BREAKING NEWS : ಶಿವಮೊಗ್ಗ ಡಬಲ್ ಮರ್ಡರ್ ಕೇಸ್ ! ಹಲ್ಲೆಗೊಳಗಾಗಿದ್ದ  ರೌಡಿಶೀಟರ್ ಯಾಸಿನ್ ಖುರೇಶಿ ಕೂಡ  ಸಾವು !

BREAKING NEWS : ಶಿವಮೊಗ್ಗ ಡಬಲ್ ಮರ್ಡರ್ ಕೇಸ್ ! ಹಲ್ಲೆಗೊಳಗಾಗಿದ್ದ ರೌಡಿಶೀಟರ್ ಯಾಸಿನ್ ಖುರೇಶಿ ಕೂಡ ಸಾವು !

ಶಿವಮೊಗ್ಗ : ನಿನ್ನೆ ಸಂಜೆ 5:30ರ ಸುಮಾರಿಗೆ ಇಡೀ ಶಿವಮೊಗ್ಗ ನಗರವೇ ಬೆಚ್ಚಿ ಬೀಳಿಸುವ ಭಯಾನಕ ಘಟನೆ ಒಂದು ನಡೆದಿತ್ತು. ಎರಡು ಗ್ಯಾಂಗ್ ಗಳ ನಡುವೆ ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ನಲ್ಲಿ ಇಬ್ಬರೂ ರೌಡಿ ಶೀಟರ್ ಗಳ ನಡುವೆ ಗ್ಯಾಂಗ್ ವಾರ್ ನಡೆದಿತ್ತು. ಘಟನೆಯಲ್ಲಿ ಇಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ನಡುವೆ ನೆನ್ನೆ ಹಲ್ಲೆಗೊಳಗಾಗಿ ಗಂಭೀರ ಗಾಯಗೊಂಡಿದ್ದ ರೌಡಿಶೀಟರ್ ಯಾಸಿನ್ ಖುರೇಶಿ ಕೂಡ ತಡರಾತ್ರಿ ಸಾವನ್ನಪ್ಪಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ ಸಂಜೆ 5 : 30ರ ಸುಮಾರಿಗೆ ಲಷ್ಕರ್ ಮೊಹಲ್ಲಕ್ಕೆ ಬಂದ ಗ್ಯಾಂಗ್ ಒಂದು ರೌಡಿಶೀಟರ್ ಯಾಸಿನ್ ಕುರೇಶಿ ಮೇಲೆ ಅಟ್ಯಾಕ್ ಮಾಡಿದೆ. ಈ ಸಂದರ್ಭದಲ್ಲಿ ಅಲ್ಲೇ ಇದ್ದ ಯಾಸಿನ್ ಕುರೇಶಿ ಗ್ಯಾಂಗ್ ಅಟ್ಯಾಕ್ ಮಾಡಲು ಬಂದವರ ಮೇಲೆ ಪ್ರತಿ ದಾಳಿ ನಡೆಸಿದ್ದಾರೆ. ಈ ವೇಳೆ ಎದುರಾಳಿ ಗ್ಯಾಂಗ್ ನ ಕೆಆರ್ ಪುರಂ ನ ನಿವಾಸಿ ಶೋಯೆಬ್ಅಲಿಯಾಸ್‌ ಖಲಂದರ್ ಅಲಿಯಾಸ್ ಸೇಬು (32) ಮತ್ತು ಅಣ್ಣನಗರ...

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ ! ಶಿವಮೊಗ್ಗಕ್ಕೆ ತೃತೀಯ ಸ್ಥಾನ ! ಫಲಿತಾಂಶ ಹೀಗೆ ಚೆಕ್ ಮಾಡಿ.

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ ! ಶಿವಮೊಗ್ಗಕ್ಕೆ ತೃತೀಯ ಸ್ಥಾನ ! ಫಲಿತಾಂಶ ಹೀಗೆ ಚೆಕ್ ಮಾಡಿ.

