ಸಾಗರ : ತಾಲೂಕಿನ ಆನಂದಪುರದಲ್ಲಿ ಬೈಕ್ ಗೆ ಜೆಸಿಬಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು ಒಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಆನಂದಪುರದ ಕೆರೆ ಏರಿ ಸಮೀಪ ಯುವಕರು ಬೈಕ್ ನಲ್ಲಿ ಚಲಿಸುತ್ತಿದ್ದಾಗ ಹೆದ್ದಾರಿ ರಸ್ತೆಗೆ ಜೆಸಿಬಿ ಚಾಲಕ ಅಜಾಗುರುಕತೆಯಿಂದ ಚಲಿಸುತ್ತಿದ್ದ ವೇಳೆ ಜೆಸಿಬಿಯ ಮುಂಭಾಗ ಚಲಿಸುತ್ತಿದ್ದ ವಾಹನ ಸವಾರರಿಗೆ ತಿವಿದಿದ್ದು ಇಬ್ಬರು ಸವಾರರ ಪರಿಸ್ಥಿತಿ ಗಂಭೀರವಾಗಿದ್ದು ತಕ್ಷಣ ಸ್ಥಳೀಯರು ಆನಂದಪುರದ ಆಸ್ಪತ್ರೆಗೆ ಸಾಗಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಹೊಟ್ಟೆ ಭಾಗಕ್ಕೆ ತೀವ್ರ ಪ್ರಮಾಣದ ಗಾಯವಾಗಿದ್ದ ಕಾರಣ ತಕ್ಷಣ ಅವರನ್ನು ಆನಂದಪುರದ ಆಂಬುಲೆನ್ಸ್ ನಲ್ಲಿ ಶಿವಮೊಗ್ಗಕ್ಕೆ ಸಾಗಿಸಲಾಗುತ್ತಿತ್ತು, ದುರಾದೃಷ್ಟವಶಾತ್ ಓರ್ವ ವಾಹನ ಸವಾರ ಸೈ ಹುಸೇನ್ ಎಡೆಹಳ್ಳಿ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ವರದಿ : ಅಮಿತ್ ಆನಂದಪುರ
ಕ್ಷುಲ್ಲಕ ಕಾರಣಕ್ಕೆ ಗಲಾಟೆ ! ಯುವಕನ ಮೇಲೆ ಚಾಕುವಿನಿಂದ ಹಲ್ಲೆ !
ಶಿವಮೊಗ್ಗ : ನಗರದ ಬುದ್ಧ ನಗರದಲ್ಲಿ ಇಬ್ಬರ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು, ಮತ್ತೋರ್ವ ಯುವಕನಿಗೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಬುದ್ಧ ನಗರದ ಮೂರನೇ ತಿರುವಿನಲ್ಲಿ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ ಅಜಯ್ ಕುಮಾರ್ ಎಂಬಾತನ ಮೇಲೆ ಲೋಹಿತ್ ಎಂಬ ಯುವಕನೊಬ್ಬ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ , ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಬುದ್ಧ ನಗರದಲ್ಲಿ ನಿಂತಿದ್ದಾಗ ಅಜಯ್ ಕುಮಾರ್ ಮತ್ತು ಲೋಹಿತ್ ಇಬ್ಬರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದ್ದು, ಜಗಳ ತಾರಕಕ್ಕೇರಿ ಲೋಹಿತ್ ಎಂಬಾತ ಅಜಯ್ ಕುಮಾರ್ ನ ಭುಜ ಮತ್ತು ತಲೆಗೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ . ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು. ಈ ಘಟನೆ ಸಂಬಂಧ...
ಗೀತಾ ಶಿವರಾಜ್ ಕುಮಾರ್ ಪರ ಪ್ರಚಾರಕ್ಕೆ ಬರಲಿದ್ದಾರೆ ಸಿನಿಮಾ ನಟ ನಟಿಯರು ! ಯಾವ ಯಾವ ನಟ ನಟಿಯರು ಬರಲಿದ್ದಾರೆ !
