ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವಿಡಿಯೋ ರಾಜ್ಯದೆಲ್ಲೆಡೆ ತೀವ್ರ ಸಂಚಲನ ಮೂಡಿಸಿದೆ. ಇದರ ಭಾಗವಾಗಿ ಜೆಡಿಎಸ್ ವರಿಷ್ಠ ರಿಂದ ಮೊದಲ ಕ್ರಮ ಜರುಗಿಸಲಾಗಿದೆಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ಮಹತ್ವದ ಆದೇಶ ನೀಡಿದ್ದಾರೆ. ಹಾಸನದಲ್ಲಿ ಹರಿದಾಡಿದ ಅಶ್ಲೀಲ ವಿಡಿಯೋ ಪ್ರಕರಣ ಜೆಡಿಎಸ್ ಪಕ್ಷದಲ್ಲಿ ಮುಜುಗರ ಹಾಗೂ ತೀವ್ರ ಸಂಚಲನ ಸೃಷ್ಟಿಸಿತ್ತು. ಸಂಸದ ಪ್ರಜ್ವಲ್ ರೇವಣ್ಣ...
Category: District News
BREAKING NEWS : ತಡರಾತ್ರಿ ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಲ್ಲಿ ಅಗ್ನಿ ಅವಘಡ ! ಧಗ ಧಗ ಹೊತ್ತಿ ಉರಿದ ಅಂಗಡಿ !
ಶಿವಮೊಗ್ಗ : ನಗರದ ಖಾಸಗಿ ಬಸ್ ನಿಲ್ದಾಣದಲ್ಲಿರುವ ಮೊಬೈಲ್ ಅಂಗಡಿಯೊಂದರಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಮೊಬೈಲ್ ಅಂಗಡಿಯಲ್ಲಿದ್ದ ಬೆಲೆಬಾಳುವ ವಸ್ತುಗಳು ಸುಟ್ಟುಕರಕಲಾಗಿವೆ ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಲ್ಲಿ ವಾಸಿಮ್ ಎಂಬುವರಿಗೆ ಸೇರಿದ ಮೊಬೈಲ್ ಅಂಗಡಿ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿದ್ದ ಕಂಪ್ಯೂಟರ್ ಹಾಗೂ ರಿಪೇರಿಗೆ ಬಂದ ಮೊಬೈಲ್ ಗಳು ಸೇರಿ ಸರಿ ಸುಮಾರು 4 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿ ಆಗಿದೆ. ವಿಡಿಯೋ ⬇️⬇️ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕುರಿತು ಶಿವಮೊಗ್ಗದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು ?
ಶಿವಮೊಗ್ಗ : ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ವೈರಲ್ ಕುರಿತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ್ದು, ಎಸ್ಐಟಿ ರಚನೆಯಾಗಿದೆ. ಯಾರು ತಪ್ಪು ಮಾಡಿದ್ದಾರೋ ಅವರು ಶಿಕ್ಷೆ ಅನುಭವಿಸಬೇಕು. ಈ ನೆಲದ ಕಾನೂನಿನಲ್ಲಿ ಯಾರೇ ತಪ್ಪು ಮಾಡಿದರೂ ತಲೆಬಾಗಲೇಬೇಕು ಎಂದು ಹೇಳಿದರು. ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಅನುಭವಿಸಲೇ ಬೇಕು. ಎಸ್ಐಟಿ(SIT) ರಚನೆಯಾಗಿದೆ ತನಿಖೆ ಮೂಲಕ ಸತ್ಯಾಂಶ ಹೊರ ಬರಲಿ. ಎಸ್ಐಟಿ ತಪ್ಪು ಸಾಬೀತು ಮಾಡಿದ್ರೆ...
ಮೆಂಟಲ್ ಸೂರಿ ಕೊಲೆ ಕೇಸ್ : ಮಗನಿಂದಲೇ ತಂದೆಯ ಹತ್ಯೆ ! ಮೃತನ ಮಗನೂ ಸೇರಿ ಮೂವರ ಬಂಧನ ! ಅಂದು ನಡೆದಿದ್ದೇನು ?