ಶಿವಮೊಗ್ಗ : 2023-2024ನೇ ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಈ ಬಾರಿ ಮಾರ್ಚ್​ 25 ರಿಂದ ಏಪ್ರಿಲ್​ 6ರವರೆಗೆ ಪರೀಕ್ಷೆ ನಡೆದಿತ್ತು, ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು 8.69 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು. ಕರ್ನಾಟಕದಲ್ಲಿ ಈ ಸಲ ಎಸ್ಎಸ್‌ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 4.41 ಲಕ್ಷ ಬಾಲಕರು, 4.28 ಬಾಲಕಿಯರು. ಅಲ್ಲದೆ, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 5,424 ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು ಕರ್ನಾಟಕದ 2,750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು...

ಲಷ್ಕರ್ ಮೊಹಲ್ಲಾ ಡಬ್ಬಲ್ ಮರ್ಡರ್ ಕೇಸ್ ! ಹಳೇ ಶಿವಮೊಗ್ಗದಲ್ಲಿ ಮತ್ತೆ ತಲೆಯೆತ್ತಿದೀಯಾ ಗ್ಯಾಂಗ್ ವಾರ್ ! ಶಿವಮೊಗ್ಗ ಎಸ್ ಪಿ ಹೇಳಿದ್ದೇನು ?

ಲಷ್ಕರ್ ಮೊಹಲ್ಲಾ ಡಬ್ಬಲ್ ಮರ್ಡರ್ ಕೇಸ್ ! ಹಳೇ ಶಿವಮೊಗ್ಗದಲ್ಲಿ ಮತ್ತೆ ತಲೆಯೆತ್ತಿದೀಯಾ ಗ್ಯಾಂಗ್ ವಾರ್ ! ಶಿವಮೊಗ್ಗ ಎಸ್ ಪಿ ಹೇಳಿದ್ದೇನು ?

ಶಿವಮೊಗ್ಗ : ನಗರದ ಹಳೆ ಶಿವಮೊಗ್ಗದ ಭಾಗದ ಲಷ್ಕರ್ ಮೊಹಲ್ಲದ ಸರ್ಕಲ್ ನಲ್ಲಿಯೇ ಅಟ್ಟಾಡಿಸಿ ಹಾಡಹಗಲೇ ಇಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾದ ಭಯಾನಕ ಘಟನೆ ಇಂದು ಸಂಜೆ 5 : 30ರ ಸುಮಾರಿಗೆ ನಡೆದಿದ್ದು, ಹಾಡ ಹಗಲೇ ಶಿವಮೊಗ್ಗದಲ್ಲಿ ಮಾರಕಸ್ತ್ರಗಳ ಸದ್ದು ಭಯ ಹುಟ್ಟಿಸುವಂತಿದೆ. ಕಳೆದೊಂದು ವಾರದ ಹಿಂದೆ ರೌಡಿಶೀಟರ್ ಯಾಸಿನ್ ಮತ್ತೊಬ್ಬ ರೌಡಿಶೀಟರ್ ಜೊತೆ ಜಗಳ ನಡೆದು ಇಬ್ಬರ ನಡುವೆ ಗ್ಯಾಂಗ್ ವಾರ್ ನಡೆಯುತ್ತಿತ್ತು ಎನ್ನಲಾಗಿದೆ. ಸಂಜೆ 5 : 30ರ ಸುಮಾರಿಗೆ ಲಷ್ಕರ್ ಮೊಹಲ್ಲಕ್ಕೆ ಬಂದ ಗ್ಯಾಂಗ್ ಒಂದು ರೌಡಿಶೀಟರ್ ಯಾಸಿನ್ ಕುರೇಶಿ ಮೇಲೆ ಅಟ್ಯಾಕ್ ಮಾಡಿದೆ. ಈ ಸಂದರ್ಭದಲ್ಲಿ ಅಲ್ಲೇ ಇದ್ದ ಯಾಸಿನ್ ಕುರೇಶಿ ಗ್ಯಾಂಗ್ ಅಟ್ಯಾಕ್ ಮಾಡಲು ಬಂದವರ ಮೇಲೆ ಪ್ರತಿ ದಾಳಿ ನಡೆಸಿದ್ದಾರೆ. ಈ ವೇಳೆ ಎದುರಾಳಿ ಗ್ಯಾಂಗ್ ನ ಕೆಆರ್ ಪುರಂ ನ ನಿವಾಸಿ ಶೋಯೆಬ್ಅಲಿಯಾಸ್‌ ಖಲಂದರ್ ಅಲಿಯಾಸ್ ಸೇಬು (32) ಮತ್ತು ಅಣ್ಣನಗರ ನಿವಾಸಿ ಮೊಹಮ್ಮದ್ ಗೌಸ್(30) ಎಂಬಾತನನ್ನ ಮಾರಕಾಸ್ತ್ರಗಳಿಂದ ಹೊಡೆದು...

