ಟ್ರಂಪ್‌ಗೆ ತಿರುಗೇಟು ನೀಡಿದ ಎಲಾನ್ ಮಸ್ಕ್: “ನಿಮ್ಮ ಸ್ವಾತಂತ್ರ್ಯ ಮರಳಿ ನೀಡಲು ‘ಅಮೆರಿಕ ಪಾರ್ಟಿ’ ರಚಿಸಿದ್ದೇನೆ” ಎಂದ ಉದ್ಯಮಿ!

ಟ್ರಂಪ್‌ಗೆ ತಿರುಗೇಟು ನೀಡಿದ ಎಲಾನ್ ಮಸ್ಕ್: “ನಿಮ್ಮ ಸ್ವಾತಂತ್ರ್ಯ ಮರಳಿ ನೀಡಲು ‘ಅಮೆರಿಕ ಪಾರ್ಟಿ’ ರಚಿಸಿದ್ದೇನೆ” ಎಂದ ಉದ್ಯಮಿ!

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತರಾಗಿದ್ದ ವಿಶ್ವದ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಇದೀಗ ಅವರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. “ಅಮೆರಿಕ ಪಾರ್ಟಿ” ಹೆಸರಿನಲ್ಲಿ ಹೊಸ ರಾಜಕೀಯ ಪಕ್ಷವನ್ನು ರಚಿಸಿರುವುದಾಗಿ ಶನಿವಾರ ಪ್ರಕಟಿಸಿದ್ದಾರೆ. ಅಮೆರಿಕದ ಪ್ರಸ್ತುತ ಏಕಪಕ್ಷ ವ್ಯವಸ್ಥೆಗೆ ಸವಾಲೊಡ್ಡಲು ಈ ಪಕ್ಷವನ್ನು ಘೋಷಿಸಲಾಗಿದೆ ಎಂದು ಮಸ್ಕ್ ಹೇಳಿದ್ದಾರೆ. ಒಂದು ಕಾಲದಲ್ಲಿ ಟ್ರಂಪ್ ಪ್ರಚಾರಕ್ಕೆ ಅತಿ ಹೆಚ್ಚು ದೇಣಿಗೆ ನೀಡಿದ್ದ ಹಾಗೂ ಸರ್ಕಾರಿ ಕ್ಷಮತಾ ಇಲಾಖೆ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದ ಎಲಾನ್ ಮಸ್ಕ್, ಫೆಡರಲ್ ವೆಚ್ಚ ಕಡಿತ ಮತ್ತು ಸರ್ಕಾರಿ ಉದ್ಯೋಗ ಕಡಿತಗೊಳಿಸುವ ಉದ್ದೇಶ ಹೊಂದಿದ್ದರು. ಆದರೆ, ನಂತರ ಟ್ರಂಪ್ ಜೊತೆಗಿನ ಭಿನ್ನಾಭಿಪ್ರಾಯದಿಂದ ಬೇರ್ಪಟ್ಟಿದ್ದರು. “ನಿಮ್ಮ ಸ್ವಾತಂತ್ರ್ಯವನ್ನು ಮರಳಿ ನಿಮಗೆ ನೀಡುವ ಉದ್ದೇಶದಿಂದ ‘ಅಮೆರಿಕ ಪಾರ್ಟಿ’ಯನ್ನು ಇಂದು ರಚಿಸಲಾಗಿದೆ” ಎಂದು ಮಸ್ಕ್ ತಮ್ಮ ಎಕ್ಸ್ (ಹಿಂದಿನ ಟ್ವಿಟರ್) ಪೋಸ್ಟ್‌ನಲ್ಲಿ ಘೋಷಿಸಿದ್ದಾರೆ. “ಒಂದರಿಂದ ಎರಡು ಅಂಶಗಳಿಗೆ ನಿಮಗೆ ಹೊಸ ರಾಜಕೀಯ ಪಕ್ಷ ಅಗತ್ಯವಿದೆ; ನೀವು ಅದನ್ನು ಪಡೆದುಕೊಳ್ಳಿ. ನಾವು ದೇಶದಲ್ಲಿ ಹೊಂದಿರುವ...

