ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಬಿವೈ ರಾಘವೇಂದ್ರರಿಗೆ ಟಿಕೆಟ್ ! ಬಿ ವೈ ಆರ್ ನಿವಾಸದಲ್ಲಿ ಸಿಹಿ ಹಂಚಿ ಸಂಭ್ರಮ

ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಬಿವೈ ರಾಘವೇಂದ್ರರಿಗೆ ಟಿಕೆಟ್ ! ಬಿ ವೈ ಆರ್ ನಿವಾಸದಲ್ಲಿ ಸಿಹಿ ಹಂಚಿ ಸಂಭ್ರಮ

ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಬಿವೈ ರಾಘವೇಂದ್ರರಿಗೆ ಟಿಕೆಟ್ ! ಬಿ ವೈ ಆರ್ ನಿವಾಸದಲ್ಲಿ ಸಿಹಿ ಹಂಚಿ ಸಂಭ್ರಮ ಶಿವಮೊಗ್ಗ : ಲೋಕಸಭಾ ಚುನಾವಣೆಗಾಗಿ ಇತ್ತೀಚೆಗಷ್ಟೇ ನಾನಾ ರಾಜ್ಯಗಳ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಬಿಜೆಪಿ ಹೈಕಮಾಂಡ್, ಮಾ. 13ರಂದು ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದ್ದು, ಕೆಲವು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಲಾಗಿದೆ. ಇನ್ನೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಲ್ಕನೇ ಬಾರಿಗೆ ಹಾಲಿ ಸಂಸದ ಬಿ.ವೈ.ರಾಘವೇಂದ್ರರವರಿಗೆ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದೆ. ಟಿಕೆಟ್ ಘೋಷಣೆ ಮಾಡಿದ ಬೆನ್ನಲ್ಲೇ ಬಿವೈಆರ್ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಬುಧುವಾರ ಸಂಜೆ ವಿನೋಬನಗರದ ನಿವಾಸದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು...

BIG NEWS ! ಶಿವಮೊಗ್ಗಕ್ಕೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ  ! ಶಿವಮೊಗ್ಗದಿಂದಲೇ ಮೊದಲ ಪ್ರಚಾರ ಆರಂಭಿಸುತ್ತಾರ ಮೋದಿ ?

BIG NEWS ! ಶಿವಮೊಗ್ಗಕ್ಕೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ ! ಶಿವಮೊಗ್ಗದಿಂದಲೇ ಮೊದಲ ಪ್ರಚಾರ ಆರಂಭಿಸುತ್ತಾರ ಮೋದಿ ?

BIG NEWS ! ಶಿವಮೊಗ್ಗಕ್ಕೆ ಬರಲಿದ್ದಾರೆ  ಪ್ರಧಾನಿ ನರೇಂದ್ರ ಮೋದಿ ! ಶಿವಮೊಗ್ಗದಿಂದಲೇ ಮೊದಲ ಪ್ರಚಾರ ಆರಂಭಿಸುತ್ತಾರ ಮೋದಿ ? ಶಿವಮೊಗ್ಗ : ಈ ಬಾರಿ 400 ಸೀಟುಗಳನ್ನು ಪಡೆದು ನರೇಂದ್ರ ಮೋದಿಯನ್ನು ಮೂರನೇ ಬಾರಿ ಪ್ರಧಾನಿ ಮಾಡುವ ಗುರಿಯೊಂದಿಗೆ ಚುನಾವಣಾ ಅಖಾಡಕ್ಕಿಳಿದಿರುವ ಬಿಜೆಪಿ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದಲ್ಲೂ ಭರ್ಜರಿ ಪ್ರಚಾರ ಕೈಗೊಳ್ಳಲು ವೇಳಾಪಟ್ಟಿ ನಿಗದಿಗೊಳಿಸಿದೆ. ಮಾರ್ಚ್ 15ರಿಂದ 19ರವರೆಗೆ ದಕ್ಷಿಣ ಭಾರತದಲ್ಲಿ ಮೋದಿ ಅವರ ಹಲವು ರ್ಯಾಲಿ ಹಾಗೂ ಸಾರ್ವಜನಿಕ ಸಭೆಗಳು ನಿಗದಿಯಾಗಿವೆ. ಕರ್ನಾಟಕದಲ್ಲಿ ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮೊದಲ ಸುತ್ತಿನ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಶಿವಮೊಗ್ಗದಿಂದಲೇ ಪ್ರಚಾರ ಆರಂಭಿಸಲಿದ್ದಾರೆ ಎಂಬ ಮಾಹಿತಿ ಲಭಿಸಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ...

