ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಜಾಲಕ್ಕೆ ಬಲಿಯಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ಬರುತ್ತದೆ ಎಂದು ವಾಟ್ಸಾಪ್ ಮೂಲಕ ಬಂದ ಸಂದೇಶವನ್ನು ನಂಬಿ ಈ ವಂಚನೆ ನಡೆದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ನಗರದ ಬಿ.ಬಿ. ರಸ್ತೆಯ ನಿವಾಸಿ, 30 ವರ್ಷದ ವ್ಯಕ್ತಿಯೊಬ್ಬರು ಈ ವಂಚನೆಗೆ ಒಳಗಾಗಿದ್ದಾರೆ. ಒಟ್ಟಾರೆಯಾಗಿ, ಸೈಬರ್ ವಂಚಕರು ಇವರಿಂದ ಬರೋಬ್ಬರಿ ₹34,16,000...
ಪ.ಜಾತಿ/ಪ.ಪಂ. ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ವಿರುದ್ಧ ಆಕ್ರೋಶ: ವಜಾಕ್ಕೆ ಅಲೆಮಾರಿ ಸಮುದಾಯದ ಆಗ್ರಹ!
ಶಿವಮೊಗ್ಗ: ಕರ್ನಾಟಕ ರಾಜ್ಯ ಪ.ಜಾತಿ/ಪ.ಪಂ. ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಜಿ. ಪಲ್ಲವಿ ಅವರ ಹೇಳಿಕೆ ಹಾಗೂ ಅಲೆಮಾರಿ ಸಮುದಾಯದ ಮುಖಂಡರ ವಿರುದ್ಧ ದೂರು ದಾಖಲಿಸಿರುವ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಪಲ್ಲವಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ಮತ್ತು ಅವರ ವಿರುದ್ಧದ ದೂರನ್ನು ಹಿಂಪಡೆಯುವಂತೆ ಅಲೆಮಾರಿ ಸಮುದಾಯದವರು ಒತ್ತಾಯಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಘಟನೆ ಹಿನ್ನೆಲೆ: ದಿನಾಂಕ 05.07.2025 ರಂದು,...
ವಸತಿ ಶಾಲೆಗಳಲ್ಲಿ ಬಾಲ್ಯ ವಿವಾಹ, ಪೋಕ್ಸೋ ನಿಯಂತ್ರಣ: ಶಿಕ್ಷಕರಿಗೆ ‘ಮಿಷನ್ ಸುರಕ್ಷಾ’ ತರಬೇತಿ
ಶಿಕಾರಿಪುರ: ಬಾಲ್ಯ ವಿವಾಹಗಳು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುವಲ್ಲಿ ವಸತಿ ಶಾಲೆ ಹಾಗೂ ನಿಲಯಗಳ ಸಿಬ್ಬಂದಿ ಪಾತ್ರ ಅತ್ಯಂತ ನಿರ್ಣಾಯಕ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಎಚ್. ಗಣೇಶ್ ಒತ್ತಿ ಹೇಳಿದರು. ವಿದ್ಯಾರ್ಥಿನಿಯರ ಚಟುವಟಿಕೆಗಳ ಮೇಲೆ ಶಿಕ್ಷಕರು ನಿರಂತರ ನಿಗಾ ಇಡುವುದರಿಂದ ಇಂತಹ ಅಕ್ರಮಗಳನ್ನು ಪರಿಣಾಮಕಾರಿಯಾಗಿ ತಡೆಯಬಹುದು ಎಂದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಸೋಮವಾರ ಶಿಕಾರಿಪುರದಲ್ಲಿ ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಮಕ್ಕಳ...
ಸಾಗರದಲ್ಲಿ “ನೈತಿಕ ಪೊಲೀಸ್ ಗಿರಿ” ದರ್ಪ: ನಾಗರಿಕ ಸ್ವಾತಂತ್ರ್ಯದ ಮೇಲೆ ದಾಳಿ! ಮೂವರು ಸೆರೆ, ಪೊಲೀಸರ ಸ್ಪಷ್ಟ ಸಂದೇಶ
ಸಾಗರ: ಸಾಗರ ನಗರದಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ವರದಿಯಾಗಿದೆ. ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿಯನ್ನು ಅಡ್ಡಗಟ್ಟಿದ ಮೂವರನ್ನು ಪೊಲೀಸರು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಜುಲೈ 7ರ ಮಧ್ಯಾಹ್ನ 12 ಗಂಟೆಗೆ, ಸೊರಬದ ಕಾನಕೇರಿ ನಿವಾಸಿಯಾದ 19 ವರ್ಷದ ಯುವತಿಯೊಬ್ಬರು, ಸಾಗರದ ಶಾಹಿ ಗಾರ್ಮೆಂಟ್ಸ್ನಲ್ಲಿ ಕೆಲಸಕ್ಕೆ ತೆರಳಲು ತಮ್ಮ ಪರಿಚಯದ ಸ್ಪಂದನ್ ಎಂಬ ಯುವಕನೊಂದಿಗೆ ಸಾಗರದ ಯಡವರಸೆ ರೈಲ್ವೆ ಗೇಟ್ ಬಳಿ ಬೈಕಿನಲ್ಲಿ ಸಾಗುತ್ತಿದ್ದರು. ಈ ವೇಳೆ, ಆರು ಅಪರಿಚಿತರು...
ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಿಂದ 6 ವೈದ್ಯರ ವರ್ಗಾವಣೆ: ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ!
ಶಿವಮೊಗ್ಗ: ತಾಲ್ಲೂಕಿನ ಪ್ರಮುಖ ಸರ್ಕಾರಿ ಆಸ್ಪತ್ರೆಯಾದ ಜಯಚಾಮರಾಜೇಂದ್ರ (ಜೆಸಿ) ಆಸ್ಪತ್ರೆಯಿಂದ ಏಕಕಾಲದಲ್ಲಿ ಆರು ಪ್ರಮುಖ ವೈದ್ಯರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಿರ್ಧಾರದಿಂದ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಎದುರಾಗಿದ್ದು, ರೋಗಿಗಳಿಗೆ ತೊಂದರೆಯಾಗುವ ಆತಂಕ ಶುರುವಾಗಿದೆ. ವರ್ಗಾವಣೆಗೊಂಡ ವೈದ್ಯರು ಮತ್ತು ಪರಿಣಾಮ: ಜೆಸಿ ಆಸ್ಪತ್ರೆಯಿಂದ ವರ್ಗಾವಣೆಗೊಂಡ ವೈದ್ಯರ ಪಟ್ಟಿ ಹೀಗಿದೆ: ಡಾ. ಗಣೇಶ್ – ಮುಖ್ಯ ವೈದ್ಯಾಧಿಕಾರಿ ಡಾ. ಪ್ರಭಾಕರ್ – ಮಕ್ಕಳ ತಜ್ಞ ಡಾ. ಮಹಿಮಾ – ಕಣ್ಣಿನ ತಜ್ಞೆ...
ತುಂಗಾ ಎಡ/ಬಲ ದಂಡೆ ನಾಲೆಗಳಿಗೆ ನೀರು ಬಿಡುಗಡೆ: ರೈತರು ಮತ್ತು ಸಾರ್ವಜನಿಕರಿಗೆ ಎಚ್ಚರಿಕೆ!
ಶಿವಮೊಗ್ಗ: 2025-26ನೇ ಸಾಲಿನ ಮುಂಗಾರು ಬೆಳೆಗೆ ತುಂಗಾ ನಾಲಾ ವ್ಯಾಪ್ತಿಯ ರೈತರಿಗೆ ಮತ್ತು ಸಾರ್ವಜನಿಕರಿಗೆ ಪ್ರಮುಖ ಸೂಚನೆ. ಕಾರ್ಯಪಾಲಕ ಇಂಜಿನಿಯರ್, ಕ.ನೀ.ನಿ.ನಿ., ತುಂ.ಮೇ.ಯೋ.ವಿಭಾಗ ಇವರು ಹೊರಡಿಸಿರುವ ಪ್ರಕಟಣೆಯ ಪ್ರಕಾರ: ತುಂಗಾ ಎಡದಂಡೆ ನಾಲೆಯಲ್ಲಿ ದಿನಾಂಕ: 12.07.2025 ರಿಂದ ತುಂಗಾ ಬಲದಂಡೆ ನಾಲೆಯಲ್ಲಿ ದಿನಾಂಕ: 15.07.2025 ರಿಂದ ನೀರು ಹರಿಸಲಾಗುವುದು. ನೀರು ಹರಿಸುವ ಹಿನ್ನೆಲೆಯಲ್ಲಿ, ಅಚ್ಚುಕಟ್ಟು ರೈತರು ಹಾಗೂ ಸಾರ್ವಜನಿಕರು ಮುಖ್ಯ ನಾಲೆ ಹಾಗೂ ಉಪನಾಲೆಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡದಂತೆ ಎಚ್ಚರಿಕೆ ವಹಿಸಬೇಕು. ಜನ, ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ...
ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??
ಶಿವಮೊಗ್ಗ: ಜಿಲ್ಲೆಯ ರೈಲ್ವೆ ಕ್ಷೇತ್ರದಲ್ಲಿ ಕ್ರಾಂತಿಕಾರಿ ಅಭಿವೃದ್ಧಿಗಳನ್ನು ತಂದಿರುವ ಸಂಸದ ಬಿ.ವೈ. ರಾಘವೇಂದ್ರ ಅವರು ಮತ್ತೊಂದು ಶುಭ ಸುದ್ದಿಯನ್ನು ನೀಡಿದ್ದಾರೆ. ದೇಶದ ರೈಲ್ವೆ ಸಂಚಾರದಲ್ಲಿ ಸಂಚಲನ ಮೂಡಿಸಿರುವ ವಂದೇ ಭಾರತ್ ರೈಲು ಶಿವಮೊಗ್ಗಕ್ಕೆ ಆಗಮಿಸುವುದು ಬಹುತೇಕ ಖಚಿತವಾಗಿದೆ ಎಂದು ಸಂಸದರು ತಿಳಿಸಿದ್ದಾರೆ. ಇದನ್ನು ಓದಿ: ಶಾಕಿಂಗ್: ₹2 ಲಕ್ಷ ಸಾಲಕ್ಕೆ, ಹೆಂಡತಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ! 😱 ಈ ಕುರಿತು ಮಾಹಿತಿ ನೀಡಿದ ಸಂಸದರು, ಜನವರಿಯಲ್ಲಿ ಶಿವಮೊಗ್ಗದಲ್ಲಿ ರೈಲ್ವೆ ಕೋಚಿಂಗ್ ಡಿಪೋ ಉದ್ಘಾಟನೆಯಾಗಲಿದೆ. ಇದರ ಬೆನ್ನಲ್ಲೇ,...
