Author: Jagadeesh Shipra (Jagadeesh Shipra)

Post
BREAKING NEWS : ಶಿವಮೊಗ್ಗದಲ್ಲಿ ಮತ್ತೆ ಪೊಲೀಸ್ ಫೈಯರ್ ! ಆರೋಪಿ ಕಾಲಿಗೆ ಗುಂಡೇಟು !

BREAKING NEWS : ಶಿವಮೊಗ್ಗದಲ್ಲಿ ಮತ್ತೆ ಪೊಲೀಸ್ ಫೈಯರ್ ! ಆರೋಪಿ ಕಾಲಿಗೆ ಗುಂಡೇಟು !

ಶಿವಮೊಗ್ಗ : ಶಿವಮೊಗ್ಗದಲ್ಲಿ ಮತ್ತೆ ಪೊಲೀಸ್ ಬಂದೋಕು ಸದ್ದು ಮಾಡಿದೆ. ತಾಲೂಕಿನ ಕುಂಸಿ ಠಾಣಾ ವ್ಯಾಪ್ತಿಯ ತ್ಯಾಜ್ಯವಳ್ಳಿ ಅರಣ್ಯದ ಬಳಿ ಬೆಳ್ಳಂಬೆಳಗ್ಗೆ ಪೊಲೀಸರು ಆರೋಪಿ ಕಾಲಿಗೆ ಗುಂಡು ಹೊಡೆದಿರುವ ಘಟನೆ ನಡೆದಿದೆ.  ಪೊಲೀಸರ ಗುಂಡೇಟಿನಿಂದ ಗಾಯಗೊಂಡಿರುವ ಆರೋಪಿ ರಜಾಕ್ ಎಂಬಾತನನ್ನ ಚಿಕಿತ್ಸೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ವಿನೋಬನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 109 ಬಿಎನ್ಎಸ್ (ಕೊಲೆ ಯತ್ನ) ಪ್ರಕರಣದಲ್ಲಿ ಬೇಕಿದ್ದ ಆರೋಪಿ ಹಾಗೂ ಎನ್‌ಡಿಪಿಎಸ್‌ ಆಕ್ಟ್‌ ಅಡಿಯಲ್ಲಿ ಮತ್ತು ಕೊಲೆಯತ್ನ ಪ್ರಕರಣವೂ ಸೇರಿದಂತೆ ಒಟ್ಟು ಐದು ಕೇಸ್‌ಗಳಲ್ಲಿ ಬೇಕಿದ್ದ...

Post
ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ ! ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು !

ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ ! ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು !

ಶಿವಮೊಗ್ಗ : ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್​ ಕೆಜಿ (41) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  ಬಿಜೆಪಿ ನಾಯಕ ಬಿಸಿ ಪಾಟೀಲ್ ಅವರ ದೊಡ್ಡ ಮಗಳ ಗಂಡ ಪ್ರತಾಪ್ ಕುಮಾರ್​ ಇಂದು (ಜುಲೈ 08) ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಲ್ಲಿಸಿ ವಿಷ ಸೇವಿಸಿದ್ದಾರೆ. ಇದನ್ನು ಗಮಿಸಿದ ಸ್ಥಳೀಯರು ಪ್ರತಾಪ್ ಕುಮಾರ್​ ನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದ್ರೆ,...

Post
ಎಮ್ಮೆಹಟ್ಟಿ ಗ್ರಾಮಕ್ಕೆ ಗೀತಾ-ಶಿವರಾಜಕುಮಾರ್ ದಂಪತಿ ಭೇಟಿ ! ಮೃತರ ಕುಟುಂಬಕ್ಕೆ ತಲಾ ಒಂದು ಲಕ್ಷ ಪರಿಹಾರ !

ಎಮ್ಮೆಹಟ್ಟಿ ಗ್ರಾಮಕ್ಕೆ ಗೀತಾ-ಶಿವರಾಜಕುಮಾರ್ ದಂಪತಿ ಭೇಟಿ ! ಮೃತರ ಕುಟುಂಬಕ್ಕೆ ತಲಾ ಒಂದು ಲಕ್ಷ ಪರಿಹಾರ !