‘ಶಿವಮೊಗ್ಗ’ದಲ್ಲೇ ಮನೆ ಮಾಡಿದ್ದೀನಿ, ಅಲ್ಲೇ ಇರ್ತೀನಿ: ‘ಗೆಲ್ಲುವ ಭರವಸೆ’ ಇದೆ- ಗೀತಾ ಶಿವರಾಜ್ ಕುಮಾರ್

‘ಶಿವಮೊಗ್ಗ’ದಲ್ಲೇ ಮನೆ ಮಾಡಿದ್ದೀನಿ, ಅಲ್ಲೇ ಇರ್ತೀನಿ: ‘ಗೆಲ್ಲುವ ಭರವಸೆ’ ಇದೆ- ಗೀತಾ ಶಿವರಾಜ್ ಕುಮಾರ್

‘ಶಿವಮೊಗ್ಗ’ದಲ್ಲೇ ಮನೆ ಮಾಡಿದ್ದೀನಿ, ಅಲ್ಲೇ ಇರ್ತೀನಿ: ‘ಗೆಲ್ಲುವ ಭರವಸೆ’ ಇದೆ- ಗೀತಾ ಶಿವರಾಜ್ ಕುಮಾರ್ ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನನಗೆ ಟಿಕೆಟ್ ನೀಡಲಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲೋ ಭರವಸೆಯಿದೆ. ಇಲ್ಲೇ ಮನೆ ಮಾಡಿದ್ದೀನಿ. ಓಡಾಟಕ್ಕೆ ಏನೂ ತೊಂದರೆ ಇಲ್ಲ. ಶಿವಮೊಗ್ಗದಲ್ಲಿ ಎಲ್ಲರೂ ಪರಿಚಿತರೇ ಇದ್ದಾರೆ. ಹೊಸಬರು ಯಾರಿಲ್ಲ.ನೂರಕ್ಕೆ ನೂರರಷ್ಟು ಶಿವಮೊಗ್ಗದಲ್ಲಿ ಗೆಲ್ಲುತ್ತೇನೆ ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದ್ದಾರೆ.ಎಂಬುದಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ತಿಳಿಸಿದ್ದಾರೆ. ಕಾಂಗ್ರೆಸ್​​ ಪಕ್ಷದಿಂದ ಟಿಕೆಟ್ ಪಡೆದ ಹಾಗೂ ಸಿದ್ಧತೆಗಳ ಬಗ್ಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಎಲ್ಲರೂ ಪರಿಚಿತರೇ ಇದ್ದಾರೆ. ಹೊಸಬರು ಯಾರಿಲ್ಲ.ನೂರಕ್ಕೆ ನೂರರಷ್ಟು ಶಿವಮೊಗ್ಗದಲ್ಲಿ ಗೆಲ್ಲುತ್ತೇನೆ ಎಂದು ಹೇಳಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ   ನಾನು 17 ದಿನ ಕೆಲಸ ಮಾಡಿದ್ದೆ....

ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ  : ಮಾ.15 ರಿಂದ 17 ರಾಜ್ಯಮಟ್ಟದ ಬಯಲು ಕುಸ್ತಿ ಪಂದ್ಯಾವಳಿ !

ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ : ಮಾ.15 ರಿಂದ 17 ರಾಜ್ಯಮಟ್ಟದ ಬಯಲು ಕುಸ್ತಿ ಪಂದ್ಯಾವಳಿ !

ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ : ಮಾ.15 ರಿಂದ 17 ರಾಜ್ಯಮಟ್ಟದ ಬಯಲು ಕುಸ್ತಿ ಪಂದ್ಯಾವಳಿ ! ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬಾ ಜಾತ್ರೆಯ ಅಂಗವಾಗಿ ಮಾರ್ಚ್ 15 ರಿಂದ 17ರ ವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಬಯಲು ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ ಪಂದ್ಯಾವಳಿಯಲ್ಲಿ ರಾಜ್ಯವಲ್ಲದೇ ಇತರ ರಾಜ್ಯಗಳಿಂದ ಕುಸ್ತಿ ಪೈಲ್ವಾನರು ಆಗಮಿಸುತ್ತಿದ್ದಾರೆ. ಪೈಲ್ವಾನರುಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ರಾಜ್ಯ-ಅಂತರ ರಾಜ್ಯದ ಹೆಸರಾಂತ ಪೈಲ್ವಾನರುಗಳಿಂದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯನ್ನು ನಡೆಸಲಾಗುತ್ತದೆ. ಮಾ.15ರಂದು 3 ಗಂಟೆಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಕುಸ್ತಿಪಂದ್ಯಾವಳಿಯನ್ನು ಉದ್ಘಾಟಿಸುವರು. ವಿಧಾನ ಪರಿಷತ್‌ ಸದಸ್ಯ ಡಿ.ಎಸ್. ಅರುಣ್ ಬಹುಮಾನ ವಿತರಿಸುವರು. ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ಕುಮಾ‌ರ್ ಆಗಮಿಸುವರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ  ಮಾ.16ರ ಮಧ್ಯಾಹ್ನ...

ಲೋಕಸಭೆ ಚುನಾವಣೆ : ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಕಣಕ್ಕೆ !

ಲೋಕಸಭೆ ಚುನಾವಣೆ : ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಕಣಕ್ಕೆ !

ಲೋಕಸಭೆ ಚುನಾವಣೆ : ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಕಣಕ್ಕೆ !  ಶಿವಮೊಗ್ಗ : ಲೋಕಸಭಾ ಚುನಾವಣ ದಿನಾಂಕ ಘೋಷಣೆಗೆ ಕೆಲ ದಿನ ಮಾತ್ರ ಬಾಕಿ. ಚುನಾವಣೆ ಪಕ್ಷಗಳು ಭರ್ಜರಿ ಸಿದ್ಧತೆ ನಡೆಸುತ್ತಿದೆ. ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇಂಡಿಯಾ ಮೈತ್ರಿಯ ಸೀಟು ಹಂಚಿಕೆ ಮಾತುಕತೆ ಅಂತಿಮಗೊಳಿಸಿರುವ ಕಾಂಗ್ರೆಸ್ ಇದೀಗ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಚುನಾವಣಾ ಸಮಿತಿಯ ಪವನ್ ಖೇರಾ, ಕೆಸಿ ವೇಣುಗೋಪಾಲ್, ಅಜಯ್ ಮಾಕೇನ್ ಮೊದಲ ಪಟ್ಟಿ ಬಿಡುಗಡೆ ಮಾಡಿದರು. ದೇಶದ 39 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.ರಾಹುಲ್ ಗಾಂಧಿ, ಭೂಪೇಶ್ ಬಾಘೆಲ್ ಸೇರಿದಂತೆ ಹಲವು ಘಟಾನುಘಟಿ ನಾಯಕರು ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ...

ಮೆಗ್ಗಾನ್ ವೈದ್ಯರ ಯಡವಟ್ಟು ! ಆಕ್ಸಿಜನ್ ಸಿಗದೇ ರೋಗಿ ಸಾವು ! ಏನಿದು ಮೆಗ್ಗಾನ್ ಅವ್ಯವಸ್ಥೆ ?

ಮೆಗ್ಗಾನ್ ವೈದ್ಯರ ಯಡವಟ್ಟು ! ಆಕ್ಸಿಜನ್ ಸಿಗದೇ ರೋಗಿ ಸಾವು ! ಏನಿದು ಮೆಗ್ಗಾನ್ ಅವ್ಯವಸ್ಥೆ ?