ಮೊಹರಂ: ಹಿಂದೂ–ಮುಸ್ಲಿಮರ ಭಾವೈಕ್ಯತೆ ಸಂಕೇತ – ಆನಂದಪುರ ಭೋವಿ ಕಾಲೋನಿಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಭಾಗಿ

ಮೊಹರಂ: ಹಿಂದೂ–ಮುಸ್ಲಿಮರ ಭಾವೈಕ್ಯತೆ ಸಂಕೇತ – ಆನಂದಪುರ ಭೋವಿ ಕಾಲೋನಿಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಭಾಗಿ

ಆನಂದಪುರ: ಮೊಹರಂ ಹಬ್ಬವು ಇಂದಿಗೂ ಜನಸಮುದಾಯದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ, ಆಚರಣೆ, ಪರಂಪರೆ ಮತ್ತು ಸಾಂಸ್ಕೃತಿಕ ವೈಭವವನ್ನು ಉಳಿಸಿಕೊಂಡಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ತಾಲ್ಲೂಕಿನ ಆನಂದಪುರದ ಭೋವಿ ಕಾಲೋನಿ ಹಾಗೂ ಇಸ್ಲಾಂಪುರದಲ್ಲಿ ಶನಿವಾರ ನಡೆದ ಮೊಹರಂ ಹಬ್ಬದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮೊಹರಂ ಆಚರಣೆಯು ಹಿಂದೂ-ಮುಸ್ಲಿಮರ ಬಾಂಧವ್ಯ ಮತ್ತು ಸಹೋದರತ್ವವನ್ನು ಇನ್ನಷ್ಟು ಗಟ್ಟಿಗೊಳಿಸುತ್ತಿದೆ. ಪರಧರ್ಮ ಸಹಿಷ್ಣುತೆಯ ಭಾವನೆ ಸಮಾಜದಲ್ಲಿ ಜಾಗೃತಿ ಮೂಡಿಸಲು ಮೊಹರಂ ಪ್ರಮುಖ ಕಾರಣವಾಗಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು. ಚೋರರಿಗೊಂದು ಕಾಲ ಹಾಡಿಗೆ ಶಾಸಕರ ಹೆಜ್ಜೆ: ಆನಂದಪುರ ಭೋವಿ ಕಾಲೋನಿಯಲ್ಲಿ ನಡೆದ ಮೊಹರಂ ಉತ್ಸವದಲ್ಲಿ “ಚೋರರಿಗೊಂದು ಕಾಲ, ಶೂರಾರಿಗೊಂದು ಕಾಲ” ಎಂಬ ಹಾಡಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಎಲ್ಲರೊಂದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಇದನ್ನು ಓದಿ : ವಿಗ್ರಹ ವಿರೂಪ : ಶಾಸಕರ ವಿರಾಟ ರೂಪ:ವಿಘ್ನ ನಿವಾರಕನಿಗೆ ರಾಗಿಗುಡ್ಡದಲ್ಲಿ ವಿಘ್ನ ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ, ಕಠಿಣ ಕ್ರಮಕ್ಕೆ ಸೂಚನೆ! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್ ಪೂರ್ತಿ ಓದಲು...

ರಾಗಿಗುಡ್ಡದ ಅಕ್ರಮ ಕಟ್ಟಡ ತೆರವಿಗೆ ಮಾಜಿ ಡಿಸಿಎಂ ಈಶ್ವರಪ್ಪ ಖಡಕ್ ಸೂಚನೆ: ಆರೋಪಿಗಳ ಗಡಿಪಾರಿಗೆ ಆಗ್ರಹ!