ಶಿವಮೊಗ್ಗ : ಇತ್ತೀಚೆಗೆ ಹಾವೇರಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾಡಗಿಯಲ್ಲಿ ಮುಂಜಾನೆ 13 ಮಂದಿಯನ್ನು ಟಿಟಿ ವಾಹನ ಬಲಿ ತೆಗೆದುಕೊಂಡಿತ್ತು. ಟಿಟಿ ವಾಹನವನ್ನು 15 ದಿನಗಳ ಹಿಂದೆಯಷ್ಟೇ ಖರೀದಿಸಲಾಗಿತ್ತು ಎಂದು ತಿಳಿದುಬಂದಿತ್ತು. ವಾಹನದ ಪೂಜೆಗಾಗಿ ಕುಟುಂಬ ತೆರಳಿದ್ದು, ಪೂಜೆ ಮುಗಿಸಿಕೊಂಡು ಮರಳಿ ಬರುತ್ತಿರುವಾಗ ಈ ದುರ್ಘಟನೆ ಸಂಭವಿಸಿತ್ತು. .ಹಾವೇರಿ ಬಳಿ ಭೀಕರ ಅಪಘಾತದಲ್ಲಿ 13 ಜನ ಸಾವನ್ನಪ್ಪಿದವರ ಗ್ರಾಮವಾದ ಎಮ್ಮೆಹಟ್ಟಿ ಗ್ರಾಮಕ್ಕೆ ಶಿವಣ್ಣ ದಂಪತಿ ಭೇಟಿ ನೀಡಿದರು. ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮಕ್ಕೆ ನಟ ಶಿವರಾಜ್ ಕುಮಾರ್...

Post
ಕೊಳೆತ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ ! ಆರೋಪಿ ಬಂಧನ !

ಕೊಳೆತ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ ! ಆರೋಪಿ ಬಂಧನ !

ತೀರ್ಥಹಳ್ಳಿ : ಕಳೆದ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮೃತ ಯುವತಿಯನ್ನು ಪೂಜಾ ಎ.ಕೆ. (24) ಎಂದು ಗುರುತಿಸಲಾಗಿದ್ದು, ಹತ್ಯೆಆರೋಪಿಯಾದ ಮಣಿ ಎಂಬವರನ್ನು ಬಂಧಿಸಲಾಗಿದೆ. ಜೂ.30 ರಂದು ಪೂಜಾ ನಾಪತ್ತೆಯಾಗಿದ್ದು, ಬಳಿಕ ಅವರ ಮೃತದೇಹ ಪತ್ತೆಯಾಗಿದೆ. ನಾಲೂರು ಸಮೀಪದ ಮಣಿ ಎಂಬಾತ ಕತ್ತು ಹಿಸುಕಿ ಕೊಲೆ ಮಾಡಿ, ನಾಲೂರು ಸಮೀಪದ ಹೊಂಡದಲ್ಲಿ ಹಾಕಿರುವುದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ....

Post
ಆಲ್ಕೊಳದ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು !

ಆಲ್ಕೊಳದ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು !

ಶಿವಮೊಗ್ಗ : ನಗರದ ಅಲ್ಕೊಳದ ಸಮೀಪ ಇರುವ ಭಾರತೀಯ ಆಹಾರ ನಿಗಮದ ಕಚೇರಿಯ ಮುಂಭಾಗದ ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಅವಘಡದ ನಂತರ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ, ಕಾರಿನಲ್ಲಿದವರಿಗೂ ಯಾವುದೇ ತೊಂದರೆಯಾಗಿಲ್ಲ   ಕಾರಿನಲ್ಲಿದ್ದವರಿಗೆ ಯಾವುದೇ ತೊಂದರೆಯಾಗಿಲ್ಲ. ಅನಾಹುತದಿಂದ ಪಾರಾಗಿದ್ದಾರೆ. ಅವಘಡದ ನಂತರ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಸಂಭಾವ್ಯ ಅನಾಹುತವೊಂದು ತಪ್ಪಿದಂತಾಗಿದೆ ಎಂದು ಸ್ಥಳೀಯ...

Post
ಕಣ್ಮನ ಸೆಳೆಯುತ್ತಿದೆ ವಿಶ್ವ ವಿಖ್ಯಾತ ಜೋಗ ಜಲಪಾತ !  ಜೋಗದ ಸೌಂದರ್ಯಕ್ಕೆ ಮನಸೋತ ಪ್ರವಾಸಿಗರು !

ಕಣ್ಮನ ಸೆಳೆಯುತ್ತಿದೆ ವಿಶ್ವ ವಿಖ್ಯಾತ ಜೋಗ ಜಲಪಾತ ! ಜೋಗದ ಸೌಂದರ್ಯಕ್ಕೆ ಮನಸೋತ ಪ್ರವಾಸಿಗರು !