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಗೀತಾ ಶಿವರಾಜಕುಮಾರ್ ಈಗಾಗಲೇ ಹಲವು ಕಡೆ ಪ್ರಚಾರ ನಡೆಸಿದ್ದು. ಚಿತ್ರರಂಗದ ಹಲವು ನಟ ನಟಿಯರು ಶಿವಮೊಗ್ಗಕ್ಕೆ ಬರಲಿದ್ದಾರೆ ಎಂದು ತಿಳಿದು ಬಂದಿದೆ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಫಿಲಂ ಛೇಂಬರ್ನವರು ಇದೇ ಮೊದಲ ಬಾರಿಗೆ ಗೀತಾಶಿವರಾಜ್ಕುಮಾರ್ರವರಿಗೆ ಬೆಂಬಲ ವ್ಯಕ್ತಪಡಿಸಿದ್ದು, ಘಟಾನುಘಟಿ ನಾಯಕ ನಟರು, ನಟಿಯರು ಮತ್ತು ಚಿತ್ರತಂಡದ ಪ್ರಮುಖರು ಕ್ಷೇತ್ರದ ೮ ತಾಲ್ಲೂಕುಗಳಲ್ಲಿ ಪತ್ರಿಕಾಗೋಷ್ಠಿ ಮತ್ತು ರೋಡ್ಶೋ ಮೂಲಕ ಗೀತಕ್ಕನ ಪರ ವ್ಯಾಪಕ ಪ್ರಚಾರ ಮಾಡಲಿದ್ದಾರೆ ಎಂದು ಹೇಳಿದರು ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ನಾವು ಅವರಿಗೆ ಒತ್ತಾಯಿಸಿಲ್ಲ. ಅವರೇ ಸ್ವಯಂ ಪ್ರೇರಿತರಾಗಿ ಬರುತ್ತಿದ್ದು, ಇನ್ನೂ ಅನೇಕ ಚಿತ್ರರಂಗದ ಪ್ರಮುಖರು ಆಸಕ್ತಿ ವ್ಯಕ್ತಪಡಿಸಿದ್ದಾರೆ. ನಟ ದುನಿಯಾ...
ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ! ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಸಮಾವೇಶ ! ಯಾವಾಗ ಬರಲಿದ್ದಾರೆ ?
ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ನಗರದ ಫ್ರೀಡಂ ಪಾರ್ಕ್ನಲ್ಲಿ ಗೀತಾಶಿವರಾಜ್ಕುಮಾರ್ ಬೃಹತ್ ಸಮಾವೇಶದಲ್ಲಿ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ. ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧುಬಂಗಾರಪ್ಪ ಇಡೀ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜನ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ನಗರದಲ್ಲಿ ಕೂಡ ಒಳ್ಳೆಯ ವಾತಾವರಣ ಕಂಡು ಬಂದಿದ್ದು, ಜನರ ಉಪಚಾರಕ್ಕೆ ನಾನು ತುಂಬಾ ಋಣಿಯಾಗಿದ್ದೇನೆ. ಈ ರೀತಿಯ ಬದಲಾವಣೆಯನ್ನು ನಾನು ನಿರೀಕ್ಷೆ ಕೂಡ ಮಾಡಿರಲಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ಎಲ್ಲಾ ವರ್ಗದ ಜನ ಅಭಿನಂದಿಸುತ್ತಿದ್ದಾರೆ. ಮತ ಕೇಳಲು ಮನೆಗೆ ಹೋದರಿಗೆ ಮನೆ ಒಳಗೆ ಕರೆದು ಚಹಾ, ನೀರು, ನೀಡುತ್ತಿದ್ದಾರೆ. ಇವರ ಪ್ರೀತಿಗೆ ಹೃದಯ ತುಂಬಿ ಬರುತ್ತಿದೆ ಎಂದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಈಗಾಗಲೇ...
ಈಶ್ವರಪ್ಪ ಪರ ಪ್ರಚಾರ ನಡೆಸುತಿದ್ದ ಮಹಿಳೆ ಮೇಲೆ ಹಲ್ಲೆ ! ದೂರು ದಾಖಲು !
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಪರ ಪ್ರಚಾರ ನಡೆಸಿದ ಮಹಿಳೆ ಮೇಲೆ ಹಲ್ಲೆ ನಡೆದಿದ್ದು, ಈ ಬಗ್ಗೆ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾರಿಕಾಂಬಾ ಟ್ರಸ್ಟ್ ಸಂಯೋಜಕಿ ಪೂರ್ಣಿಮಾ ಎಂಬುವವರ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಏಪ್ರಿಲ್ 20 ರಂದು ಪೂರ್ಣಿಮಾ ಸವರ್ಲೈನ್ ರಸ್ತೆಯಲ್ಲಿ ಮನೆ ಮನೆಗೆ ತೆರಳಿ ಈಶ್ವರಪ್ಪ ಪರ ಪ್ರಚಾರಕ್ಕಾಗಿ ಜನರನ್ನು ಸಂಯೋಜಿಸುತ್ತಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಈ ವೇಳೆ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರ ಗುಂಪು ಪೂರ್ಣಿಮಾ ಮೇಲೆ ಹಲ್ಲೆ ನಡೆಸಿದೆ. ಈಶ್ವರಪ್ಪ ಪರ ಪ್ರಚಾರ ನಡೆಸದಂತೆ ಬೆದರಿಕೆ ಹಾಕಿ ಅಶ್ಲೀಲ ಪದಗಳಿಂದ ನಿಂದಿಸಿದ್ದಾಗಿ ಮಹಿಳೆ ಆರೋಪಿಸಿದ್ದಾರೆ. ವರದಿ : ಲಿಂಗರಾಜ್ ಗಾಡಿಕೊಪ್ಪ
ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಜೀಪ್ ! ವ್ಯಕ್ತಿ ಸ್ಥಳದಲ್ಲೇ ಸಾವು !
ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆಅರಸಾಳು ಸಮೀಪದಲ್ಲಿ ನಡೆದಿದೆ. ಘಟನೆಯಲ್ಲಿ ರಿಪ್ಪನ್ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಮೃತದೇಹವನ್ನು ಹೊರತೆಗೆಯಲು ಹರಸಾಹಸ ಪಡಲಾಯಿತು. ಅತಿಯಾದ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನ ನಡುವಿನ ಶೆಟ್ಟಿಕೆರೆ ಅಭಯಾರಣ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ಮೂರು ಪಲ್ಟಿಯಾಗಿ ಉರುಳಿಬಿದ್ದಿದೆ. ಸ್ಥಳಕ್ಕೆ ರಿಪ್ಪನ್ಪೇಟೆ ಪಿಎಸ್ಐ ನಿಂಗರಾಜ್ ಕೆ ವೈ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ. ವರದಿ : ಲಿಂಗರಾಜ್ ಗಾಡಿಕೊಪ್ಪ
ಖಾತೆ ಮಾಡಿಸಿಕೊಡಲು ಲಂಚ ! ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಬ್ಬಲಗೆರೆ ಗ್ರಾಮ ಪಂಚಾಯತಿ ಕಾರ್ಯದರ್ಶಿ !