ರಿಪ್ಪನ್ಪೇಟೆ: ಬೈಕ್ಗಳ ಮುಖಾಮುಖಿ ಡಿಕ್ಕಿ; ಪ್ರಭಾರ ಮುಖ್ಯಶಿಕ್ಷಕ ಮಂಜಯ್ಯ ದುರ್ಮರಣ
ರಿಪ್ಪನ್ಪೇಟೆ: ಶಿವಮೊಗ್ಗ ರಸ್ತೆಯ ಶಿವಮಂದಿರದ ಬಳಿ ಎರಡು ಬೈಕ್ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೋಟೆತಾರಿಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಮಂಜಯ್ಯ ಟಿ (59) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಮಂಜಯ್ಯ ಟಿ ಅವರು ಮೂಲತಃ ಹರಮಘಟ್ಟದವರಾಗಿದ್ದು, ಅರಸಾಳುವಿನಲ್ಲಿ ವಾಸವಾಗಿದ್ದರು. ಕೊಟೇತಾರಿಗ ಶಾಲೆಯಲ್ಲಿ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದರು. ಘಟನೆ ನಡೆದಿದ್ದು ಹೀಗೆ: ಕರ್ತವ್ಯ ಮುಗಿಸಿ ತಮ್ಮ ಟಿವಿಎಸ್ ಸ್ಟಾರ್ ಸಿಟಿ ಬೈಕ್ (KA14Z6775) ನಲ್ಲಿ ಅರಸಾಳು ಕಡೆಗೆ ತೆರಳುತ್ತಿದ್ದ ಮಂಜಯ್ಯ ಅವರಿಗೆ...
ಸಮುದಾಯದ ಸಹಭಾಗಿತ್ವದಿಂದ ಸ್ವಚ್ಛ ಪರಿಸರ ನಿರ್ಮಾಣ: ಹೊಸೂರಿನ ಆನಂದ್ ಹರಟೆ ಮಾದರಿ ಕಾರ್ಯ!
ಶಿವಮೊಗ್ಗ: ಆನಂದಪುರ, ಐಗಿನಬೈಲು ಗ್ರಾಮಗಳಲ್ಲೀಗ ಸ್ವಚ್ಛತೆ ಮತ್ತು ಸುರಕ್ಷತೆಯ ಹೊಳಪು ಪರಿಸರ ಸ್ವಚ್ಛತೆ ಎನ್ನುವುದು ಕೇವಲ ಭಾಷಣಗಳಿಗೆ ಸೀಮಿತವಾಗಬಾರದು, ಬದಲಿಗೆ ವಾಸ್ತವದಲ್ಲಿ ಅನುಷ್ಠಾನಗೊಳ್ಳಬೇಕು ಎಂಬುದನ್ನು ಹೊಸೂರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಆನಂದ್ ಹರಟೆ ಅವರು ಸ್ವತಃ ಮಾಡಿ ತೋರಿಸಿದ್ದಾರೆ. ಅವರ ಈ ಕಾರ್ಯವು ಈಗ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಆನಂದಪುರ ಸಮೀಪದ ಐಗಿನಬೈಲು ಗ್ರಾಮದ ಬಸ್ ನಿಲ್ದಾಣ, ಅಂಗನವಾಡಿ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಚೆನ್ನಮ್ಮಾಜಿ ಪ್ರೌಢಶಾಲೆ ಸಮೀಪ ಮತ್ತು ರಾಷ್ಟ್ರೀಯ ಹೆದ್ದಾರಿಯ ಅಂಚಿನಲ್ಲಿ ವಿಪರೀತವಾಗಿ...
ಶಿವಮೊಗ್ಗ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ (ಜು. 09) ವಿದ್ಯುತ್ ಕಡಿತ: ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ!
ಶಿವಮೊಗ್ಗ: ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-17 ಮತ್ತು 18ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು. 9 ರಂದು ಬೆಳಗ್ಗೆ 10ರಿಂದ ಸಂಜೆ 6 ರವರೆಗೆ ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಕೋರಿದ್ದಾರೆ. ನಿಮ್ಮ ಅನುಕೂಲಕ್ಕೆ ತಕ್ಕಂತೆ ಮುಂಚಿತವಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಲಾಗಿದೆ. ಇದನ್ನು ಓದಿ :...