ಮೆಗ್ಗಾನ್ ವೈದ್ಯರ ಯಡವಟ್ಟು ! ಆಕ್ಸಿಜನ್ ಸಿಗದೇ ರೋಗಿ ಸಾವು ! ಏನಿದು ಮೆಗ್ಗಾನ್ ಅವ್ಯವಸ್ಥೆ ?  ಶಿವಮೊಗ್ಗ : ಆಕ್ಸಿಜನ್ ಸಿಗದೆ ಉಸಿರಾಟ ತೊಂದರೆ ಇರುವ ರೋಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ   ಮೊನ್ನೆ ಬುಧವಾರ ಮಧ್ಯಾಹ್ನ ಭದ್ರಾವತಿ ತಾಲೂಕಿನ ಮಾರಶೆಟ್ಟಿಕೊಪ್ಪ ಗ್ರಾಮದ 37 ವರ್ಷದ ನಾಗರಾಜ್ ಉಸಿರಾಟ ತೊಂದರೆಯಿಂದ ಶಿವಮೊಗ್ಗ ಜಿಲ್ಲಾಸ್ಪತ್ರೆಗೆ ದಾಖಲು ಆಗಿದ್ದರು. ಇಂದು ಬೆಳಗ್ಗೆ ವಾರ್ಡ್ ನಿಂದ ಸ್ಕ್ಯಾನಿಂಗ್ ಮಾಡಲು ನಾಗರಾಜ್ ನನ್ನು ಕರೆದುಕೊಂಡು ಹೋಗುವ ಸಮಯದಲ್ಲಿ ಆರೋಗ್ಯದಲ್ಲಿ ಮತ್ತೆ ಏರುಪೇರು ಆಗಿದೆ. ಆತನ ಉಸಿರಾಟಕ್ಕೆ ತೊಂದರೆಯಾಗಿದೆ. ಈ ನಡುವೆ ಆತನಿಗೆ ಆಕ್ಸಿಜನ್ ಅಗತ್ಯವಿತ್ತು. ಆದ್ರೆ ಆ ಸಮಯದಲ್ಲಿ ಆತನಿಗೆ ಆಕ್ಸಿಜನ್ ಪೂರೈಕೆಯಾಗಿಲ್ಲ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ  ಈ ನಡುವೆ ಮತ್ತೆ ರೋಗಿಯನ್ನು ವಾರ್ಡ್ ಗೆ...

ಅಕ್ರಮ ಗೋ ಸಾಗಾಟ ! ಇಬ್ಬರ ಮೇಲೆ ಹಲ್ಲೆ !

ಅಕ್ರಮ ಗೋ ಸಾಗಾಟ ! ಇಬ್ಬರ ಮೇಲೆ ಹಲ್ಲೆ !

ಅಕ್ರಮ ಗೋ ಸಾಗಾಟ ! ಇಬ್ಬರ ಮೇಲೆ ಹಲ್ಲೆ ! ತೀರ್ಥಹಳ್ಳಿ : ಅಕ್ರಮ ಗೋ ಸಾಗಾಟದ ಆರೋಪದ ಹಿನ್ನೆಲೆ ವಾಹನ ತಡೆದು ವಾಹನ ಚಾಲಕ ಮತ್ತು ಇಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿ ಗ್ರಾಮದ ಬಳಿ ನಡೆದಿದೆ. ಆರೋಪದ ಹಿನ್ನೆಲೆ ಗ್ರಾಮಸ್ಥರಿಂದ ವಾಹನ ಚಾಲಕ ಸೇರಿ ಇಬ್ಬರ ಮೇಲೆ ಹಲ್ಲೆ ನಡೆದಿದ್ದು, ಓರ್ವನ ಸ್ಥಿತಿ ಗಂಭೀರವಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ  ಗಲಾಟೆಯಲ್ಲಿ‌ ಹಲ್ಲೆಗೊಳಗಾದವರು ಉದಯ್ ಕುಮಾರ್ ಹಾಗೂ ರಾಹೀದ್ ಎಂದು ಗುರುತಿಸಲಾಗಿದೆ. ರಾಹೀದ್ ಎಂಬವರ ಸ್ಥಿತಿ ಗಂಭೀರವಾಗಿದ್ದು, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಸಮೀಪದ ಕುರುವಳ್ಳಿ ಗ್ರಾಮದಲ್ಲಿ ಅಕ್ರಮ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ ಆರೋಪದ ಮೇರೆಗೆ ವಾಹನ ತಡೆದು ಗ್ರಾಮಸ್ಥರು ಗಲಾಟೆ ನಡೆಸಿದ್ದಾರೆ.‌ ಘಟನೆಗೆ...

ಎಸ್ ಎಸ್ ಎಲ್ ಸಿ ಪಾಸಾದವರಿಗೆ ಉದ್ಯೋಗವಕಾಶ ! ಕರ್ನಾಟಕ ವಿಧಾನಸಭೆಯಲ್ಲಿ 32 ಹುದ್ದೆಗಳಿಗೆ ಅರ್ಜಿ ಆಹ್ವಾನ !