BREAKING NEWS : ಶಿವಮೊಗ್ಗ ನಗರದಲ್ಲಿ ಇಬ್ಬರ ಭೀಕರ ಕೊಲೆ ! ಸ್ಥಳಕ್ಕೆ ಪೊಲೀಸರು ದೌಡು  !

BREAKING NEWS : ಶಿವಮೊಗ್ಗ ನಗರದಲ್ಲಿ ಇಬ್ಬರ ಭೀಕರ ಕೊಲೆ ! ಸ್ಥಳಕ್ಕೆ ಪೊಲೀಸರು ದೌಡು !

ಶಿವಮೊಗ್ಗ : ನಗರದ ಲಷ್ಕರ್ ಮೊಹಲ್ಲದ ಮೀನು ಮಾರುಕಟ್ಟೆಯ ಬಳಿ ಇಬ್ಬರನ್ನ ಭೀಕರವಾಗಿ ಹತ್ಯೆ ಮಾಡಲಾಗಿದೆ ಇಂದು ಸಂಜೆ ಆರು ಗಂಟೆಯ ಸುಮಾರಿಗೆ ಗುಂಪೊಂದು ಇಬ್ಬರ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದು, ಚಪ್ಪಡಿ ಕಲ್ಲು, ಸೈಕಲ್ ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೋಟೆ ಪೊಲೀಸ್ ಠಾಣೆ ಪೊಲೀಸರು ದೌಡಾಯಿಸಿದ್ದಾರೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಮೂಲಗಳ ಪ್ರಕಾರ ಕೊಲೆಯಾದವರು ವ್ಯಕ್ತಿಯೊಬ್ಬನ ಮೇಲೆ ದಾಳಿಗೆ ಬಂದಿದ್ದರು ಎಂದು ತಿಳಿದು ಬಂದಿದ್ದು ಸ್ಥಳಕ್ಕೆ ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ಕೊಲೆಯದವರು ಯಾರೆಂಬುದರ ಮಾಹಿತಿ ಲಭ್ಯವಾಗಬೇಕಿದೆ. ವರದಿ : ಲಿಂಗರಾಜ್ ಗಾಡಿಕೊಪ್ಪ 

ಶಿವಮೊಗ್ಗ ಲೋಕಸಮರಕ್ಕೆ ತೆರೆ ! ಮತ ಪೆಟ್ಟಿಗೆಗಳಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ !  ಶಿವಮೊಗ್ಗದಲ್ಲಿ ಶೇ 78.24ರಷ್ಟು ಮತದಾನ !

ಶಿವಮೊಗ್ಗ ಲೋಕಸಮರಕ್ಕೆ ತೆರೆ ! ಮತ ಪೆಟ್ಟಿಗೆಗಳಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ ! ಶಿವಮೊಗ್ಗದಲ್ಲಿ ಶೇ 78.24ರಷ್ಟು ಮತದಾನ !

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದೆ, ಲೋಕಸಭಾ ಚುನಾವಣೆಯ ಸ್ಪರ್ಧಿಗಳ ಭವಿಷ್ಯ ಮತ ಪೆಟ್ಟಿಗೆಗಳಲ್ಲಿ ಭದ್ರವಾಗಿದೆ. ಶಿವಮೊಗ್ಗ ಲೋಕಸಮರಕ್ಕೆ ತೆರೆ ಬಿದ್ದಿದೆ. ಇಂದು ಬೆಳಗ್ಗೆ 7ರಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಜನರು ಬಿಸಿಲಿನ ನಡುವೆಯೂ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿದ್ದು,ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಕಳೆದ ಲೋಕಸಭಾ ಚುನಾವಣೆ ಅಂದರೆ 2019ರ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಶೇ.76.58ರಷ್ಟು ಮತದಾನವಾಗಿತ್ತು .ಕಳೆದ ಲೋಕಸಭಾ ಚುನಾವಣೆಗೆ ಹೋಲಿಸಿದರೇ ಈ ಭಾರಿ ಹೆಚ್ಚು ಮತದಾನವಾಗಿದೆ. ಒಟ್ಟಾರೆ ಇವತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 78.24 % ರಷ್ಟು ಮತದಾನವಾಗಿದೆ. ಒಟ್ಟು ಮತದಾನ 78.24, ಶಿವಮೊಗ್ಗ ಗ್ರಾಮಾಂತರ-83.61% ಶಿಕಾರಿಪುರ-82.66% ಸಾಗರ-80.2%,...