ರಾಗಿಗುಡ್ಡದ ಅಕ್ರಮ ಕಟ್ಟಡ ತೆರವಿಗೆ ಮಾಜಿ ಡಿಸಿಎಂ ಈಶ್ವರಪ್ಪ ಖಡಕ್ ಸೂಚನೆ: ಆರೋಪಿಗಳ ಗಡಿಪಾರಿಗೆ ಆಗ್ರಹ!

ಶಿವಮೊಗ್ಗ: ರಾಗಿಗುಡ್ಡದ ಬಂಗಾರಪ್ಪನವರ ಕಾಲೋನಿಯಲ್ಲಿ ವಿಗ್ರಹಗಳ ಧ್ವಂಸಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲೇ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚನೆ: ದೇವಸ್ಥಾನದ ವಿಗ್ರಹಗಳನ್ನು ಒದ್ದು ಹಾನಿ ಮಾಡಿರುವ ಘಟನೆಯಿಂದ ರೊಚ್ಚಿಗೆದ್ದ ಈಶ್ವರಪ್ಪ, ಕೂಡಲೇ ವಿವಾದಿತ ಸ್ಥಳದ ಎದುರಿಗಿರುವ ಒತ್ತುವರಿ ಕಟ್ಟಡವನ್ನು ಮಹಾನಗರ ಪಾಲಿಕೆಯವರು ಶೀಘ್ರದಲ್ಲಿ ತೆರವುಗೊಳಿಸಬೇಕು ಎಂದು ಸ್ಥಳದಲ್ಲಿಯೇ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡರಿಗೆ ದೂರವಾಣಿ ಕರೆ ಮಾಡಿ ಸೂಚಿಸಿದರು. ಸೋಮವಾರ ಸಂಜೆಯೊಳಗೆ ತೆರವಿಗೆ ಭರವಸೆ: ಆಯುಕ್ತ ಮಾಯಣ್ಣ ಗೌಡರು ಮೊಬೈಲ್‌ನಲ್ಲಿ ಪ್ರತಿಕ್ರಿಯಿಸಿ, ಸೋಮವಾರ ಸಂಜೆಯೊಳಗೆ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಒಂದು ವೇಳೆ ಕಟ್ಟಡ ತೆರವುಗೊಳಿಸದಿದ್ದರೆ, ಹಿಂದೂ ಸಂಘಟನೆಗಳು ಹಾಗೂ ರಾಷ್ಟ್ರಭಕ್ತರ ಬಳಗ ಮುಂದಿನ ದಾರಿಯನ್ನು ಹುಡುಕಿಕೊಳ್ಳುತ್ತದೆ ಎಂದು ಈಶ್ವರಪ್ಪ ಎಚ್ಚರಿಕೆ ನೀಡಿದರು. ಇದನ್ನು ಓದಿ : ವಿಗ್ರಹ ವಿರೂಪ : ಶಾಸಕರ ವಿರಾಟ ರೂಪ:ವಿಘ್ನ ನಿವಾರಕನಿಗೆ ರಾಗಿಗುಡ್ಡದಲ್ಲಿ ವಿಘ್ನ ಸ್ಥಳಕ್ಕೆ ಶಾಸಕ ಚನ್ನಬಸಪ್ಪ...

ಜ್ಯೋತಿಷ್ಯದ ಪ್ರಕಾರ ಜುಲೈ 07, 2025 ರಿಂದ ಜುಲೈ 13, 2025 ರವರೆಗಿನ ನಿಮ್ಮ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾರಿಗೆ ಸವಾಲು? ಸಂಪೂರ್ಣ ಮಾಹಿತಿ ಇಲ್ಲಿದೆ. ನಿಮ್ಮ ವಾರವನ್ನು ಉತ್ತಮವಾಗಿ ಯೋಜಿಸಿಕೊಳ್ಳಿ!

ಜ್ಯೋತಿಷ್ಯದ ಪ್ರಕಾರ ಜುಲೈ 07, 2025 ರಿಂದ ಜುಲೈ 13, 2025 ರವರೆಗಿನ ನಿಮ್ಮ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾರಿಗೆ ಸವಾಲು? ಸಂಪೂರ್ಣ ಮಾಹಿತಿ ಇಲ್ಲಿದೆ. ನಿಮ್ಮ ವಾರವನ್ನು ಉತ್ತಮವಾಗಿ ಯೋಜಿಸಿಕೊಳ್ಳಿ!

