ಶಿವಮೊಗ್ಗ : ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಜನರು ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿ ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಕುಟುಂಬಸ್ಥರೊಂದಿಗೆ ಮತದಾನ ಮಾಡಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಮತಗಟ್ಟೆಗೆ ಆಗಮಿಸುವುದಕ್ಕೂ ಮೊದಲು ಕುಟುಂಬದೊಂದಿಗೆ ದೇವಾಲಯಕ್ಕೆ ತೆರಳಿದ ಬಿ.ಎಸ್. ಯಡಿಯೂರಪ್ಪ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ. ವರದಿ : ಲಿಂಗರಾಜ್ ಗಾಡಿಕೊಪ್ಪ
ಎರಡನೇ ಹಂತದ ಲೋಕಸಭೆ ಚುನಾವಣೆ : ಬಹಿರಂಗ ಪ್ರಚಾರಕ್ಕೆ ಇಂದು ತೆರೆ !
ಶಿವಮೊಗ್ಗ : ಲೋಕಸಭೆ ಚುನಾವಣೆಯ ದೇಶದ ಮೂರನೇ ಹಾಗೂ ರಾಜ್ಯದ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದ್ದು, ಈ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ 6ಕ್ಕೆ ತೆರೆ ಬೀಳಲಿದೆ. ಸೋಮವಾರ ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶ ಇದೆ. ಈಗಾಗಲೇ ದಕ್ಷಿಣ ಕರ್ನಾಟಕ ಭಾಗದ 14 ಕ್ಷೇತ್ರಗಳಿಗೆ ಎ.26ರಂದು ಮತದಾನ ಮುಗಿದಿದೆ. ಇಂದು ಬಹಿರಂಗ ಪ್ರಚಾರದ ಕೊನೆಯ ದಿನವಾಗಿರುವ ಬೃಹತ್ ವೇದಿಕೆ ಕಾರ್ಯಕ್ರಮಗಳಿಗಿಂತ ರ್ಯಾಲಿ, ರೋಡ್ ಶೋಗಳ ಭರಾಟೆ ಇರಲಿದೆ. ಮತದಾನದ 48 ಗಂಟೆ ಮೊದಲು ಶೂನ್ಯ ಅವಧಿ ಪ್ರಾರಂಭವಾಗುವ ಕಾರಣ ಯಾವುದೇ ರೀತಿಯ ಅಬ್ಬರ ಪ್ರಚಾರ ಕೈಗೊಳ್ಳುವಂತಿಲ್ಲ. ಭಾನುವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳಿಸಬೇಕಾಗಿದೆ. ಆದರೆ, ಕಣದಲ್ಲಿರುವ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ನಡೆಸಲು ಅವಕಾಶ ಇದೆ. ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತದಾರರ ಮನವೊಲಿಕೆಗೆ ಅಂತಿಮ ಕಸರತ್ತು ನಡೆಸಲಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
ಮೇ 7 ಕ್ಕೆ ಮತದಾನ : ಅಂತಿಮ ಹಂತದ ಸಿದ್ಧತೆ ಪೂರ್ಣ – ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಶಿವಮೊಗ್ಗ : ಲೋಕಸಭೆ ಚುನಾವಣೆಯ ದೇಶದ ಮೂರನೇ ಹಾಗೂ ರಾಜ್ಯದ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದ್ದು, ರಾಜ್ಯದ 14 ಕ್ಷೇತ್ರಗಳಿಗೆ ಎ.26ರಂದು ಮತದಾನ ಮುಗಿದಿದೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮೇ 7ರಂದು ನಡೆಯುವ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆಗೆ ಜಿಲ್ಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ‘ಗರಿಷ್ಠ 1,500 ಮತದಾರರನ್ನು ಒಳಗೊಂಡಂತೆ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಮಹಿಳಾ ಮತದಾರರನ್ನು ಸೆಳೆಯಲು 40 ‘ಸಖಿ’ ಮತದಾನ ಕೇಂದ್ರಗಳು ಹಾಗೂ ಯುವ ಮತದಾರರಿಗಾಗಿ 8, ಅಂಗವಿಕಲರಿಗೆ 8, ಮಾದರಿ ಮತಗಟ್ಟೆಗಳು 8, ಧ್ಯೇಯ ಆಧಾರಿತ 8 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ’ ಎಂದು ಹೇಳಿದರು. ‘ಶಿವಮೊಗ್ಗ ಲೋಕಸಭಾ ಕ್ಷೇತ್ರದ...
ಶಿವಮೊಗ್ಗದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಸಾವು !
ಶಿವಮೊಗ್ಗ : ಹೊಸನಗರ ತಾಲೂಕ್ಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಬಲಿಯಾಗಿರುವ ಘಟನೆ ನಡೆದಿದೆ ಬಸವಾಪುರ ಗ್ರಾಮದ ತಿಮ್ಮಪ್ಪ (58) ಮೃತ ವ್ಯಕ್ತಿಯಾಗಿದ್ದಾರೆ. ನೆನ್ನೆ ಬೆಳಗ್ಗೆ ತಮ್ಮ ಮನೆ ಸಮೀಪದ ಕಾಡಿಗೆ ದರಗು ತರಲು ಹೋದ ವೇಳೆ ಈ ಘಟನೆ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಪತ್ನಿ ಮತ್ತು ಮಕ್ಕಳು ಈ ಸಂಧರ್ಭದಲ್ಲಿ ಆನೆ ದಾಳಿಯಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ, ಕಾಡಾನೆ ದಾಳಿಗೆ ಬಸವಾಪುರ ಗ್ರಾಮದ 58 ವಯಸ್ಸಿನ ತಿಮ್ಮಪ್ಪ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ ವರದಿ : ಲಿಂಗರಾಜ್ ಗಾಡಿಕೊಪ್ಪ
ಎಲೆಕ್ಷನ್ ದಿನ ವೋಟ್ ಮಾಡಿದವರಿಗೆ ಶುಭಂ ಹೋಟೆಲ್ ನಲ್ಲಿ ತಿಂಡಿ ಉಚಿತ ! ನಿಯಮ ಏನು ?
ಶಿವಮೊಗ್ಗ : ಕಾರ್ಮಿಕ ದಿನಾಚರಣೆಯ ಪ್ರಯುಕ್ತ ನಗರದ ಶುಭಂ ಹೋಟೆಲ್ ನಲ್ಲಿ ಕಾರ್ಮಿಕರಿಗೆ ಮತದಾನ ಜಾಗೃತಿಯನ್ನು ಹಮ್ಮಿಕೊಳ್ಳಲಾಗಿತ್ತು. ಶುಭಂ ಹೋಟೆಲ್ ನ ಕಾರ್ಮಿಕರಿಗೆ ಮ್ಯೂಸಿಕಲ್ ಚೇರ್ ಆಡಿಸಿ ಮತದಾನದ ಜಾಗೃತಿಯ ಪ್ರತಿಜ್ಞಾವಿಧಿಯನ್ನ ಬೋಧಿಸಲಾಯಿತು ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಸ್ವೀಪ್ ನೋಡಲ್ ಅಧಿಕಾರಿಗಳಾ ದ ಅನುಪಮಾ ಸುಪ್ರಿಯಾ ಹಾಗೂ ಸ್ವೀಪ್ ತಂಡದವರು ಮತ್ತು ಶುಭಂ ಹೋಟಲ್ ಮಾಲೀಕರು ಮತ್ತು ಕಾರ್ಮಿಕರು ಪಾಲ್ಗೊಂಡಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಈ ಸಂದರ್ಭದಲ್ಲಿ ಶುಭಂ ಹೋಟೆಲ್ ನ ಮಾಲೀಕರಾದ ಉದಯ್ ಕುಮಾರ್ ಮಾತನಾಡಿ ಮೇ 07 ಎಲೆಕ್ಷನ್ ದಿನ 12 ಗಂಟೆ ಮುಂಚಿತವಾಗಿ ಮತದಾನ ಮಾಡಿ ಬಂದವರಿಗೆ ನಮ್ಮ ಹೋಟೆಲ್ ನಲ್ಲಿ ಬೆಳಗ್ಗಿನ ತಿಂಡಿಯನ್ನು ಉಚಿತವಾಗಿ ಕೊಡಲಾಗುವುದು ಎಂದು ತಿಳಿಸಿದರು ವರದಿ : ಲಿಂಗರಾಜ್...