ಶಿವಮೊಗ್ಗ : ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ, ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ, ನಿತ್ಯ ಹರಿದ್ವರ್ಣವನದ ತೇಗ ಗಂಧ ತರುಗಳಲ್ಲಿ ನಿತ್ಯೋತ್ಸವ, ತಾಯಿ, ನಿತ್ಯೋತ್ಸವ ನಿನಗೆ….. ಜೋಗ ಜಲಪಾತವನ್ನು ನೋಡುವಾಗಲೆಲ್ಲ ಕನ್ನಡದ ಖ್ಯಾತ ಕವಿ ನಿಸಾರ್ ಅಹ್ಮದ್ ಅವರ ನಿತ್ಯೋತ್ಸವ ಕವನದ ಸಾಲುಗಳು ಕನ್ನಡಿಗರಿಗೆ ನೆನಪಾಗುತ್ತವೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ ಜಲಪಾತ ರುದ್ರ ರಮಣೀಯವಾಗಿ ಹರಿಯುತ್ತಿದ್ದು ಜೋಗದ ಸೌಂದರ್ಯಕ್ಕೆ ಪ್ರವಾಸಿಗರು ಮನಸೋತಿದ್ದಾರೆ. ಹಾಲ್ನೊರೆಯಂತೆ ಮೇಲಿಂದ ಕೆಳಭಾಗಕ್ಕೆ ಧುಮ್ಮಿಕ್ಕುತ್ತಿರುವ ದೃಶ್ಯ ಮನಸ್ಸಿಗೆ ಮುದ...

Post
ಬಂಜಾರ ಸಂಘದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಬಂಜಾರ ಸಂಘದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಶಿವಮೊಗ್ಗ : ತಾಲ್ಲೂಕು ಬಂಜಾರ ಸಂಘದ ವತಿಯಿಂದ 2024-25ನೇ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತ ಸಮಾಜದ ವಿದ್ಯಾರ್ಥಿ- ವಿದ್ಯಾರ್ಥಿನಿಯ ರಿಗೆ ಪ್ರತಿ ವರ್ಷದಂತೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ ಎಂದು ಸಂಘದ ಕಾರ್ಯದರ್ಶಿ ವಿನಾಯಕ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿ, ಶೇ.90ಕ್ಕಿಂತ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳು ಅಂಕಪಟ್ಟಿ, 2 ಭಾವಚಿತ್ರವನ್ನು ಜು. 15ರೊಳಗಾಗಿ ಸಂಘದ ಕಛೇರಿಗೆ ತಲುಪಿಸಬೇಕು ಎಂದರು. ಸಂಘವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಸಮಾಜಕ್ಕೆ...

Post
ಶಿವಮೊಗ್ಗದಲ್ಲಿ ಎರಡನೇ ಝೀಕಾ ವೈರಸ್ ಪ್ರಕರಣ ಪತ್ತೆ ! ಓರ್ವ ಯುವಕನಲ್ಲಿ ಸೋಂಕು ದೃಢ !

ಶಿವಮೊಗ್ಗದಲ್ಲಿ ಎರಡನೇ ಝೀಕಾ ವೈರಸ್ ಪ್ರಕರಣ ಪತ್ತೆ ! ಓರ್ವ ಯುವಕನಲ್ಲಿ ಸೋಂಕು ದೃಢ !

ಶಿವಮೊಗ್ಗ : ರಾಜ್ಯದಲ್ಲಿ ಡೆಂಘೀ ಅಟ್ಟಹಾಸದ ನಡುವೆ ಇದೀಗ ಮಹಾಮಾರಿ ಝೀಕಾ ವೈರಸ್ ಸೋಂಕು ಪತ್ತೆಯಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಝೀಕಾ ವೈರಸ್ ಮೊದಲ ಬಲಿ ಪಡೆದಿದೆ. ಇದರ ಬೆನ್ನಲ್ಲೇ ಜಿಲ್ಲೆಯಲ್ಲಿ ಮತ್ತೊಂದು ಝೀಕಾ ಪ್ರಕರಣ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಯುವಕರೊಬ್ಬರಲ್ಲಿ ಝೀಕಾ ಸೋಂಕು ದೃಢಪಟ್ಟಿದೆ.ಟ್ರಾವೆಲ್ ಹಿಸ್ಟ್ರಿ ಇಲ್ಲದ ಯುವಕನಿಗೆ ಝೀಕಾ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯ ಸಾಗರ ತಾಲೂಕಿನ ಗಾಂಧಿನಗರದ ಯುವಕನಲ್ಲಿ ಝೀಕಾ ವೈರಸ್ ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಶಿವಮೊಗ್ಗದ ಗಾಂಧಿನಗರದಲ್ಲಿ ಝೀಕಾ ವೈರಸ್ ಗೆ 74 ವರ್ಷದ...