ಈ ವಾರ ಗ್ರಹಗಳ ಸ್ಥಾನಪಲ್ಲಟಗಳು ನಿಮ್ಮ ಜೀವನದ ಮೇಲೆ ಹೇಗೆ ಪ್ರಭಾವ ಬೀರಲಿವೆ? ಆರೋಗ್ಯ, ಹಣಕಾಸು, ವೃತ್ತಿ, ಸಂಬಂಧಗಳು ಮತ್ತು ವೈಯಕ್ತಿಕ ಬೆಳವಣಿಗೆಗೆ ಸಂಬಂಧಿಸಿದಂತೆ ಪ್ರತಿಯೊಂದು ರಾಶಿಯವರಿಗೆ ನಿರ್ದಿಷ್ಟ ಸಲಹೆಗಳು ಇಲ್ಲಿವೆ. ನಿಮ್ಮ ಅದೃಷ್ಟದ ಬಾಗಿಲು ತೆರೆಯಲು ಮತ್ತು ಸವಾಲುಗಳನ್ನು ಎದುರಿಸಲು ಸಿದ್ಧರಾಗಿ!   ♈ ಮೇಷ ರಾಶಿ (Aries): ಈ ವಾರ ನಿಮಗೆ ಹೊಸ ಅವಕಾಶಗಳು ಮತ್ತು ಸವಾಲುಗಳನ್ನು ತರಲಿದೆ. ನಿಮ್ಮ ಶಕ್ತಿ ಮತ್ತು ಉತ್ಸಾಹದಿಂದ ಸವಾಲುಗಳನ್ನು ಯಶಸ್ವಿಯಾಗಿ ನಿಭಾಯಿಸುವಿರಿ. ವೃತ್ತಿ ಮತ್ತು ಹಣಕಾಸು: ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಪ್ರಯತ್ನಗಳಿಗೆ ತಕ್ಕ ಪ್ರತಿಫಲ ದೊರೆಯಲಿದೆ. ಹೊಸ ಯೋಜನೆಗಳನ್ನು ಕೈಗೊಳ್ಳಲು ಇದು ಉತ್ತಮ ಸಮಯ. ವ್ಯಾಪಾರಸ್ಥರಿಗೆ ಲಾಭದ ಸಾಧ್ಯತೆಗಳಿವೆ. ಹಣಕಾಸಿನ ಹೂಡಿಕೆಗಳ ಬಗ್ಗೆ ಯೋಚಿಸಬಹುದು, ಆದರೆ ತಜ್ಞರ ಸಲಹೆ ಪಡೆಯುವುದು ಉತ್ತಮ. ಸಂಬಂಧಗಳು: ವೈಯಕ್ತಿಕ ಸಂಬಂಧಗಳಲ್ಲಿ ಸಾಮರಸ್ಯ ಇರುತ್ತದೆ. ಕುಟುಂಬದ ಸದಸ್ಯರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಪ್ರೀತಿಪಾತ್ರರೊಂದಿಗಿನ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಿ. ಆರೋಗ್ಯ: ಆರೋಗ್ಯದ ಬಗ್ಗೆ ಹೆಚ್ಚು ಗಮನವಿರಲಿ. ಸಣ್ಣಪುಟ್ಟ...

ವಿಗ್ರಹ ವಿರೂಪ : ಶಾಸಕರ ವಿರಾಟ ರೂಪ:ವಿಘ್ನ ನಿವಾರಕನಿಗೆ ರಾಗಿಗುಡ್ಡದಲ್ಲಿ ವಿಘ್ನ ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ, ಕಠಿಣ ಕ್ರಮಕ್ಕೆ ಸೂಚನೆ!