ಶಿವಮೊಗ್ಗ : ಖಾತೆ ಮಾಡಿಸಿಕೊಡಲು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ ಗ್ರಾಮ ಪಂಚಾಯಿತಿ ಗ್ರೇಡ್ 2 ಕಾರ್ಯದರ್ಶಿ ಯೋಗೇಶ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ ಶಿವಮೊಗ್ಗದ ನವುಲೆ ನಿವಾಸಿ ಬಿ. ಯಶವಂತ ಅವರಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಶಿವಮೊಗ್ಗದ ಚೆನ್ನಮುಂಭಾಪುರದಲ್ಲಿ ಯಶವಂತ ಅವರು ನಿವೇಶನ ಹೊಂದಿದ್ದು, ಈ ಜಾಗವನ್ನು ತನ್ನ ಹೆಸರಿಗೆ ಖಾತೆ ಮಾಡಿಸಿಕೊಳ್ಳಲು ಅಬ್ಬಲಗೆರೆ ಗ್ರಾಮ ಪಂಚಾಯಿತಿ ಗ್ರೇಡ್ 2 ಕಾರ್ಯದರ್ಶಿ ಯೋಗೇಶ್ ಅವರ ಬಳಿ ಆರು ತಿಂಗಳ ಹಿಂದೆಯೇ ದಾಖಲೆ ಪತ್ರಗಳ ಸಹಿತ ಅರ್ಜಿ ಸಲ್ಲಿಸಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಜಾಗ ಅಪ್ರೂವ್ ಮಾಡಿಕೊಡಲು 15,000 ರೂ. ಲಂಚಕ್ಕೆ ಯೋಗೇಶ್ ಬೇಡಿಕೆ ಇಟ್ಟಿದ್ದಾರೆ....
ಶಿವಮೊಗ್ಗ : ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು !
ಸಾಗರ : ಮಹಿಳೆಯ ಹೊಟ್ಟೆಯಲ್ಲಿ ಬೆಳೆದಿದ್ದ 7ಕೆ.ಜಿ ತೂಕದ ಗರ್ಭಕೋಶದ ಗಡ್ಡೆಯನ್ನು ಪಟ್ಟಣದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದಿದ್ದಾರೆ.ಹೊಸನಗರ ತಾಲ್ಲೂಕಿನ ಜಯನಗರ ಗ್ರಾಮದ 33ವರ್ಷದ ಶಶಿಕಲಾ ಕಳೆದೆರಡು ತಿಂಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಗ್ರಾಮದ ಸ್ಥಳೀಯ ಸರ್ಕಾರಿ ವೈದ್ಯರ ಸಲಹೆ ಮೇರೆಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು. ಆಡಳಿತಾಧಿಕಾರಿ ಡಾ.ಪರಪ್ಪ ನೇತೃತ್ವದಲ್ಲಿ ಮಹಿಳೆಯ ಹೊಟ್ಟೆಯಲ್ಲಿನ ಗೆಡ್ಡೆಯ ಪರೀಕ್ಷೆ ನಡೆಸಿ ಶಸ್ತ್ರಚಿಕಿತ್ಸೆಗೆ ನಿರ್ಧರಿಸಿದರು. ಬುಧವಾರ ಮಧ್ಯಾಹ್ನ ಸತತ ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ತಜ್ಞ ಡಾ.ನಾಗೇಂದ್ರಪ್ಪ, ಪ್ರಸೂತಿ ತಜ್ಞೆ ಡಾ.ಪ್ರತಿಮಾ, ಡಾ.ಶರ್ಮಿತಾ, ಅರವಳಿಕೆ ತಜ್ಞ ಡಾ.ಸಂಗಮ್,ಡಾ.ರಾಜೇಶ್ ನೇತೃತ್ವದ ತಂಡ ಶಸ್ತ್ರಚಿಕಿತ್ಸೆ ನಡೆಸಿ 7 ಕೆ.ಜಿ ತೂಕದ ಗರ್ಭಕೋಶದ ಗಡ್ಡೆಯನ್ನು ಹೊರತೆಗೆದಿದ್ದಾರೆ. ಈ ಸಂಧರ್ಭದಲ್ಲಿ ದಾದಿಯರಾದ ಸುವರ್ಣ,ಶ್ವೇತಾ,ಆಲಿಯ,ಚಂದ್ರು,ರಾಕೇಶ್ ಇದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ...
