆ ಖರೀದಿಸುತ್ತಿದ್ದಾಗ, ವ್ಯಕ್ತಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಕಳೆದ ಶನಿವಾರ, ಜೂನ್ 26ರಂದು ನಡೆದಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ…

ಮೃತಪಟ್ಟವರನ್ನು ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ನಿವಾಸಿ, 60 ವರ್ಷದ **ವಿಶ್ವನಾಥ್** ಎಂದು ಗುರುತಿಸಲಾಗಿದೆ. ಮಾತ್ರೆ ತಿನ್ನಲು ನೀರು ಪಡೆದುಕೊಂಡು ಹಾಗೆಯೇ ಕುಸಿದು ಬಿದ್ದಿದ್ದಾರೆ. ವೈದ್ಯರು ಅವರನ್ನು ಪರೀಕ್ಷಿಸಿ, ಹೃದಯಾಘಾತದಿಂದ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

ಹೃದಯಾಘಾತ ಪ್ರಕರಣಗಳ ಆತಂಕಕಾರಿ ಏರಿಕೆ:

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ರಾಜ್ಯದಲ್ಲಿ ಆತಂಕಕಾರಿಯಾಗಿ ಹೆಚ್ಚುತ್ತಿದೆ. ಚಿಕ್ಕಮಗಳೂರು ತಾಲೂಕಿನಲ್ಲಿ ಕಳೆದ ಎರಡು ತಿಂಗಳ ಅವಧಿಯಲ್ಲಿ ಬರೋಬ್ಬರಿ 13 ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದಲ್ಲದೆ, ಕಳೆದ ಒಂದೂವರೆ ತಿಂಗಳಿನಲ್ಲಿ ಹಾಸನದಲ್ಲಿ ಕೂಡ 20ಕ್ಕೂ ಹೆಚ್ಚು ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಯಾವುದೇ ಪೂರ್ವ ಸೂಚನೆಯಿಲ್ಲದೆ ಏಕಾಏಕಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಜೀವನಶೈಲಿ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕು ಈ ರೀತಿಯ ಘಟನೆಗಳಿಗೆ ಕಾರಣವಾಗುತ್ತಿದೆಯೇ ಎಂಬ ಚರ್ಚೆಗಳು ಶುರುವಾಗಿವೆ. ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಮತ್ತು ನಿಯಮಿತ ತಪಾಸಣೆ ಮಾಡಿಸಿಕೊಳ್ಳುವುದು ಈಗಿನ ಅಗತ್ಯವಾಗಿದೆ.

ಆನಂದಪುರ: ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ! ಏನಿದು ಪ್ರಕರಣ?  ಪೂರ್ತಿ ಓದಲು ಕೆಳಗಿರುವ ಕ್ಲಿಕ್ ಮಾಡಿ

ಜಾಹಿರಾತು:

WhatsApp Number : 7795829207


Leave a Reply

Your email address will not be published.