ವಿಗ್ರಹ ವಿರೂಪ : ಶಾಸಕರ ವಿರಾಟ ರೂಪ:ವಿಘ್ನ ನಿವಾರಕನಿಗೆ ರಾಗಿಗುಡ್ಡದಲ್ಲಿ ವಿಘ್ನ ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ, ಕಠಿಣ ಕ್ರಮಕ್ಕೆ ಸೂಚನೆ!

ಶಿವಮೊಗ್ಗ : ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ನಡೆದ ಗಣಪತಿ ಮತ್ತು ನಾಗರ ವಿಗ್ರಹ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಶಿವಮೊಗ್ಗ ನಗರ ಶಾಸಕರಾದ ಶ್ರೀ ಚನ್ನಬಸಪ್ಪನವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕೃತ್ಯದ ಹಿಂದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ರಕ್ಷಣಾ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಜಾಹಿರಾತು: ಇದನ್ನು ಓದಿ : ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು!!ಪೂರ್ತಿ ಓದಲು ಕ್ಲಿಕ್ ಮಾಡಿ. ಘಟನೆಯ ಕುರಿತು ಸ್ಥಳೀಯರೊಂದಿಗೆ ಮಾತನಾಡಿದ ಶಾಸಕ ಚನ್ನಬಸಪ್ಪನವರಿಗೆ ಆಘಾತಕಾರಿ ಮಾಹಿತಿ ಲಭ್ಯವಾಗಿದೆ. ದ್ವಂಸಗೊಳಿಸಲಾದ ದೇವರ ವಿಗ್ರಹಗಳ ಎದುರು ಭಾಗದಲ್ಲಿರುವ ಅನ್ಯಕೋಮಿನ ಮನೆ ಅಕ್ರಮವಾಗಿ ನಿರ್ಮಿಸಿದ್ದು, ಆ ಮನೆಯ ನಿವಾಸಿಗಳು ಪ್ರತಿದಿನ ಬೆಳಗ್ಗೆ ಎದ್ದ ಕೂಡಲೇ ಈ ದೇವರ ವಿಗ್ರಹಗಳನ್ನು ನೋಡಬೇಕಾಗುತ್ತದೆ ಎಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, “ಅವರಿಗೆ ತೊಂದರೆಯಾದರೆ, ಅವರು...

ಶಿವಮೊಗ್ಗದ ರಾಗಿಗುಡ್ಡದಲ್ಲಿ ಗಣಪತಿ ವಿಗ್ರಹಕ್ಕೆ ಅಪಮಾನ: ಸ್ಥಳದಲ್ಲಿ ಬಿಗುವಿನ ವಾತಾವರಣ!

ಶಿವಮೊಗ್ಗದ ರಾಗಿಗುಡ್ಡದಲ್ಲಿ ಗಣಪತಿ ವಿಗ್ರಹಕ್ಕೆ ಅಪಮಾನ: ಸ್ಥಳದಲ್ಲಿ ಬಿಗುವಿನ ವಾತಾವರಣ!

ಶಿವಮೊಗ್ಗ : ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕೆಲವು ಕಿಡಿಗೇಡಿಗಳು ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕೃತ್ಯದಿಂದಾಗಿ ಪ್ರದೇಶದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಜಾಹಿರಾತು: ಇದನ್ನು ಓದಿ : ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು!!ಪೂರ್ತಿ ಓದಲು ಕ್ಲಿಕ್ ಮಾಡಿ. ಘಟನೆಯ ಕುರಿತು ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಜಿ.ಕೆ.ಮಿಥುನ್ ಕುಮಾರ್, ಶಿವಮೊಗ್ಗ ಸಬ್ ಡಿವಿಜನ್-2 ಡಿವೈಎಸ್ಪಿ ಸಂಜೀವ್ ಕುಮಾರ್, ಶಿವಮೊಗ್ಗ ಗ್ರಾಮಾಂತರ ಠಾಣೆ ಪಿಐ ಸತ್ಯನಾರಾಯಣ ಮತ್ತು ಜಯನಗರ ಠಾಣೆ ಪಿಐ ಸಿದ್ದೇಗೌಡ ಭೇಟಿ ನೀಡಿದ್ದಾರೆ. ಸ್ಥಳೀಯರೊಂದಿಗೆ ಮಾತನಾಡಿದ ಹಿರಿಯ ಪೊಲೀಸ್ ಅಧಿಕಾರಿಗಳು, ದೂರು ನೀಡುವಂತೆ ಸೂಚಿಸಿದ್ದು, ತಪ್ಪಿತಸ್ಥರನ್ನು ಶೀಘ್ರವೇ ಬಂಧಿಸುವುದಾಗಿ ಭರವಸೆ ನೀಡಿದ್ದಾರೆ. ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳದಂತೆ ತಡೆಯಲು ಬಂಗಾರಪ್ಪ ಬಡಾವಣೆಯಲ್ಲಿ ಬಿಗಿ...

