ಗೋಪಿ ಸರ್ಕಲ್ ನಲ್ಲಿ ಡಿಜೆ ಹಾಡಿಗೆ ಯುವಕ ಯುವತಿಯರ ಸಕ್ಕತ್ ಸ್ಟೆಪ್ಸ್ ! ರೈನ್ ಡಾನ್ಸ್ ! ಹೋಳಿ ಹಬ್ಬದಲ್ಲಿ ಮಿಂದೆದ್ದ ಶಿವಮೊಗ್ಗ ಜನತೆ ! ಶಿವಮೊಗ್ಗ : ಗೋಪಿ ವೃತ್ತ ಮಂಗಳವಾರ ರಂಗಿನ ಅಂಗಳವಾಗಿ ಕಂಗೊಳಿಸುತ್ತಿತ್ತು. ಭ್ರಾತೃತ್ವದ ಕೊಂಡಿ ಬೆಸೆಯುವ ಹಬ್ಬಗಳಲ್ಲಿ ಒಂದಾದ ಹೋಳಿ ಹಬ್ಬ ನಗರದ ಜನತೆಯ ಮನಸ್ಸನ್ನು ಓಕುಳಿಯಲ್ಲಿ ತೇಲಿಸಿತು. ಪ್ರತಿ ವರ್ಷದಂತೆ ಈ ಭಾರಿಯು ನಗರದ ಗೋಪಿ ವೃತ್ತದಲ್ಲಿಹಿಂದೂ ಕೇಸರಿ ಅಲಂಕಾರ ಸಮಿತಿ ವತಿಯಿಂದ ಹೋಳಿ ಹಬ್ಬಕ್ಕೆ ವ್ಯವಸ್ಥೆ ಮಾಡಲಾಗಿದೆ.ಹಿರಿಯ–ಕಿರಿಯರೆನ್ನದೆ, ಜಾತಿ ಭೇದ–ಭಾವ ಮರೆತು ಭಾವೈಕ್ಯದಿಂದ ಕೂಡಿ ಬಣ್ಣದ ಜಗತ್ತಿನಲ್ಲಿ ಯುವಕ,ಯುವತಿಯರು, ಮಕ್ಕಳು, ಮಹಿಳೆಯರು ಪುರುಷರು ರೈನ್ ಡಾನ್ಸ್ ನಲ್ಲಿ ಹೆಜ್ಜೆ ಹಾಕಿ ಸಂಭ್ರಮಿಸುತ್ತಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಇನ್ನು, ಬಣ್ಣದ ಒಕುಳಿಯಲ್ಲಿ ಮಿಂದಿದ್ದ...
ಚಿಣ್ಣರೊಂದಿಗೆ ಶಿವಮೊಗ್ಗ ರಂಗಾಯಣ: ಮಕ್ಕಳ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ
ಚಿಣ್ಣರೊಂದಿಗೆ ಶಿವಮೊಗ್ಗ ರಂಗಾಯಣ: ಮಕ್ಕಳ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ ಶಿವಮೊಗ್ಗ : ಶಿವಮೊಗ್ಗ ರಂಗಾಯಣವು 2024ರ ಏಪ್ರಿಲ್ 12 ರಿಂದ ಮೇ 01 ರವರೆಗೆ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ‘ಚಿಣ್ಣರೊಂದಿಗೆ ಶಿವಮೊಗ್ಗ ರಂಗಾಯಣ-2024’ ಹೆಸರಿನಲ್ಲಿ ಮಕ್ಕಳ ಬೇಸಿಗೆ ಶಿಬಿರವನ್ನು ಆಯೋಜಿಸಿದ್ದು, ಆಸಕ್ತ 08 ರಿಂದ 14 ವರ್ಷ ವಯೋಮಾನದ ಮಕ್ಕಳಿಂದ ಅರ್ಜಿ ಆಹ್ವಾನಿಸಿದೆ. ಶಿಬಿರದಲ್ಲಿ ಮಕ್ಕಳಿಗೆ ಮುಖ್ಯವಾಗಿ ಕಥೆ ಹೇಳುವುದು, ಪವಾಡ ರಹಸ್ಯ ಬಯಲು, ಕುದುರೆ, ಎತ್ತಿನಗಾಡಿ ಸವಾರಿ, ಹೋಳಿ, ನಾಟಕ, ಮೈಮ್, ರಂಗಾಟ, ಜನಪದ ಗೀತೆ, ಹುಲಿನೃತ್ಯ, ಸಿಂಹನೃತ್ಯ, ಮಕ್ಕಳ ಸಂತೆ, ರಂಗ ಜಾಥಾ, ಮುಖವಾಡ ತಯಾರಿ, ಚಿತ್ರಕಲೆ, ಮಕ್ಕಳ ಸಿನಿಮಾ, ನಾಟಕ ವೀಕ್ಷಣೆ, ಹೊರಸಂಚಾರ, ಮಡಿಕೆ ತಯಾರಿ, ತಮಟೆ ವಾದನ ಹೀಗೆ ಹಲವು ಮಜಲುಗಳನ್ನು ಪ್ರಾಯೋಗಿಕವಾಗಿ ಅಭ್ಯಾಸ ಮಾಡಿಸುತ್ತ ನಾಟಕಕ್ಕೆ ಸಂಬಂಧಿಸಿದ ಪೂರಕ ಕಲೆಗಳನ್ನು ಶಿಬಿರದಲ್ಲಿ ಕಲಿಸಲಾಗುವುದು. ಮೇ 02 ಮತ್ತು 03 ರಂದು ಶಿಬಿರದಲ್ಲಿ ಕಲಿಸಿದ ನಾಟಕಗಳನ್ನು/ ಕಲೆಗಳನ್ನು ‘ರಂಗಾಯಣದ ಚಿಣ್ಣರ ರಂಗೋತ್ಸವ’ದಲ್ಲಿ ಪ್ರದರ್ಶಿಸಲಾಗುವುದು...
ಶೀಘ್ರ ಪತ್ತೆ ಮತ್ತು ಚಿಕಿತ್ಸೆಯಿಂದ ಕ್ಷಯ ರೋಗ ನಿರ್ಮೂಲನೆ ಸಾಧ್ಯ : ಡಾ.ನಟರಾಜ್
ಶೀಘ್ರ ಪತ್ತೆ ಮತ್ತು ಚಿಕಿತ್ಸೆಯಿಂದ ಕ್ಷಯ ರೋಗ ನಿರ್ಮೂಲನೆ ಸಾಧ್ಯ : ಡಾ.ನಟರಾಜ್ ಕ್ಷಯರೋಗವನ್ನು ಶೀಘ್ರ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಮೂಲಕ ರೋಗವನ್ನು ನಿರ್ಮೂಲನೆ ಮಾಡಬಹುದು. ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು ಇದರ ಉಪಯೋಗ ಪಡೆಯಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಟರಾಜ್ ಹೇಳಿದರು. ವಿಶ್ವ ಕ್ಷಯರೋಗ ದಿನಾಚರಣೆ ಪ್ರಯುಕ್ತ ‘ಹೌದು! ನಾವು ಕ್ಷಯರೋಗವನ್ನು ಕೊನೆಗಾಣಿಸಬಹುದು’ ಎಂಬ ಘೋಷವಾಕ್ಯದೊಂದಿಗೆ ಇಂದು ಡಿಹೆಚ್ಓ ಕಚೇರಿಯಿಂದ ಏರ್ಪಡಿಸಲಾಗಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಜಿಲ್ಲೆಯಲ್ಲಿ ಕಳೆದ 2023 ರಲ್ಲಿ 53713 ಶಂಕಿತರಿಗೆ ಕಫ ಪರೀಕ್ಷೆ ಮಾಡಿಸಿ 1303 ಕ್ಷಯರೋಗಿಗಳನ್ನು ಪತ್ತೆಹಚ್ಚಿ ಡಾಟ್ಸ್ ಚಿಕಿತ್ಸೆ ಪ್ರಾರಂಭಿಸಲಾಗಿರುತ್ತದೆ....
ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿ ನೇಣಿಗೆ ಶರಣು !
ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿ ನೇಣಿಗೆ ಶರಣು ! ಶಿವಮೊಗ್ಗ : ರಾಜ್ಯಾದ್ಯಂತ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭವಾಗಿದ್ದು, ಪರೀಕ್ಷಾ ದಿನವೇ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಪರಶುರಾಮ್ ಬಾಬು (16) ಮೃತ ದುರ್ದೈವಿ ಆಗಿದ್ದಾನೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಮನೆ ಹಿಂಭಾಗದ ಹಿತ್ತಲಿನ ಕಂಬಕ್ಕೆ ನೇಣು ಬಿಗಿದಿರುವ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ.ಆನಂದಪುರದ ಕೆಪಿಎಸ್ ಸಿ ಶಾಲೆಯಲ್ಲಿ ಬಾಬು ವ್ಯಾಸಂಗ ಮಾಡುತ್ತಿದ್ದನು.ಪರೀಕ್ಷಾ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಸಹ ವ್ಯಕ್ತವಾಗಿದೆ. ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ : ಲಿಂಗರಾಜ್ ಗಾಡಿಕೊಪ್ಪ
BREAKINNG NEWS : ಶಿವಮೊಗ್ಗದಲ್ಲಿ ಮತ್ತೆ ಪೊಲೀಸ್ ಗುಂಡಿನ ಸದ್ದು ! ಮಲ್ಲಿಗೆನಹಳ್ಳಿಯ ಬಳಿ ರೌಡಿ ಶೀಟರ್ ಫಾರು ಕಾಲಿಗೆ ಗುಂಡೇಟು !
BREAKINNG NEWS : ಶಿವಮೊಗ್ಗದಲ್ಲಿ ಮತ್ತೆ ಪೊಲೀಸ್ ಗುಂಡಿನ ಸದ್ದು ! ಮಲ್ಲಿಗೆನಹಳ್ಳಿಯ ಬಳಿ ರೌಡಿ ಶೀಟರ್ ಫಾರು ಕಾಲಿಗೆ ಗುಂಡೇಟು ! ಶಿವಮೊಗ್ಗ : ನಗರದಲ್ಲಿ ಮತ್ತೆ ಪೊಲೀಸ್ ಬಂದೂಕಿನ ಗುಂಡಿನ ಸದ್ದು ಮಾಡಿದೆ. ನಗರದ ಮಲ್ಲಿಗೆನಹಳ್ಳಿಯ ಬಳಿ ಕೊಲೆ ಪ್ರಕರಣದಲ್ಲಿ ತಲೆಮೆರೆಸಿಕೊಂಡಿದ್ದ ಆರೋಪಿಯೊಬ್ಬನ ಬಂಧನಕ್ಕೆ ತೆರಳಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯ ಕಾಲಿಗೆ ಇಂದು ಬೆಳ್ಳಂಬೆಳಿಗ್ಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಫಾರು ಎಂಬಾತನು ಮಲ್ಲಿಗೆನಹಳ್ಳಿಯ ಬಳಿ ಇರುವ ಮಾಹಿತಿ ತುಂಗಾನಗರ ಪೊಲೀಸರಿಗೆ ಲಭ್ಯವಾಗಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಖಚಿತ ಮಾಹಿತಿಯ ಮೇರೆಗೆ ಆತನ ಬಂಧನಕ್ಕೆ ತೆರಳಿದ ವೇಳೆ ತುಂಗಾನಗರ ಪೊಲೀಸ್ ಠಾಣೆಯ ಸಿಬ್ಬಂದಿ ನಾಗಪ್ಪ ಅವರ ಮೇಲೆ ಆರೋಪಿ...
ಯೋ.. ಬರ್ಕೊಳಯ್ಯ, ಶಿವಮೊಗ್ಗ ನಂದು : ಸಂತೆಕಡೂರಿನಲ್ಲಿ ಪತ್ನಿ ಪರ ಪ್ರಚಾರದಲ್ಲಿ ಶಿವಣ್ಣ ಮಾಸ್ ಡೈಲಾಗ್ !
ಯೋ.. ಬರ್ಕೊಳಯ್ಯ, ಶಿವಮೊಗ್ಗ ನಂದು : ಸಂತೆಕಡೂರಿನಲ್ಲಿ ಪತ್ನಿ ಪರ ಪ್ರಚಾರದಲ್ಲಿ ಶಿವಣ್ಣ ಮಾಸ್ ಡೈಲಾಗ್ ! ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆಳಿದಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಅವರ ಪರವಾಗಿ ನಟ ಶಿವರಾಜ್ ಕುಮಾರ್ ಇಂದು ಚುನಾವಣಾ ಪ್ರಚಾರ ನಡೆಸಿದರು ಈ ವೇಳೆ ಜೋಗಯ್ಯ ಸಿನಿಮಾದ ಡೈಲಾಗ್ ಹೇಳಿದ್ದು ಕಾರ್ಯಕರ್ತರಲ್ಲಿ ಹುಮ್ಮಸ್ಸು ನೀಡಿತು. ಶಿವಮೊಗ್ಗದ ಸಂತೆಕಡೂರಿನಲ್ಲಿ ಪತ್ನಿ ಹಾಗೂ ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಪರ ಶಿವಣ್ಣ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಮೊದಲ ಸಲ ನಿಮ್ಮ ಊರಿಗೆ ಬಂದಿದ್ದೇನೆ ಎಂದು ಡೈಲಾಗ್ ಹೊಡೆದಿದ್ದು, ‘ಯೋ ಬರ್ಕೊಳಯ್ಯ ಮುಂದುಗಡೆ ಪೇಪರಲ್ಲಿ ಬರ್ಕೋ ಶಿವಮೊಗ್ಗ ನಂದು’ ಎಂದು ಜೋಗಯ್ಯ ಸಿನಿಮಾದ ಡೈಲಾಗ್ ಹೊಡೆದು ನೆರೆದಿರುವ ಕಾರ್ಯಕರ್ತರನ್ನು ರಂಜಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...
ಅಧಿಕಾರಿಗಳ ಕಿರುಕುಳ ಆರೋಪ; ಶಿವಮೊಗ್ಗದಲ್ಲಿ ಕರ್ತವ್ಯ ನಿರತ ಚಾಲಕ -ಕಂ-ನಿರ್ವಾಹಕ ಆತ್ಮಹತ್ಯೆಗೆ ಯತ್ನ !
ಅಧಿಕಾರಿಗಳ ಕಿರುಕುಳ ಆರೋಪ; ಶಿವಮೊಗ್ಗದಲ್ಲಿ ಕರ್ತವ್ಯ ನಿರತ ಚಾಲಕ -ಕಂ-ನಿರ್ವಾಹಕ ಆತ್ಮಹತ್ಯೆಗೆ ಯತ್ನ ! ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ತವ್ಯನಿರತ ಚಾಲಕ -ಕಂ- ಕಾರ್ಯನಿರ್ವಾಹ ಕರ್ತವ್ಯದಲ್ಲಿದ್ದಾಗಲೇ ಬಸ್ಸಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸವರಾಜು ಟಿ.ವಿ. ಆತ್ಮಹತ್ಯೆಗೆ ಯತ್ನಿಸಿದವರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಶಿವಮೊಗ್ಗ ವಿಭಾಗದ ಹೊನ್ನಾಳಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಬಸವರಾಜು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಕುಡಿಯುವ ನೀರಿನ ವಿಷಯಕ್ಕೆ ಹೊನ್ನಾಳಿ ಘಟಕದಲ್ಲಿ ಕರ್ತವ್ಯನಿರತ ಮೆಕ್ಯಾನಿಕ್ ಕೆ ರೇಣುಕಾ ಜಗಳವಾಗಿದೆ. ಬಸವರಾಜು ವಿರುದ್ಧ ಪದೇಪದೆ ತಗಾದೆ ಮಾಡುತ್ತಿರುವ ರೇಣುಕಾ. ಜಗಳ ನಡೆದಿದ್ದು ಕುಡಿಯುವ ನೀರಿನ ವಿಚಾರಕ್ಕೆ ಆದರೆ ಬಸವರಾಜು ಹಾಗೂ ಮಹೇಶ್ವರ, ಸಿ. ಚಾಲಕನ ವಿರುದ್ಧ...
ಮಹಿಳಾ ಪಿಜಿಯಲ್ಲಿ ನೇಣು ಬಿಗಿದು ಯುವತಿ ಆತ್ಮಹತ್ಯೆ !