28 ವರ್ಷ ಸುದೀರ್ಘ ಸೇವೆ ಸಲ್ಲಿಸಿ ತವರಿಗೆ ಆಗಮಿಸಿದ ವೀರಯೋಧನಿಗೆ ಅದ್ದೂರಿ ಸ್ವಾಗತ
ಸಾಗರ : 28 ವರ್ಷ ಸುದೀರ್ಘ ಸೇವೆ ಸಲ್ಲಿಸಿ ತವರಿಗೆ ಆಗಮಿಸಿದ ವೀರಯೋಧನಿಗೆ ತವರೂರಲ್ಲಿ ಅದ್ದೂರಿ ಸ್ವಾಗತ ದೊರಕಿತು. ಸುಬೇದಾರ್ ಮಧು ಕುಮಾರ್ ವೀರಯೋಧ ಸುದೀರ್ಘ 28 ವರ್ಷಗಳ ಕಾಲ ಭಾರತಾಂಬೆಯ ಸೇವೆ ಸಲ್ಲಿಸಿ ತವರಿಗೆ ಆಗಮಿಸಿದ್ದಾರೆ. ಸಾಗರ ತಾಲೂಕಿನ ಆನಂದಪುರದ ರೈಲ್ವೆ ನಿಲ್ದಾಣದಲ್ಲಿ ವೀರ ಯೋಧನಿಗೆ ಗ್ರಾಮಸ್ಥರು ಹಾಗೂ ಅಭಿಮಾನಿಗಳು ಹೂವಿನ ಹಾರ ಹಾಕಿ ಸ್ವಾಗತಿಸಿ , ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಸುಬೇದಾರ್ ಮಾಧುಕುಮಾರ್ ರವರು ಮೂಲತಹ ಕಡಬಾ ತಾಲೂಕು ಇಚ್ಲಾಂಪಾಡಿ ಗ್ರಾಮದವರಾಗಿದ್ದ್ದು 1996 ರಲ್ಲಿ ಭೂ ಸೇನೆಗೆ ಸೇರಿದರು. ಪ್ರಸ್ತುತ ಆನಂದಪುರದ ಕೆಪಿಎಸ್ ಶಾಲೆಯಲ್ಲಿ ಹಿಂದಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸುಷ್ಮಾ ರವರು ಸುಬೇದಾರ್ ಮಧುಕುಮಾರ್ ರವರ ಧರ್ಮಪತ್ನಿ. ಸುದ್ದಿಗಾರರೊಂದಿಗೆ ಮಾತನಾಡಿದ ಯೋಧ...
ಸರಿಯಾಗಿ ಟ್ರಾನ್ ಲೇಟ್ ಮಾಡಲು ಬರದೇ ರಾಹುಲ್ ಗಾಂಧಿ ಮುಂದೆ ಪೇಚಿಗೆ ಸಿಲುಕಿದ ಮಧು ಬಂಗಾರಪ್ಪ !
ಶಿವಮೊಗ್ಗ : ನಗರದ ಅಲ್ಲಮ ಪ್ರಭು ಮೈದಾನ (ಫ್ರೀಡಂ ಪಾರ್ಕ್ ) ನಲ್ಲಿ ಕಾಂಗ್ರೆಸ್ ನ ಬೃಹತ್ ಸಮಾವೇಶ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಅವರ ಪರ ಮತಯಾಚಿಸಲು ರಾಹುಲ್ ಗಾಂಧಿ ಸೇರಿದಂತೆ ರಾಜ್ಯ ಮತ್ತು ರಾಷ್ಟ್ರ ನಾಯಕರು ಶಿವಮೊಗ್ಗಕ್ಕೆ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಬೃಹತ್ ಸಮಾವೇಶದಲ್ಲಿ ಮಾತಾಡುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಮೇಲೆ ಗರಂ ಆಗಿದ್ದರು. ಸರಿಯಾಗಿ ಟ್ರಾನ್ ಲೇಟ್ ಮಾಡಲು ಭಾರದೆ ಮಧು ಬಂಗಾರಪ್ಪ ಪೇಚಿಗೆ ಸಿಲುಕಿರುವ ಘಟನೆ ನಡೆದಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಿಂದಿಯಲ್ಲಿ ಭಾಷಣ...
ಪ್ರಜ್ವಲ್ ರೇವಣ್ಣ ಒಬ್ಬ ಮಾಸ್ ರೇಪಿಸ್ಟ್ ! ನರೇಂದ್ರ ಮೋದಿ ಭಾರತದ ಮಹಿಳೆಯರ ಬಳಿ ಕ್ಷಮೆ ಕೇಳಬೇಕು ! ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ
ಶಿವಮೊಗ್ಗ : ನಗರದ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನ ಬೃಹತ್ ಸಮಾವೇಶ ನಡೆಯುತ್ತಿದ್ದು, ರಾಹುಲ್ ಗಾಂಧಿ, ಡಿಸಿಎಂ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವು ರಾಜ್ಯ ರಾಷ್ಟ್ರ ಕಾಂಗ್ರೆಸ್ ನಾಯಕರು ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ರವರ ಪರ ಮತ ಬೇಟೆ ನಡೆಸುತ್ತಿದ್ದಾರೆ. ಈ ವೇಳೆ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಪ್ರಜ್ವಲ್ ರೇವಣ್ಣ ಒಬ್ಬ ಮಾಸ್ ರೇಪಿಸ್ಟ್ , ಪ್ರಜ್ವಲ್ ರೇವಣ್ಣ 400ಕ್ಕೂ ಅಧಿಕ ಮಹಿಳೆಯರ ಮೇಲೆ ರೇಪ್ ಮಾಡಿದ್ದಾನೆ ಮತ್ತು ವಿಡಿಯೋ ಕೂಡ ಮಾಡಿಕೊಂಡಿದ್ದಾನೆ ಇದನ್ನ ಸೆಕ್ಸ್ ಸ್ಕ್ಯಾಡಲ್ ಅಂತ ಅನ್ನೋದಿಲ್ಲ ಇದನ್ನು ಮಾಸ್ ರೇಪ್ ಅಂತಾರೆ ಎಂದು ಹೇಳಿದರು ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಕರ್ನಾಟಕದ ಜನತೆಯ ಮುಂದೆ ನಿಂತು...