ಮತ ಕೇಂದ್ರದಲ್ಲಿ ಮೊಬೈಲ್ ನಿಷೇಧವಿದ್ದರೂ ಶಿವಮೊಗ್ಗದಲ್ಲಿ ಮತ ಚಲಾಯಿಸುವ ಎರಡು ವಿಡಿಯೋ ವೈರಲ್  !

ಮತ ಕೇಂದ್ರದಲ್ಲಿ ಮೊಬೈಲ್ ನಿಷೇಧವಿದ್ದರೂ ಶಿವಮೊಗ್ಗದಲ್ಲಿ ಮತ ಚಲಾಯಿಸುವ ಎರಡು ವಿಡಿಯೋ ವೈರಲ್ !

ಶಿವಮೊಗ್ಗ : ಇಂದು ಶಿವಮೊಗ್ಗ ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಲೋಕಸಭಾ ಚುನಾವಣಾ ಕಣ ರಂಗೇರಿದೆ, ಇದರ ನಡುವೆ ಮತ ಕೇಂದ್ರದಲ್ಲಿ ಮೊಬೈಲ್ ನಿಷೇಧವಿದ್ದರೂ ಮತ ಚಲಾಯಿಸುವ ವಿಡಿಯೋ ಒಂದು ವೈರಲ್ ಆಗಿದೆ ಮತದಾನದ ವೀಡಿಯೋ, ಪೋಟೋ ತೆಗೆದು, ಸೋಷಿಯಲ್ ಮೀಡಿಯಾದಲ್ಲಿ ಹಂಚಿದ್ರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಾಗಿಯೂ ಎಚ್ಚರಿಕೆ ನೀಡಿತ್ತು. ಆದರೂ ಎರಡು ವಿಡಿಯೋ ವೈರಲ್ ಆಗುತ್ತಿದೆ  ಒಂದು ವಿಡಿಯೋ ಭದ್ರಾವತಿಯ ಮತಗಟ್ಟೆಯೊಂದರಲ್ಲಿ ಮತ ಚಲಾಯಿಸಿದ ಬಳಿಕ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಬಿಡಲಾಗಿದೆ ಎಂದು ತಿಳಿದುಬಂದಿದೆ. ವಿವಿಪ್ಯಾಟ್ ನಲ್ಲಿ ಯಾರಿಗೆ ವೋಟು ಹಾಕಲಾಗಿದೆ ಎಂಬುದನ್ನು ವೀಡಿಯೋ ಮಾಡಿಕೊಳ್ಳಲಾಗಿದೆ. ಅಲ್ಲದೇ ಇವಿಎಂ ಮೆಷಿನ್ ನಲ್ಲಿ ಬಟನ್ ಒತ್ತಿ ಬಳಿಕ ರೆಡ್ ಲೈಟ್ ಕೂಡ ಆನ್ ಆಗೋದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಇದರಲ್ಲಿ ಶಿವಮೊಗ್ಗ ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳ ಭಾವಚಿತ್ರವಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ...

ದುರ್ಗಿಗುಡಿ ಮತ ಕೇಂದ್ರದ ಬಳಿ ಪ್ರತಿಭಟನೆ ! ಕಾರಣವೇನು ?

ದುರ್ಗಿಗುಡಿ ಮತ ಕೇಂದ್ರದ ಬಳಿ ಪ್ರತಿಭಟನೆ ! ಕಾರಣವೇನು ?