Post
BREAKING NEWS : ಜವರಾಯನ ಅಟ್ಟಹಾಸ  : ಲಯನ್ ಸಫಾರಿ ಬಳಿ ಭೀಕರ ಅಪಘಾತ ! ಮೂರು ಮಂದಿ ಸ್ಥಳದಲ್ಲೇ ಸಾವು !

BREAKING NEWS : ಜವರಾಯನ ಅಟ್ಟಹಾಸ : ಲಯನ್ ಸಫಾರಿ ಬಳಿ ಭೀಕರ ಅಪಘಾತ ! ಮೂರು ಮಂದಿ ಸ್ಥಳದಲ್ಲೇ ಸಾವು !

ಶಿವಮೊಗ್ಗ : ತಾಲೂಕಿನ ಮುದ್ದಿನಕೊಪ್ಪದ ಟೈಗರ್ ಅಂಡ್ ಲಯನ್ ಸಫಾರಿ ಬಳಿ ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನೋವಾ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾ – ಮುಖಿ ಡಿಕ್ಕಿ ನಡೆದಿದ್ದು, ಶಿವಮೊಗ್ಗದಿಂದ ಸಾಗರ ಕಡೆಗೆ ಹೋಗುತ್ತಿದ್ದ ಇನ್ಹೋವಾ ಕಾರು ಹಾಗೂ ಆಯನೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್‌ ಕಾರಿನ ನಡುವೆ ಡಿಕ್ಕಿಯಾಗಿದೆ.  ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿದಿದ್ದು, ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು...

Post
ರಾಜ್ಯದಲ್ಲಿ ಝಿಕಾ ವೈರಸ್  ಗೆ ಮೊದಲ ಬಲಿ ! ಶಿವಮೊಗ್ಗದಲ್ಲಿ 74 ವರ್ಷದ ವೃದ್ಧ ಸಾವು ! ಡೆಂಗ್ಯೂ ಭೀತಿ ಬೆನ್ನಲ್ಲೇ ಝಿಕಾ ಆತಂಕ !

ರಾಜ್ಯದಲ್ಲಿ ಝಿಕಾ ವೈರಸ್ ಗೆ ಮೊದಲ ಬಲಿ ! ಶಿವಮೊಗ್ಗದಲ್ಲಿ 74 ವರ್ಷದ ವೃದ್ಧ ಸಾವು ! ಡೆಂಗ್ಯೂ ಭೀತಿ ಬೆನ್ನಲ್ಲೇ ಝಿಕಾ ಆತಂಕ !

ಶಿವಮೊಗ್ಗ : ರಾಜ್ಯದಲ್ಲಿ ಹೆಚ್ಚುತ್ತಿರುವ ಮಳೆಯಿಂದಾಗಿ ಈಗ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಇದರ ಬೆನ್ನಲ್ಲೆ, ಝೀಕಾ ವೈರಸ್ ಕೂಡ ರಾಜ್ಯಕ್ಕೆ ಒಕ್ಕರಿಸಿಕೊಂಡಿದ್ದು, ಇದೀಗ ಶಿವಮೊಗ್ಗದಲ್ಲಿ ಝೀಕಾ ವೈರಸ್ ಗೆ ವೃದ್ಧರೊಬ್ಬರೂ ಸಾವನ್ನಪ್ಪಿದ್ದಾರೆ. ಹೌದು ಶಿವಮೊಗ್ಗ ಜಿಲ್ಲೆಯ ಗಾಂಧಿ ನಗರದ ನಿವಾಸಿಯ ವೃದ್ಧರು ಜೂನ್ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದರು.ಜೂನ್ 21ರಂದು ಝೀಕಾ ವೈರಸ್ ಪತ್ತೆಯಾಗಿತ್ತು.ಹಾಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ವೃದ್ಧರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಡಿಸ್ಚಾರ್ಜ್ ಆಗಿದ್ದರು. ಅದಾದ ಬಳಿಕ ಕುಟುಂಬದವರು ಗುರುವಾರ ಮನೆಗೆ ಕರೆದುಕೊಂಡು...