ಅರಣ್ಯ ಇಲಾಖೆಯಲ್ಲಿ 6000 ಹುದ್ದೆಗಳ ಭರ್ತಿ ಶೀಘ್ರ: ಸಚಿವ ಈಶ್ವರ ಖಂಡ್ರೆ ಘೋಷಣೆ!

ಅರಣ್ಯ ಇಲಾಖೆಯಲ್ಲಿ 6000 ಹುದ್ದೆಗಳ ಭರ್ತಿ ಶೀಘ್ರ: ಸಚಿವ ಈಶ್ವರ ಖಂಡ್ರೆ ಘೋಷಣೆ!

ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ ಬಲಪಡಿಸಲು ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6000 ಖಾಯಂ ಹಾಗೂ ಗುತ್ತಿಗೆ ಆಧಾರಿತ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ. ಇತ್ತೀಚೆಗೆ 341 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, 540 ಹುದ್ದೆಗಳ ಭರ್ತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಜಾಹಿರಾತು: ಇದನ್ನು ಓದಿ : ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು!!ಪೂರ್ತಿ ಓದಲು ಕ್ಲಿಕ್ ಮಾಡಿ. ಅರಣ್ಯ ಸಿಬ್ಬಂದಿಗೆ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ವೇತನ ಪಾವತಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅರಣ್ಯ ಭೂಮಿ ಒತ್ತುವರಿ ತೆರವು ಮತ್ತು ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಕ್ರಮ ರಾಜ್ಯದಲ್ಲಿ 2 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, ಬೆಂಗಳೂರಿನಲ್ಲಿ 248 ಎಕರೆ ಅರಣ್ಯ ಭೂಮಿಯನ್ನು ಒತ್ತುವರಿಯಿಂದ ಮುಕ್ತಗೊಳಿಸಲಾಗಿದೆ. ಒಟ್ಟು 6231 ಎಕರೆ ಅರಣ್ಯ ಭೂಮಿ (ಸುಮಾರು 10,000 ಕೋಟಿ ರೂ....

ಜೀವನದಲ್ಲಿ ಒಮ್ಮೆಯಾದರೂ ಭೇಟಿ ನೀಡಲೇಬೇಕಾದ 11 ಪವಿತ್ರ ಜ್ಯೋತಿರ್ಲಿಂಗಗಳು! ಆಧ್ಯಾತ್ಮಿಕ ಭಾರತ ದರ್ಶನ – ಶಿವಮೊಗ್ಗ ಎಕ್ಸ್‌ಪ್ರೆಸ್‌ನ್ಯೂಸ್ ವಿಶೇಷ ವರದಿ

ಜೀವನದಲ್ಲಿ ಒಮ್ಮೆಯಾದರೂ ಭೇಟಿ ನೀಡಲೇಬೇಕಾದ 11 ಪವಿತ್ರ ಜ್ಯೋತಿರ್ಲಿಂಗಗಳು! ಆಧ್ಯಾತ್ಮಿಕ ಭಾರತ ದರ್ಶನ – ಶಿವಮೊಗ್ಗ ಎಕ್ಸ್‌ಪ್ರೆಸ್‌ನ್ಯೂಸ್ ವಿಶೇಷ ವರದಿ