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ದುರ್ಗಿಗುಡಿ ಮತ ಕೇಂದ್ರದ ಬಳಿ ಸರ್ವ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ, ಮತಚಲಾವಣೆಗೆ ಹೆಚ್ಚುವರಿ ಕಾಲವಕಾಶ ನೀಡಬೇಕೆಂದು ಮತಗಟ್ಟೆಯ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ ಪ್ರತಿಭಟನೆಗೆ ಕಾರಣವೇನು ? ದುರ್ಗಿಗುಡಿ ಶಾಲಾ ಮತ ಕೇಂದ್ರದಲ್ಲಿ ಮತ ಯಂತ್ರದ ತಾಂತ್ರಿಕ ದೋಷದ ಕಾರಣ ಅರ್ಧ ಗಂಟೆ ತಡವಾಗಿ ಮತದಾನ ಪ್ರಾರಂಭವಾಗಿತ್ತು, ಬೆಳಗ್ಗೆ 07 ಗಂಟೆಗೆ ಶುರುವಾಗಬೇಕಿದ್ದ ಮತದಾನ 7:30 ಕ್ಕೆ ಶುರುವಾಗಿತ್ತು. ಮತದಾನ ಮಾಡಲು ಹೆಚ್ಚುವರಿ ಅರ್ಧ ಗಂಟೆಗಳ ಕಾಲಾವಕಾಶ ನೀಡುವುದಾಗಿ ಭರವಸೆ ನೀಡಿದ್ದ ಅಧಿಕಾರಿಗಳು, ಸಂಜೆ 6 ಗಂಟೆಗೆ ಶಾಲಾ ಗೇಟ್ ಅನ್ನು ಮುಚ್ಚಿ ಮತದಾನ ಮುಕ್ತಾಯವೆಂದು ಹೇಳಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಈ ಕಾರಣದಿಂದಾಗಿ ಸರ್ವಪಕ್ಷದ ಕಾರ್ಯಕರ್ತರು ಮತಗಟ್ಟೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ...

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವದಂತಿ ! ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ! ದೂರಿನಲ್ಲಿ ಏನಿದೆ ?

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವದಂತಿ ! ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ! ದೂರಿನಲ್ಲಿ ಏನಿದೆ ?

ಶಿವಮೊಗ್ಗ : ಇಂದು ಶಿವಮೊಗ್ಗ ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಲೋಕಸಭಾ ಚುನಾವಣಾ ಕಣ ರಂಗೇರಿದೆ, ಇದರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರ ಹಳೆಯ ವಿಡಿಯೋ ಒಂದು ಹರಿದಾಡುತ್ತಿತ್ತು, ಈ ಬಗ್ಗೆ ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ. ಜೊತೆಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೂ ದೂರು ನೀಡಿದ್ದಾರೆ. ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರು ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಅವರ ಪರ ಮತಯಾಚಿಸುವ ಹಳೆಯ ವಿಡಿಯೋ ಒಂದು ಮತದಾನದ ದಿನದೊಂದೆ ಸಾಮಾಜಿಕ ಜಾಲತಾಣಗಳು ಸೇರಿದಂತೆ ಹಲವು ಕಡೆಗಳಲ್ಲಿ ವೈರಲ್ ಆಗಿತ್ತು, ಈ ಸಂಬಂಧ ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಈಶ್ವರಪ್ಪ ಇದೊಂದು ವ್ಯವಸ್ಥಿತ ಷಡ್ಯಂತ್ರ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ನೀಚ ಕೃತ್ಯಕ್ಕೆ ಇಳಿದಿದ್ದಾರೆ ಎಂದು ರಾಘವೇಂದ್ರ ವಿರುದ್ಧ ಆಕ್ರೋಶ ಹೊರ ಹಾಕಿದ್ದರು ಮಲೆನಾಡಿನ...

ವೋಟ್ ಮಾಡಲು ಹೋಗುತ್ತಿದ್ದ ಯುವಕ ಸಾವು !

ವೋಟ್ ಮಾಡಲು ಹೋಗುತ್ತಿದ್ದ ಯುವಕ ಸಾವು !