ಮಹಿಳಾ ಪಿಜಿಯಲ್ಲಿ ನೇಣು ಬಿಗಿದು ಯುವತಿ ಆತ್ಮಹತ್ಯೆ ! ಶಿವಮೊಗ್ಗ : ನಗರದ ಪಿಜಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಮಿಷನ್ ಕಾಂಪೌಂಡ್ ಬಳಿ ಇರುವ ಪಿಜಿಯೊಂದರಲ್ಲಿ ಮಾಲ ಎಂಬ 26 ವರ್ಷದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಾ.19 ತಾನೇ ತಾರಿಖ್ ಮಾಲಾ ತಿಂಡಿಗೆ ಬಾರದೆ ಇದ್ದಾಗ. ಮಾಲೀಕರು ಕೊಠಡಿಗೆ ಬಂದು ನೋಡಿದ್ದಾರೆ. ಆ ಸಂದರ್ಭದಲ್ಲಿ ಕೊಠಡಿಯಲ್ಲಿ ಯುವತಿ ಟವೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಮಾಲಾ ಎಂಬ ಯುವತಿ ಸೂಗೂರು ಗ್ರಾಮದವರಾಗಿದ್ದು, ಮನು ಕುಮಾರ್ ಎಂಬತಾ ಮಾನಸಿಕ ಕಿರುಕುಳ ನೀಡಿದ್ದು ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಪ್ರಾಥಮಿಕ ಮಾಹಿತಿ...
ನೈರುತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ; ಆಯನೂರು ಮಂಜುನಾಥ್ ಗೆ ಟಿಕೆಟ್ !
ನೈರುತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ; ಆಯನೂರು ಮಂಜುನಾಥ್ ಗೆ ಟಿಕೆಟ್ ! ಶಿವಮೊಗ್ಗ : ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ವಕ್ತಾರ ಆಯನೂರ್ ಮಂಜುನಾಥ್ ಅವರನ್ನು ಗುರುವಾರ ಹೈಕಮಾಂಡ್ ಅಧಿಕೃತ ಘೋಷಣೆ ಮಾಡಿದೆ. ಮುಂಬರುವ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ ಗಾಗಿ ಕಾಂಗ್ರೆಸ್ ಪಾಳಯದಲ್ಲಿ ಇಬ್ಬರ ಹೆಸರು ಮುಂಚೂಣಿಯಲ್ಲಿತ್ತು.ಸತತವಾಗಿ ಎರಡು ಬಾರಿ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದ ಎಸ್.ಪಿ ದಿನೇಶ್ ಮತ್ತು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ಕೊಟ್ಟು 2023 ವಿಧಾನಸಭೆ ಚುನಾವಣಾ ಸಮಯದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರಿ ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಆಯನೂರ್ ಮಂಜುನಾಥ್ ಇಬ್ಬರ ಹೆಸರು ರಾಜಕೀಯ ವಲಯದಲ್ಲಿ ಕೇಳಿ ಬಂದಿದ್ದವು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಈ...
ಚುನಾವಣಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ : ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ !
ಚುನಾವಣಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ : ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ ! ಸಾಗರ : ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆ ಚುನಾವಣಾ ಅಧಿಕಾರಿಗಳು ಅಕ್ರಮ ತಡೆಗೆ ಮಹತ್ವದ ಕ್ರಮ ವಹಿಸಿದ್ದಾರೆ. ಸಾಗರ ತಾಲೂಕಿನ ಚೂರಿಕಟ್ಟೆ ಚೆಕ್ ಪೋಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ನಗದನ್ನು ಜಪ್ತಿ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಚೂರಿಕಟ್ಟೆ ಚೆಕ್ ಪೋಸ್ಟ್ ನಲ್ಲಿ ಇಂದು ಚುನಾವಣಾ ವಿಚಕ್ಷಣ ದಳದ ಅಧಿಕಾರಿಗಳು ಕಾರೊಂದನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಈ ವೇಳೆ ಕಾರೊಂದರಲ್ಲಿ ಎರಡು ಲಕ್ಷ ಹಣ ಪತ್ತೆಯಾಗಿದೆ, ಹಣ ಪತ್ತೆಯಾದ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ, ಸರಿಯಾದ ದಾಖಲೆ ನೀಡದ ಕಾರಣ, ದಾಖಲೆಯಿಲ್ಲದೆ ಸಾಗಿಸುತ್ತಿದ್ದ...