ಹಿಂದೂ ಧರ್ಮದ ಶಕ್ತಿ ಮತ್ತು ಆಧ್ಯಾತ್ಮಿಕ ಪರಂಪರೆಯ ಪ್ರತೀಕವಾಗಿರುವ ಜ್ಯೋತಿರ್ಲಿಂಗಗಳು, ಸ್ವತಃ ಪರಶಿವನು ತನ್ನ ದೈವಿಕ ಪ್ರಕಾಶವನ್ನು ವ್ಯಕ್ತಪಡಿಸಿದ ಪವಿತ್ರ ಕ್ಷೇತ್ರಗಳಾಗಿವೆ. ಇಡೀ ಭಾರತದ ಭೂಮಿಯ ಮೇಲೆ ಹರಡಿರುವ ಈ ಜ್ಯೋತಿರ್ಲಿಂಗಗಳು, ಭಕ್ತರಿಗೆ ಮೋಕ್ಷದ ಹಾದಿ ಮಾತ್ರವಲ್ಲದೆ, ದೇಶದ ವೈವಿಧ್ಯಮಯ ಸಂಸ್ಕೃತಿ ಮತ್ತು ಭೌಗೋಳಿಕ ಸೌಂದರ್ಯವನ್ನು ಅನಾವರಣಗೊಳಿಸುವ “ಭಾರತ್ ದರ್ಶನ” ವನ್ನು ನೀಡುತ್ತವೆ. ಶಿವಮೊಗ್ಗ ಎಕ್ಸ್‌ಪ್ರೆಸ್‌ನ್ಯೂಸ್ ನಿಮ್ಮೆದುರಿಗೆ ಪ್ರಸ್ತುತಪಡಿಸುತ್ತಿರುವ ಈ ವಿಶೇಷ ಲೇಖನದಲ್ಲಿ, ನಿಮ್ಮ ಜೀವನದಲ್ಲಿ ಕನಿಷ್ಠ ಒಮ್ಮೆಯಾದರೂ ಭೇಟಿ ನೀಡಲೇಬೇಕಾದ 11 ಪ್ರಮುಖ ಜ್ಯೋತಿರ್ಲಿಂಗಗಳ ಮಹತ್ವ, ವೈಶಿಷ್ಟ್ಯ ಮತ್ತು ಅವುಗಳ ಹಿನ್ನೆಲೆ ವಿವರ ಇದೆ. ಈ ಯಾತ್ರೆಗಳು ಕೇವಲ ಭಕ್ತಿಯ ಹಾದಿಯಲ್ಲ, ಬದಲಿಗೆ ಭಾರತದ ಆತ್ಮವನ್ನು ಅರ್ಥಮಾಡಿಕೊಳ್ಳುವ ಒಂದು ಅದ್ಭುತ ಅನುಭವ. 1. ಸೋಮನಾಥ ಜ್ಯೋತಿರ್ಲಿಂಗ, ಗುಜರಾತ್ ಸ್ಥಳ: ಗುಜರಾತ್‌ನ ಗಿರ್ ಸೋಮನಾಥ್ ಜಿಲ್ಲೆಯ ಪ್ರಭಾಸ ಪಾಟಣ್. ಮಹತ್ವ: ಇದು ಭೂಮಿಯ ಮೇಲಿನ ಮೊದಲ ಜ್ಯೋತಿರ್ಲಿಂಗವೆಂದು ಪರಿಗಣಿಸಲಾಗಿದೆ. ಅರೇಬಿಯನ್ ಸಮುದ್ರದ ತೀರದಲ್ಲಿ ನೆಲೆಗೊಂಡಿರುವ ಈ ದೇವಾಲಯವು ಅದೆಷ್ಟೋ ಬಾರಿ ಧ್ವಂಸಗೊಂಡು...