ಶಿಕಾರಿಪುರ : ಲೋಕಸಭಾ ಚುನಾವಣೆ ಹಿನ್ನೆಲೆ ಇಂದು ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಮತದಾನ ಮಾಡಲು ಬೈಕ್ ಮೇಲೆ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಶಿಕಾರಿಪುರದಲ್ಲಿ ಈ ಒಂದು ಘಟನೆ ನಡೆದಿದೆ. ಇಂದು ಮತದಾನ ಹಿನ್ನೆಲೆಯಲ್ಲಿ ಬೈಕ್ ಸವಾರ ಮತದಾನ ಮಾಡಲು ತೇರಳುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಮಂಜುನಾಥ್ (32) ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಚುರ್ಚಿಗುಂಡಿಯಲ್ಲಿರುವ ಅಕ್ಕನ ಜೊತೆಗೆ ವಾಸವಾಗಿದ್ದ ಮಂಜುನಾಥ್ ಅವರು ಭದ್ರಾವತಿಯಲ್ಲಿ ಮತದಾನದ ಹಕ್ಕನ್ನ ಪಡೆದಿದ್ದರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಚುರ್ಚಿಗೊಂಡಯಿಂದ ಭದ್ರಾವತಿಗೆ ತೆರಳುವಾಗ ಈ ಒಂದು ಅಪಘಾತ ಸಂಭವಿಸಿದೆ. ಶಿಕಾರಿಪುರದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ...

ಶಿವಮೊಗ್ಗದಲ್ಲಿ ಅರಮನೆಯಂತೆ ಸಿಂಗಾರಗೊಂಡ ಮತಕೇಂದ್ರ ! ಮತ ಹಾಕಿದವರಿಗೆ ಕಿರೀಟ !

ಶಿವಮೊಗ್ಗದಲ್ಲಿ ಅರಮನೆಯಂತೆ ಸಿಂಗಾರಗೊಂಡ ಮತಕೇಂದ್ರ ! ಮತ ಹಾಕಿದವರಿಗೆ ಕಿರೀಟ !

ಶಿವಮೊಗ್ಗ : ನಗರದಲ್ಲಿ ಮತದಾರರನ್ನು ಸೆಳೆಯಲು ಅರಮನೆಯಂತೆ ಮತಕೇಂದ್ರ ಸಿಂಗಾರಗೊಂಡಿದೆ , ಶಿವಮೊಗ್ಗದ ಜಿಲ್ಲಾ ಪಂಚಾಯತ್ ನ ಮತದಾನ ಕೇಂದ್ರದಲ್ಲಿ ವಿಭಿನ್ನ ಪ್ರಯತ್ನ ನಡೆದಿದೆ. ಮತದಾನಕ್ಕೆ ಬರುವವರಿಗೆ ಇಲ್ಲಿ ವಿಶೇಷ ವೆಲ್ ಕಂ ಮಾಡಲಾಗುತ್ತಿದೆ. ಮತದಾರರೇ ಪ್ರಭುಗಳು ಎಂಬ ದ್ಯೇಯವಾಕ್ಯದಡಿಯಲ್ಲಿ ಈ ಮತಗಟ್ಟೆ ನಿರ್ಮಿಸಲಾಗಿದೆ. ಪ್ರಭು. ರಾಜ ಪೋಷಾಕಿನ ವೇಷದಲ್ಲಿ ಚುನಾವಣ ಅಧಿಕಾರಿಗಳು ಮಿಂಚುತ್ತಿದ್ದಾರೆ, ಇಬ್ಬರು ಪುರುಷ, ಮೂವರು ಮಹಿಳಾ ಸಿಬ್ಬಂದಿ ವಿಭಿನ್ನವಾಗಿ ರೆಡಿಯಾಗಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಅಲ್ಲದೆ ಮತ ಚಲಾಯಿಸಿ ಹೊರ ಬಂದವರು ಫೋಟೊ ಕ್ಲಿಕ್ಕಿಸಲು ಮತ್ತು ಮತದಾರರು ಕಿರೀಟತೊಟ್ಟು ಸಿಂಹಾಸನದಲ್ಲಿ ಕುಳಿತು ಫೋಟೋ ಕ್ಲಿಕ್ಕಿಸಲು ಫೋಟೊ ಜೋನ್‌ ಸ್ಥಾಪಿಸಲಾಗಿದೆ. ಮತದಾರರು ಸಿಂಹಾಸನದ ಮೇಲೆ ಕುಳಿತು ಕಿರೀಟ ಧರಿಸಿ, ಶಾಯಿ ಹಚ್ಚಿಸಿಕೊಂಡ ಬೆರಳು ತೋರಿಸಿ ಫೋಟೊಗೆ ಪೋಸ್‌...