ಕೆ ಎಸ್ ಈಶ್ವರಪ್ಪ ಕಚೇರಿ ಎದುರು ವಾಮಾಚಾರ ! ನಿಂಬೆ ಹಣ್ಣಿನ ಮೇಲೆ ಕೆ.ಎಸ್.ಈ ಅಂತ ಬರೆದು ವಾಮಾಚಾರ !
ಶಿವಮೊಗ್ಗ : ಈಶ್ವರಪ್ಪ ಪುತ್ರ ಕೆಇ ಕಾಂತೇಶ್ ಗೆ ಹಾವೇರಿ ಲೋಕಸಭಾ ಟಿಕೆಟ್ ತಪ್ಪಿದ ಕಾರಣದಿಂದಾಗಿ, ಬಿಎಸ್ ವೈ ಕುಟುಂಬದ ವಿರುದ್ಧ ಕೆಂಡಮಂಡಲರಾಗಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಬಿಜೆಪಿಯಿಂದ ಸಿಡಿದು ಬಂಡಾಯವೆದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಜೊತೆಗೆ ಪ್ರಚಾರ ಕಾರ್ಯ ಕೂಡ ಬಿರಿಸಿನಿಂದ ಸಾಗಿದೆ ಇದರ ಮಧ್ಯೆ ಶಿಕಾರಿಪುರದಲ್ಲಿ ಲೋಕಸಭಾ ಚುನಾವಣೆ ಸಂಬಂಧ ಚುನಾವಣಾ ಕಾರ್ಯಗಳಿಗಾಗಿ ಆರಂಭಿಸಿದಂತಹ ಕಚೇರಿಯ ಮುಂಭಾಗ ನಿಂಬೆ ಹಣ್ಣಿನ ಮೇಲೆ ಕೆ ಎಸ್ ಇ ಎಂದು ಬರೆದು ವಾಮಾಚಾರ ಮಾಡಿಸಲಾಗಿದೆ, ನಿಂಬೆಹಣ್ಣು, ಅರಿಶಿಣ, ಕುಂಕುಮ ಸೇರಿ ಹಲವು ವಸ್ತು ಪತ್ತೆಯಾಗಿದೆ. ಕಳೆದ ರಾತ್ರಿ ವಾಮಾಚಾರ ಮಾಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೆ...
ಶಿವಮೊಗ್ಗ ಸೆಂಟ್ರಲ್ ಜೈಲ್ : ಕೈದಿ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ !
ಶಿವಮೊಗ್ಗ : ಶಿಕ್ಷೆಗೀಡಾದ ಕೈದಿಯೊಬ್ಬರ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾದ ಘಟನೆ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಮಾ.28ರಂದು ಶಿವಮೊಗ್ಗದ ರಾಜೀವ್ ಗಾಂಧಿ ಬಡಾವಣೆಯ ನಿವಾಸಿ ಪರಶುರಾಮ್ ಅಲಿಯಾಸ್ ಚಿಂಗಾರಿ ಎನ್ನುವ ಕೈದಿಗೆ ಹೊಟ್ಟೆ ನೋವಿನ ಕಾರಣಕ್ಕೆ ಕಾರಾಗೃಹದ ಒಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಹೊಟ್ಟೆ ನೋವು ಜಾಸ್ತಿ ಆದ ಕಾರಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆತರರಲಾಗಿತ್ತು. ಪರೀಕ್ಷೆ ಮಾಡಿದ ವೈದ್ಯರು ಪರಶುರಾಮ್ ಕಲ್ಲು ನುಂಗಿರಬಹುದು ಎಂದು ಶಂಕಿಸಿದರು ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ನಂತರ ಏ 1 ರಂದು ಶಿವಮೊಗ್ಗ ಕೇಂದ್ರ ಕಾರಾಗೃಹದ ವೈದ್ಯಾಧಿಕಾರಿಯ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಯಿಂದ ಬೆಂಗಳೂರಿಗೆ ಕಳಿಸಲಾಯಿತು ಏ .3 ರಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ...