ಶಿವಮೊಗ್ಗ : ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಸೇರಿದಂತೆ ಪ್ರಮುಖ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರಿಗೆ ತಲೆನೋವು ತಂದಿಡುತ್ತಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಕಳೆದ ಶನಿವಾರ ಅಂದರೆ 20 ನೇ ತಾರೀಖು ಶಿವಮೊಗ್ಗ ನಗರದ ಬಾಪೂಜಿ ನಗರದ ಗಂಗಮ್ಮ ದೇವಸ್ಥಾನದ ಪಕ್ಕದಲ್ಲಿ ಕೊಲೆಯಾಗಿ ಬಿದ್ದಿದ್ದ ಸೂರಿಯನ್ನು ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್ನಿಂದ ಹೊಡೆದು ಕೊಲೆ ಮಾಡಲಾಗಿತ್ತು. ಎಲೆಕ್ಷನ್ ಟೈಂ ಆದ್ದರಿಂದ ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿತ್ತು. ಇದೀಗ ಪ್ರಕರಣದ ತಿರುಳನ್ನ ಇದೀಗ ಪೊಲೀಸರು ಹೊರತೆಗೆದಿದ್ದಾರೆ. ಪ್ರಕರಣದ...
ಆಕಸ್ಮಿಕ ಗೆಲುವಿನ ದುರಹಂಕಾರಿಗೆ ತಕ್ಕ ಪಾಠ ಕಲಿಸಬೇಕಿದೆ ! ಸಹೋದರನ ವಿರುದ್ಧ ಕುಮಾರ್ ಬಂಗಾರಪ್ಪ ವಾಗ್ದಾಳಿ !
ಸೊರಬ : ಅಕ್ಷರ ಜ್ಞಾನ ಇಲ್ಲದ ಅಜ್ಞಾನಿ, ದುರಹಂಕಾರ ಎನ್ನುವುದನ್ನು ಇಡೀ ದೇಹಕ್ಕೆ ಅಳವಡಿಸಿಕೊಂಡು ಮೆರೆಯುತ್ತಿರುವ ಇಲ್ಲಿನಶಾಸಕರಿಗೆ ಲೋಕಸಭಾಚುನಾವಣೆಯ ಮೂಲಕ ತಕ್ಕ ಪಾಠ ಕಲಿಸಬೇಕಿದೆ ಈ ಮೂಲಕ ತಾಲೂಕು ಮತ್ತು ಜಿಲ್ಲೆ ಶುದ್ದೀಕರಣವಾಗಬೇಕು ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ ತಮ್ಮ ಸಹೋದರ ಮಧು ಬಂಗಾರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಶನಿವಾರ ಪಟ್ಟಣದ ಬಿಜೆಪಿ ಕಚೇರಿಯ ಸಭಾಂಗಣ ದಲ್ಲಿಹಮ್ಮಿಕೊಂಡಿದ್ದತಾಲೂಕು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದುರಹಂಕಾರಕ್ಕೂ ಒಂದು ಮಿತಿ ಇರುತ್ತದೆ....
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಂಜುನಾಥ್ ನೇಮಕ.
ಆನಂದಪುರ : ಮಲಂದೂರು ಗ್ರಾಮದ ಮೊದಲನೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಂಜುನಾಥ್ ನೇಮಕವಾಗಿದ್ದಾರೆ ಆನಂದಪುರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಂಗ್ರೆಸ್ ಉಸ್ತುವಾರಿ ಆದಂತಹ ಸೋಮಶೇಖರ್ ಲಾವಿಗೆರೆ ನಿನ್ನೆ ಆನಂದಪುರದ ದಾಸಕೊಪ್ಪದಲ್ಲಿ ಗ್ರಾಮಸ್ಥರ ಸಭೆಯನ್ನು ಸೇರಿ ಅಲ್ಲಿ ಹೊಸ ಮಂತ್ರಿಮಂಡಲವನ್ನ್ನು ಗ್ರಾಮದಲ್ಲಿ ನಿರ್ಮಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಬಹು...
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು !
ಶಿವಮೊಗ್ಗ : ಕೋಣಂದೂರಿನಿಂದ ರೀಪ್ಪನ್ ಪೇಟೆ ಕಡೆಗೆ ಹೋಗುತಿದ್ದ ಬ್ರಿಜಾ ಕಾರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಕೋಣಂದೂರು ಬಳಿ ನಡೆದಿದೆ ಕೋಣಂದೂರಿನಿಂದ ರಿಪ್ಪನ್ ಪೇಟೆ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಮುಂಜಾನೆ 3 :15 ರ ಸುಮಾರಿಗೆ ಈ ಘಟನೆ ನಡೆದಿದ್ದು ಕಾರಿನಲ್ಲಿ ಇದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಗಿದ್ದಾರೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ...