ಹೆಲಿಕ್ಯಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಆಗಮಿಸಿದ ಅಣ್ಣಾಮಲೈ ! ಚುನಾವಣಾ ಅಧಿಕಾರಿಗಳಿಂದ ಹೆಲಿಕ್ಯಾಪ್ಟರ್ ತಪಾಸಣೆ!
ಶಿವಮೊಗ್ಗ : ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಭದ್ರಾವತಿಯಲ್ಲಿ ನಡೆಯುತ್ತಿರುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲು ಇಂದು ಹೆಲಿಕ್ಯಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಈ ವೇಳೆ ಶಿವಮೊಗ್ಗ ಹೆಲಿಪ್ಯಾಡ್ ನಲ್ಲಿ ಶಿವಮೊಗ್ಗ ಶಾಸಕ ಎಸ್ ಎನ್ ಚನ್ನಬಸಪ್ಪ ಹಾಗೂ ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷ ಟಿಡಿ ಮೇಘರಾಜ್ ಕೆ ಅಣ್ಣಮಲೈ ಅವರಿಗೆ ಹೂಗುಚ್ಚ ನೀಡಿ ಶಿವಮೊಗ್ಗಕ್ಕೆ ಸ್ವಾಗತಿಸಿದರು ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಶಿವಮೊಗ್ಗ ಲೋಕಸಭಾ ಚುನಾವಣೆ ಹಿನ್ನೆಲೆ ಶಿವಮೊಗ್ಗಕ್ಕೆ ಆಗಮಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಮಲೈ ಭದ್ರಾವತಿಯಲ್ಲಿ ನಡೆಯಲಿರುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಪರ ಪ್ರಚಾರ ನಡೆಸಲಿರುವ ಕೆ ಅಣ್ಣಮಲೈ ಶಿವಮೊಗ್ಗದಲ್ಲಿ ಮತ ಬೇಟೆಗೆ ಇಳಿದಿದ್ದಾರೆ ಇನ್ನೂ...
ಶಿವಮೊಗ್ಗ ಲೋಕಸಭಾ ಕಣಕ್ಕೆ ಅಣ್ಣಾಮಲೈ ಎಂಟ್ರಿ ! ನಾಳೆ ಶಿವಮೊಗ್ಗಕ್ಕೆ ಭೇಟಿ ! ಎಲ್ಲೆಲ್ಲಿ ಪ್ರಚಾರ ನಡೆಸಲಿದ್ದಾರೇ ?
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಅಖಾಡ ದಿನೇ ದಿನೇ ರಂಗೇರುತ್ತಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮೂವರು ಅಭ್ಯರ್ಥಿಗಳು ಲೋಕಸಭಾ ಕ್ಷೇತ್ರವನ್ನ ಗೆಲ್ಲಲು ತಮ್ಮ ತಮ್ಮ ಕಾರ್ಯತಂತ್ರವನ್ನು ಮುಂದುವರೆಸಿದ್ದಾರೆ. ಇದರ ಮಧ್ಯೆ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರರ ಪರ ಮತಯಾಚಿಸಲು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ನಾಳೆ ಶಿವಮೊಗ್ಗಕ್ಕೆ ಬರಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಅಂದರೆ ನಾಳೆ ಏಪ್ರಿಲ್ 24ರಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ರಾಜ್ಯ ಚುನಾವಣಾ ಸಹ ಪ್ರಭಾರಿ ಕೆ ಅಣ್ಣಮಲೈನಾಳೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಬಿವೈ ರಾಘವೇಂದ್ರರ ಪರ ಮತ ಬೇಟೆಗಿಳಿಯಲಿರುವ ಅಣ್ಣಾಮಲೈ ಭದ್ರಾವತಿಯ ಕನಕ ಮಂಟಪದಲ್ಲಿ ಸಂಜೆ 4.30ಕ್ಕೆ ಆಯೋಜಿಸಿರುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 6:...