ಹೊಸನಗರದಲ್ಲಿ ನಾಳೆ (ಜುಲೈ 5 ರಂದು) ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ!

ಹೊಸನಗರದಲ್ಲಿ ನಾಳೆ (ಜುಲೈ 5 ರಂದು) ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ!

ಹೊಸನಗರ : ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಾಳೆಯು ಕೂಡ, ಜುಲೈ 5, 2025 ರಂದು ಅಂಗನವಾಡಿ, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.   ತಹಸೀಲ್ದಾರ್ ರಶ್ಮಿ ಹಾಲೇಶ್ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ರಜೆ ನೀಡಲಾಗಿದೆ. ಪ್ರಮುಖ ಸೂಚನೆ: ರಜೆಯ ಕಾರಣದಿಂದ ತಪ್ಪಿಹೋಗುವ ಪಾಠ ಪ್ರವಚನಗಳನ್ನು ಮುಂದಿನ ರಜಾ ದಿನಗಳಲ್ಲಿ ನಡೆಸುವ ಮೂಲಕ ಸರಿದೂಗಿಸಿಕೊಳ್ಳಲು ಆದೇಶದಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್‌ಪ್ರೆಸ್ ನ್ಯೂಸ್ ವೀಕ್ಷಿಸುತ್ತಿರಿ! ಇದನ್ನು ಓದಿ : ರೈಲ್ವೆ ನೇಮಕಾತಿ 2025: SSLC, ITI, ಪದವೀಧರರಿಗೆ 6180 ಟೆಕ್ನೀಷಿಯನ್ ಹುದ್ದೆಗಳ ಬೃಹತ್ ಅವಕಾಶ! ಕರ್ನಾಟಕದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಜಾಹಿರಾತು: WhatsApp Number : 7795829207

ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ: ಶಿವಮೊಗ್ಗ ಜಿಲ್ಲೆಯ 8 ಗ್ರಾಮಗಳಿಗೆ ಅವಕಾಶ!

ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ: ಶಿವಮೊಗ್ಗ ಜಿಲ್ಲೆಯ 8 ಗ್ರಾಮಗಳಿಗೆ ಅವಕಾಶ!

ಶಿವಮೊಗ್ಗ: ರಾಜ್ಯದ ಜನತೆಗೆ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಗುರಿಯೊಂದಿಗೆ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಶಿವಮೊಗ್ಗ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಈ ಕೇಂದ್ರಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದೆ. ಅದರಂತೆ, ತೀರ್ಥಹಳ್ಳಿ ತಾಲ್ಲೂಕಿನ ನಾಲೂರು (ಕೊಳಗಿ), ಶೆಡ್ಡಾರು, ಹಾರೊಗುಳಿಗೆ, ಸಾಗರ ತಾಲ್ಲೂಕಿನ ಎಸ್.ಎಸ್.ಬೋಗ್, ಹೀರೆನೆಲ್ಲೂರ ಹಾಗೂ ಹೊಸನಗರ ತಾಲ್ಲೂಕಿನ ಯದೂರು, ತ್ರಿನಿವೆ, ರಿಪ್ಪನ್‌ಪೇಟೆ ಗ್ರಾಮಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಬಹುದು. ಈ ಕೇಂದ್ರಗಳನ್ನು ಸ್ಥಾಪಿಸಲು ಆಸಕ್ತಿ ಹೊಂದಿರುವವರು ಜುಲೈ 15, 2025 ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿ ಪಡೆಯಲು, ಆಸಕ್ತರು [https://www.karnatakaone.gov.in/Public/GramOneFranchiseeTrems]  ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ಅಪರ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ. ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರದ ಸೇವೆಗಳನ್ನು ಇನ್ನಷ್ಟು ಸುಲಭವಾಗಿ ತಲುಪಿಸಲು ಈ ಗ್ರಾಮ ಒನ್ ಕೇಂದ್ರಗಳು ಸಹಕಾರಿಯಾಗಲಿವೆ. ಆಸಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಇದನ್ನು...