ಹಾಸನದ ಯುವ ರಾಜಕಾರಣಿಯ ಲೈಂಗಿಕ ಹಗರಣ ಸರ್ಕಾರ ತನಿಖೆ ನಡೆಸಬೇಕು – ಆಯನೂರು ಮಂಜುನಾಥ್ !
ಶಿವಮೊಗ್ಗ : ಹಾಸನದ ಪ್ರತಿಷ್ಠಿತ ಕುಟುಂಬದ ರಾಜಕಾರಣಿಯೊಬ್ಬನ ಮೇಲೆ ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ಅತ್ಯಾಚಾರದ ಆರೋಪ ಕೇಳಿ ಬಂದಿದೆ. ಯುವ ರಾಜಕಾರಣಿಯೊಬ್ಬ ನೂರಾರು ಬಡ ಮಹಿಳೆಯರನ್ನು ಲೈಂಗಿಕ ಶೋಷಣೆಗೆ ಗುರಿಪಡಿಸಿದ್ದಾನೆ ಎಂಬ ಸುದ್ಧಿಗಳು ಹೊರಬರುತ್ತಿವೆ. ಇದು ಇಡೀ ನಾಗರೀಕ ಸಮಾಜವೇ ತಲೆತಗ್ಗಿಸುವಂತಹದ್ದು ಎಂದು ಹೇಳಿದರು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ನೇಹಾ ಹತ್ಯೆಯನ್ನ ಖಂಡಿಸುವ ನಾವು ಮನೆಕೆಲಸಕ್ಕೆ ಬಂದ ಹೆಣ್ಣುಮಗಳು ಕೈ ಮುಗಿದು ಕೇಳಿದರೂ ಅತ್ಯಾಚಾರ ನಡೆಯುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ...
ಬೈಕ್ ಗೆ ಡಿಕ್ಕಿ ಹೊಡೆದ ಜೆಸಿಬಿ ಓರ್ವ ಸಾವು ; ಮತ್ತೊಬ್ಬರ ಸ್ಥಿತಿ ಗಂಭೀರ !
ಸಾಗರ : ತಾಲೂಕಿನ ಆನಂದಪುರದಲ್ಲಿ ಬೈಕ್ ಗೆ ಜೆಸಿಬಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು ಒಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಆನಂದಪುರದ ಕೆರೆ ಏರಿ ಸಮೀಪ ಯುವಕರು ಬೈಕ್ ನಲ್ಲಿ ಚಲಿಸುತ್ತಿದ್ದಾಗ ಹೆದ್ದಾರಿ ರಸ್ತೆಗೆ ಜೆಸಿಬಿ ಚಾಲಕ ಅಜಾಗುರುಕತೆಯಿಂದ ಚಲಿಸುತ್ತಿದ್ದ ವೇಳೆ ಜೆಸಿಬಿಯ ಮುಂಭಾಗ ಚಲಿಸುತ್ತಿದ್ದ ವಾಹನ ಸವಾರರಿಗೆ ತಿವಿದಿದ್ದು ಇಬ್ಬರು ಸವಾರರ ಪರಿಸ್ಥಿತಿ ಗಂಭೀರವಾಗಿದ್ದು ತಕ್ಷಣ ಸ್ಥಳೀಯರು ಆನಂದಪುರದ ಆಸ್ಪತ್ರೆಗೆ ಸಾಗಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
ಕ್ಷುಲ್ಲಕ ಕಾರಣಕ್ಕೆ ಗಲಾಟೆ ! ಯುವಕನ ಮೇಲೆ ಚಾಕುವಿನಿಂದ ಹಲ್ಲೆ !
ಶಿವಮೊಗ್ಗ : ನಗರದ ಬುದ್ಧ ನಗರದಲ್ಲಿ ಇಬ್ಬರ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು, ಮತ್ತೋರ್ವ ಯುವಕನಿಗೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಬುದ್ಧ ನಗರದ ಮೂರನೇ ತಿರುವಿನಲ್ಲಿ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ ಅಜಯ್ ಕುಮಾರ್ ಎಂಬಾತನ ಮೇಲೆ ಲೋಹಿತ್ ಎಂಬ ಯುವಕನೊಬ್ಬ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ , ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...