ಎಸ್ ಎಸ್ ಎಲ್ ಸಿ ಪಾಸಾದವರಿಗೆ ಉದ್ಯೋಗವಕಾಶ ! ಕರ್ನಾಟಕ ವಿಧಾನಸಭೆಯಲ್ಲಿ 32 ಹುದ್ದೆಗಳಿಗೆ ಅರ್ಜಿ ಆಹ್ವಾನ !

ಎಸ್ ಎಸ್ ಎಲ್ ಸಿ ಪಾಸಾದವರಿಗೆ ಉದ್ಯೋಗವಕಾಶ ! ಕರ್ನಾಟಕ ವಿಧಾನಸಭೆಯಲ್ಲಿ 32 ಹುದ್ದೆಗಳಿಗೆ ಅರ್ಜಿ ಆಹ್ವಾನ ! ಉದ್ಯೋಗ ಸುದ್ದಿ : ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣವಕಾಶವನ್ನ ಕಲ್ಪಸಿಕೊಟ್ಟಿದ್ದು, ಕರ್ನಾಟಕ ವಿಧಾನ ಮಂಡಲದ ಮೇಲ್ಮನೆ ಸಚಿವಾಲಯದಲ್ಲಿ ವಾಹನ ಚಾಲಕರು ಮತ್ತು ಡಿ ಗುಂಪು ಹುದ್ದೆಗಳ ನೇಮಕಾತಿಗಾಗಿ ನೋಟಿಫಿಕೇಶನ್‌ ಬಿಡುಗಡೆಯಾಗಿದೆ.ಕರ್ನಾಟಕ ವಿಧಾನಸಭೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 32 ಚಾಲಕ ಗ್ರೂಪ್​ ಡಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 5, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಇಂದಿನಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಲಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ  ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್...

ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ !

ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ !

 ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ ! ಶಿವಮೊಗ್ಗ : ಮಾರ್ಚ್ 8ರಂದು ಶುಕ್ರವಾರ ಮಹಾ ಶಿವರಾತ್ರಿ ಹಬ್ಬವನ್ನು ಆಚರಿಸಲಾಗುತ್ತದೆ. ಇದರ ಪ್ರಯುಕ್ತ ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧ ಮಾಡಲಾಗಿದೆ.  ಹೀಗಾಗಿ ಮಾಂಸ ಮಾರಾಟಗಾರರು ಹಾಗೂ ವ್ಯಾಪಾರಿಗಳು ಈ ಬಗ್ಗೆ ಗಮನ ಹರಿಸುವಂತೆ ಸೂಚಿಸಲಾಗಿದೆ.ಈ ಬಗ್ಗೆ ಸಭೆ ನಡೆಸಿದ ಬಳಿಕ ಶಿವಮೊಗ್ಗ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ  ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ವರದಿ : ಲಿಂಗರಾಜ್ ಗಾಡಿಕೊಪ್ಪ 

5, 8,9 ಮತ್ತು 11 ನೇ ತರಗತಿ ಬೋರ್ಡ್ ಎಕ್ಸಾಂ ರದ್ದು, ಹೈಕೋರ್ಟ್ ಆದೇಶ !

5, 8,9 ಮತ್ತು 11 ನೇ ತರಗತಿ ಬೋರ್ಡ್ ಎಕ್ಸಾಂ ರದ್ದು, ಹೈಕೋರ್ಟ್ ಆದೇಶ !

5, 8,9 ಮತ್ತು 11 ನೇ ತರಗತಿ ಬೋರ್ಡ್ ಎಕ್ಸಾಂ ರದ್ದು, ಹೈಕೋರ್ಟ್ ಆದೇಶ ! ಬೆಂಗಳೂರು : ಸಾಕಷ್ಟು ವಿರೋಧಗಳ ಮಧ್ಯೆಯೇ 5, 8,9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ನ್ಯಾ.ರವಿ ಹೊಸಮನಜ ಅವರಿಂದ ಆದೇಶ ಹೊರಬಿದ್ದಿದ್ದು, ರಾಜ್ಯ ಸರ್ಕಾರಕ್ಕೆ ಹಿನ್ನೆಡೆಯಾಗಿದೆ. ಡಿಸೆಂಬರ್ 2023ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು. ವಾದ ಆಲಿಸಿದ ಹೈಕೋರ್ಟ್ ಸರ್ಕಾರ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿದೆ. ಅರ್ಜಿದಾರರ ಪರ ವಕೀಲ ಸುದರ್ಶನ್ ವಾದ ಮಂಡಿಸಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು...