ಕೋಟೆಗಂಗೂರಿನ ಅಜ್ಜಪ್ಪಸ್ವಾಮಿ ದೇವಾಲಯದಲ್ಲಿ ಹುಂಡಿ ಕಳ್ಳತನ, ಸಿಸಿಟಿವಿಯಲ್ಲಿ ಕೃತ್ಯ ಸೆರೆ!

ಕೋಟೆಗಂಗೂರಿನ ಅಜ್ಜಪ್ಪಸ್ವಾಮಿ ದೇವಾಲಯದಲ್ಲಿ ಹುಂಡಿ ಕಳ್ಳತನ, ಸಿಸಿಟಿವಿಯಲ್ಲಿ ಕೃತ್ಯ ಸೆರೆ!

ಶಿವಮೊಗ್ಗ: ಜಿಲ್ಲೆಯ ಕೋಟೆಗಂಗೂರಿನ ಅಜ್ಜಪ್ಪಸ್ವಾಮಿ ದೇವಾಲಯದಲ್ಲಿ ಕಳ್ಳತನ ನಡೆದಿದೆ. ಜುಲೈ 12ರ ರಾತ್ರಿ ದೇವಾಲಯದ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು, ಹುಂಡಿಯನ್ನು ಒಡೆದು ಸುಮಾರು ₹60,000 ಕಾಣಿಕೆ ಹಣವನ್ನು ಕದ್ದೊಯ್ದಿದ್ದಾರೆ. ಈ ಕೃತ್ಯದ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಜುಲೈ 12ರ ರಾತ್ರಿ 7 ಗಂಟೆಗೆ ಅರ್ಚಕ ಬಸವರಾಜಪ್ಪ ಅವರು ಪೂಜೆ ಮುಗಿಸಿ ದೇವಾಲಯಕ್ಕೆ ಬೀಗ ಹಾಕಿ ಹೋಗಿದ್ದರು. ಮರುದಿನ, ಅಂದರೆ ಜುಲೈ 13ರಂದು ಬೆಳಗ್ಗೆ ದೇವಾಲಯದ ಸ್ವಚ್ಛತಾ ಕಾರ್ಯಕ್ಕೆ ಬಂದ ಜಯಣ್ಣ ಎಂಬುವವರು ಕಳ್ಳತನವಾಗಿರುವುದನ್ನು ಪತ್ತೆ ಹಚ್ಚಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದನ್ನು ಓದಿ: ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ! ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು! ಜಾಹಿರಾತು: ಇದನ್ನು ಓದಿ:...

ರಸ್ತೆ ಸುರಕ್ಷತೆಗೆ ಆದ್ಯತೆ ನೀಡಿ: ಎಸ್ಪಿ ಮಿಥುನ್ ಕುಮಾರ್ ಕರೆ – ಸಿಗ್ನಲ್ ಲೈಟ್‌ಗೆ ಚಾಲನೆ

ರಸ್ತೆ ಸುರಕ್ಷತೆಗೆ ಆದ್ಯತೆ ನೀಡಿ: ಎಸ್ಪಿ ಮಿಥುನ್ ಕುಮಾರ್ ಕರೆ – ಸಿಗ್ನಲ್ ಲೈಟ್‌ಗೆ ಚಾಲನೆ

ಶಿವಮೊಗ್ಗ: ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ರಸ್ತೆ ಅಪಘಾತಗಳನ್ನು ತಡೆಯುವಂತೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಜನರಿಗೆ ಕರೆ ನೀಡಿದ್ದಾರೆ. ನಗರದ ಉಷಾ ನರ್ಸಿಂಗ್ ಹೋಮ್ ಬಳಿಯ ಅಕ್ಕಮಹಾದೇವಿ ವೃತ್ತದಲ್ಲಿ ಸಿಗ್ನಲ್ ಲೈಟ್ ಅಳವಡಿಕೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? “ಜೀವಕ್ಕಿಂತ ಅಮೂಲ್ಯವಾದ ವಸ್ತು ಇನ್ನೊಂದಿಲ್ಲ. ರಸ್ತೆ ಅಪಘಾತಗಳಿಂದ ಸಾಕಷ್ಟು ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ವೇಗದ ಚಾಲನೆ, ಹೆಲ್ಮೆಟ್ ಧರಿಸದಿರುವುದು, ಸೀಟ್ ಬೆಲ್ಟ್ ಹಾಕದೆ ಇರುವುದು ಮತ್ತು ಮದ್ಯಪಾನ ಮಾಡಿ ವಾಹನ ಚಲಾಯಿಸುವುದು ಅಪಘಾತಗಳ ಪ್ರಮಾಣವನ್ನು ಹೆಚ್ಚಿಸುತ್ತಿದೆ” ಎಂದು ಎಸ್ಪಿ ಮಿಥುನ್ ಕುಮಾರ್ ಕಳವಳ ವ್ಯಕ್ತಪಡಿಸಿದರು. ಪ್ರತಿಯೊಬ್ಬರೂ ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಒತ್ತಿ ಹೇಳಿದರು. ಇದನ್ನು ಓದಿ: ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ! ಇದನ್ನು ಓದಿ : ಸಿಗಂದೂರು...

ಸೊರಬದ ‘ಪ್ರಕೃತಿ ಮೆಡಿಕಲ್ಸ್’ ಮಾಲೀಕ ಹರೀಶ್ ಭಟ್‌ ವಿರುದ್ಧ ಜಾತಿ ನಿಂದನೆ ಕೇಸ್: ಅರೆಸ್ಟ್, ಜೈಲುಪಾಲು!

ಸೊರಬದ ‘ಪ್ರಕೃತಿ ಮೆಡಿಕಲ್ಸ್’ ಮಾಲೀಕ ಹರೀಶ್ ಭಟ್‌ ವಿರುದ್ಧ ಜಾತಿ ನಿಂದನೆ ಕೇಸ್: ಅರೆಸ್ಟ್, ಜೈಲುಪಾಲು!

ಶಿವಮೊಗ್ಗ: ಜಿಲ್ಲೆಯ ಸೊರಬ ನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ‘ಪ್ರಕೃತಿ ಮೆಡಿಕಲ್ಸ್’ ಮಾಲೀಕ ಹರೀಶ್ ಭಟ್ ಎಂಬುವರು ಮೆಡಿಕಲ್ಸ್ ಮಾರಾಟದ ನೆಪದಲ್ಲಿ ಹಣ ಪಡೆದು ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೊಟ್ಟ ಹಣವನ್ನು ವಾಪಸ್ ಕೇಳಿದಾಗ,ಪುನೀತ್ ಕುಮಾರ್ ಎಂಬುವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿ ಹೆಸರಿಡಿದು ಬೈದ ಕಾರಣ ಅವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದ್ದು, ಅವರನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಸೊರಬದ ಪ್ರಕೃತಿ ಮೆಡಿಕಲ್ಸ್ ಮಾಲೀಕ ಹರೀಶ್ ಭಟ್ ಅವರು ಪುನೀತ್ ಕುಮಾರ್ ಎಂಬುವರಿಗೆ ತಮ್ಮ ಮೆಡಿಕಲ್ಸ್ ಮಾರಾಟ ಮಾಡಲು ಮಾತುಕತೆ ನಡೆಸಿದ್ದರು. 2024ರ ಆಗಸ್ಟ್ 31ರಂದು ಹಲವರ ಸಮ್ಮುಖದಲ್ಲಿ ನಡೆದ ಮಾತುಕತೆಯಲ್ಲಿ ಪ್ರಕೃತಿ ಮೆಡಿಕಲ್ಸ್ ಮಾರಾಟ ಮಾಡಲು ಒಪ್ಪಿಕೊಂಡಿದ್ದರು. ಮೆಡಿಕಲ್ಸ್ ಖರೀದಿಸಲು ಪುನೀತ್ ಕುಮಾರ್ ಹರೀಶ್ ಭಟ್‌ಗೆ ನಗದು ಮತ್ತು ಚೆಕ್ ಮೂಲಕ ಹಂತ ಹಂತವಾಗಿ 35 ಲಕ್ಷ ರೂಪಾಯಿ ಹಣವನ್ನು ನೀಡಿದ್ದರು. ಇದನ್ನು...

ದೇಶಕ್ಕೆ ಮತ್ತೆ ತುರ್ತು ಪರಿಸ್ಥಿತಿ ಬರುವುದಿಲ್ಲ: ಬಿ.ಎಲ್.ಸಂತೋಷ್ ಭರವಸೆ

ದೇಶಕ್ಕೆ ಮತ್ತೆ ತುರ್ತು ಪರಿಸ್ಥಿತಿ ಬರುವುದಿಲ್ಲ: ಬಿ.ಎಲ್.ಸಂತೋಷ್ ಭರವಸೆ

ಬೆಂಗಳೂರು: 1975ರ ಕರಾಳ ತುರ್ತು ಪರಿಸ್ಥಿತಿಗೆ 50 ವರ್ಷಗಳಾದ ಹಿನ್ನೆಲೆಯಲ್ಲಿ ರಾಷ್ಟೋತ್ಥಾನ ಬಳಗ ಶಿವಮೊಗ್ಗ ಘಟಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು, “ಈ ದೇಶಕ್ಕೆ ಇನ್ನೆಂದೂ ತುರ್ತು ಪರಿಸ್ಥಿತಿ ಎದುರಿಸುವ ಅನಿವಾರ್ಯತೆ ಬೀಳುವುದಿಲ್ಲ. ಏಕೆಂದರೆ 1975ರ ಭಾರತ, ಅಂದಿನ ಆರ್‌ಎಸ್‌ಎಸ್, ಅಂದಿನ ಎಬಿವಿಪಿ ಎಲ್ಲವೂ ಇಂದು ಬದಲಾಗಿವೆ” ಎಂದು ಹೇಳಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ದ್ವಾರಕ ಸಭಾಂಗಣದಲ್ಲಿ ನಡೆದ “ದೇಶ ಅನುಭವಿಸಿದ ಕರಾಳ ತುರ್ತು ಪರಿಸ್ಥಿತಿಗೆ 50 ವರ್ಷಗಳು” ವಿಷಯದ ಕುರಿತು ಮಾತನಾಡಿದ ಸಂತೋಷ್, ಅಂದಿನ ಪ್ರಧಾನಿ ಇಂದಿರಾ ಗಾಂಧಿ ಪಕ್ಷವನ್ನು ಕೈವಶ ಮಾಡಿಕೊಂಡು, ಆಡಳಿತವನ್ನು ತಮ್ಮ ಸುತ್ತಲೇ ಕೇಂದ್ರೀಕರಿಸಿ, ನಂತರ ದೇಶವನ್ನೇ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದರು ಎಂದು ಅಭಿಪ್ರಾಯಪಟ್ಟರು. ತುರ್ತು ಪರಿಸ್ಥಿತಿ ಹೇರುವ ಮುನ್ನವೇ ಇಂದಿರಾ ಗಾಂಧಿ ಪ್ರಜಾಪ್ರಭುತ್ವದಿಂದ ವಿಮುಖರಾಗಿದ್ದರು ಎಂಬುದಕ್ಕೆ ಕೀನ್ಯಾದಲ್ಲಿ ಅವರು ನೀಡಿದ್ದ ಭಾಷಣದಲ್ಲಿನ ಹೇಳಿಕೆಯನ್ನು ಉದಾಹರಿಸಿದರು....

ಶಿವಮೊಗ್ಗದಲ್ಲಿ ನಾಳೆ (ಜುಲೈ 17ರಂದು) ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ: ಇಲ್ಲಿದೆ ಪಟ್ಟಿ!

ಶಿವಮೊಗ್ಗದಲ್ಲಿ ನಾಳೆ (ಜುಲೈ 17ರಂದು) ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ: ಇಲ್ಲಿದೆ ಪಟ್ಟಿ!

ಶಿವಮೊಗ್ಗ; ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 17ರಂದು (ನಾಳೆ) ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಇದನ್ನು ಓದಿ: ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್ !! ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ! ಜುಲೈ 17ರಂದು ಎಲ್ಲೆಲ್ಲಿ ವ್ಯತ್ಯಯ? ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶ್ರಯ ಬಡಾವಣೆ, ಚಾಲುಕ್ಯನಗರ, ಕೆ.ಹೆಚ್.ಬಿ.ಕಾಲೋನಿ, ಹಳೆ ಊರು ಗೋಪಿಶೆಟ್ಟಿಕೊಪ್ಪ, ಗದ್ದೆಮನೆ ಲೇಔಟ್, ಮಂಜಪ್ಪ ಬಸಪ್ಪ ಲೇಔಟ್, ಜಿ.ಎಸ್.ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ. ಜಾಹಿರಾತು:...

ಮಹಾನಗರಪಾಲಿಕೆ ನೌಕರರ ಮುಷ್ಕರ ವಾಪಸ್: ಬೇಡಿಕೆ ಈಡೇರಿಕೆಗೆ ಸಚಿವ ಸುರೇಶ್ ಭರವಸೆ

ಮಹಾನಗರಪಾಲಿಕೆ ನೌಕರರ ಮುಷ್ಕರ ವಾಪಸ್: ಬೇಡಿಕೆ ಈಡೇರಿಕೆಗೆ ಸಚಿವ ಸುರೇಶ್ ಭರವಸೆ

ಬೆಂಗಳೂರು: ರಾಜ್ಯದ ಮಹಾನಗರಪಾಲಿಕೆ ನೌಕರರ ಸಂಘ ನಡೆಸುತ್ತಿದ್ದ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ. ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ್ ಅವರು ವಿಕಾಸಸೌಧದಲ್ಲಿ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ಬಹುತೇಕ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ನಂತರ ನೌಕರರು ಮುಷ್ಕರವನ್ನು ಕೈಬಿಡಲು ನಿರ್ಧರಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ನಗರಸಭೆ ನೌಕರರ ಸಂಘದ ಅಧ್ಯಕ್ಷ ಅಮೃತರಾಜ್ ಮತ್ತು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಮಹಾನಗರ ಪಾಲಿಕೆಗಳ ಸಾಮಾನ್ಯ ನೇಮಕಾತಿ ನಿಯಮಗಳು 2011ಕ್ಕೆ ಸಮಗ್ರ ತಿದ್ದುಪಡಿ, ನೌಕರರನ್ನು ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ನೌಕರರೆಂದು ಪರಿಗಣಿಸುವುದು, ಕೆಜಿಐಡಿ, ಜಿಐಎಸ್ ಮತ್ತು ಜಿಪಿಎಫ್ ಸೌಲಭ್ಯಗಳನ್ನು ವಿಸ್ತರಿಸುವುದು ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಮಂಡಿಸಲಾಯಿತು. ಇದನ್ನು ಓದಿ: ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ! ಸಭೆಯ...

ರೈಲು ಪ್ರಯಾಣಿಕರ ಗಮನಕ್ಕೆ: ರೈಲ್ವೆ ಮಾರ್ಗದಲ್ಲಿ ಹಳಿ ನವೀಕರಣ, ಕೆಲವು ರೈಲುಗಳ ಸೇವೆಗೆ ತಾತ್ಕಾಲಿಕ ವ್ಯತ್ಯಯ!

ರೈಲು ಪ್ರಯಾಣಿಕರ ಗಮನಕ್ಕೆ: ರೈಲ್ವೆ ಮಾರ್ಗದಲ್ಲಿ ಹಳಿ ನವೀಕರಣ, ಕೆಲವು ರೈಲುಗಳ ಸೇವೆಗೆ ತಾತ್ಕಾಲಿಕ ವ್ಯತ್ಯಯ!

ಶಿವಮೊಗ್ಗ: ರೈಲು ಪ್ರಯಾಣಿಕರಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಮೈಸೂರು ವಿಭಾಗದ ಹಾಸನ ಮತ್ತು ಮಾವಿನಕೆರೆ ನಿಲ್ದಾಣಗಳ ನಡುವೆ ಹಳಿ ನವೀಕರಣ ಕಾರ್ಯವನ್ನು ಕೈಗೊಂಡಿರುವುದರಿಂದ, ಜುಲೈ 16 ರಿಂದ ಆಗಸ್ಟ್ 8, 2025 ರವರೆಗೆ ವಿವಿಧ ದಿನಾಂಕಗಳಲ್ಲಿ ಕೆಲವು ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ನಿಯಂತ್ರಿಸಲು ನಿರ್ಧರಿಸಲಾಗಿದೆ ಎಂದು ಮೈಸೂರು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಯಾವ ರೈಲುಗಳು ನಿಯಂತ್ರಿಸಲ್ಪಡಲಿವೆ? ಇಲ್ಲಿದೆ ಮಾಹಿತಿ: ರೈಲು ಸಂಖ್ಯೆ 16221 ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್: ನಿಯಂತ್ರಣ ಅವಧಿ: ಜುಲೈ 16, 18, 21, 23, 25, ಹಾಗೂ ಜುಲೈ 28 ರಿಂದ ಆಗಸ್ಟ್ 1, 2025 ರವರೆಗೆ ಮತ್ತು ಆಗಸ್ಟ್ 4 ರಿಂದ ಆಗಸ್ಟ್ 8, 2025 ರವರೆಗೆ ಹೊರಡುವ ಈ ರೈಲು ಮಾರ್ಗಮಧ್ಯೆ 15 ನಿಮಿಷಗಳ ಕಾಲ ನಿಯಂತ್ರಿಸಲ್ಪಡುತ್ತದೆ. ಇದನ್ನು ಓದಿ: ಭಯಾನಕ...

ಸಾಗರದಲ್ಲಿ ಭೀಕರ ಅಪಘಾತ: ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ, ಇಬ್ಬರಿಗೆ ಗಾಯ!

ಸಾಗರದಲ್ಲಿ ಭೀಕರ ಅಪಘಾತ: ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ, ಇಬ್ಬರಿಗೆ ಗಾಯ!

ಶಿವಮೊಗ್ಗ: ಇಂದು ಸಂಜೆ ಆನಂದಪುರ ಸಮೀಪದ ಮುಂಬಾಳುವಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆರೆ ಏರಿ ಮೇಲೆ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಶರತ್‌ ಮತ್ತು ಭರತ್‌ ಎಂಬುವವರಿಗೆ ಗಾಯಗಳಾಗಿವೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಸಾಗರದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಪ್ರಕಾಶ್ ಬಸ್ ಮತ್ತು ಆನಂದಪುರ ಕಡೆಯಿಂದ ಸಾಗರಕ್ಕೆ ಹೊರಟಿದ್ದ ಕಾರುಗಳ ನಡುವೆ ಈ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕೆರೆಯ ತಡೆಗೋಡೆ ಮೇಲೆ ನಿಂತಿದೆ. ಬಸ್‌ನ ಮುಂಭಾಗಕ್ಕೂ ಹಾನಿಯಾಗಿದೆ. ಇದನ್ನು ಓದಿ: ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್ !! ‘ಕಾರಿನಲ್ಲಿದ್ದ ಭರತ್ ಮತ್ತು ಶರತ್ ಕುಮಾರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್‌ನಲ್ಲಿದ್ದ ಮಹಿಳೆಯೊಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಆನಂದಪುರದ ಸರ್ಕಾರಿ ಸಮುದಾಯ...

”ಪ್ಲಾಸ್ಟಿಕ್ ಸರ್ಜರಿ ಬಗ್ಗೆ ಭಯ ಬೇಡ, ಜೀವಕ್ಕೆ ಅಪಾಯವಿಲ್ಲ’: ಸರ್ಜಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ!

”ಪ್ಲಾಸ್ಟಿಕ್ ಸರ್ಜರಿ ಬಗ್ಗೆ ಭಯ ಬೇಡ, ಜೀವಕ್ಕೆ ಅಪಾಯವಿಲ್ಲ’: ಸರ್ಜಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ!

ಶಿವಮೊಗ್ಗ: ‘ಪ್ಲಾಸ್ಟಿಕ್ ಸರ್ಜರಿ ಕೇವಲ ಸೌಂದರ್ಯ ವರ್ಧಕಕ್ಕೆ ಮಾತ್ರ ಸೀಮಿತವಲ್ಲ, ಇದು ಜೀವಕ್ಕೆ ಯಾವುದೇ ರೀತಿಯ ಅಪಾಯವನ್ನು ತರುವುದಿಲ್ಲ. ಈ ಬಗ್ಗೆ ಇರುವ ತಪ್ಪು ಕಲ್ಪನೆ, ಭಯ, ಆತಂಕ ಬೇಡ’ ಎಂದು ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸಾ ತಜ್ಞ ವೈದ್ಯರಾದ ಡಾ. ಚೇತನ್ ಕುಮಾರ್ ನವಿಲೇಹಾಳ್ ಅವರು ಜನರಿಗೆ ತಿಳಿಹೇಳಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆಯ ಅಂಗವಾಗಿ ಇಂದು ಶಿವಮೊಗ್ಗ ನಗರದ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಡೀ ವಿಶ್ವದಲ್ಲಿ ಭಾರತದ ಪ್ಲಾಸ್ಟಿಕ್ ಸರ್ಜರಿಗೆ ವಿಶೇಷ ಇತಿಹಾಸವಿದೆ ಎಂದು ತಿಳಿಸಿದರು. 2500 ವರ್ಷಗಳ ಹಿಂದೆ ಆಧುನಿಕ ತಂತ್ರಜ್ಞಾನ ಇಲ್ಲದೆ ಸಂದರ್ಭದಲ್ಲಿಯೂ ಸುಶೃತ ಮಹರ್ಷಿಗಳು ಪ್ಲಾಸ್ಟಿಕ್ ಶಸ್ತ್ರಚಿಕಿತ್ಸೆಯನ್ನು ಮಾಡುತ್ತಿದ್ದರು. ಕತ್ತರಿಸಿ ಹೋದ ಮೂಗನ್ನು ರೋಗಿಯ ಹಣೆಯ ತ್ವಚೆಯಿಂದ ಪುನರ್ನಿರ್ಮಿಸುತ್ತಿದ್ದ ವಿಧಾನವು ಇಂದಿಗೂ ‘ಇಂಡಿಯನ್ ಫೋರ್‌ಹೆಡ್ ಫ್ಲಾಪ್’ ಎಂಬ ಹೆಸರಿನಲ್ಲಿ ಜಗತ್ತಿನಾದ್ಯಂತ...

ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ!

ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ!

ಶಿವಮೊಗ್ಗ: ನಿನ್ನೆ (ಜುಲೈ 14) ಅದ್ದೂರಿಯಾಗಿ ನಡೆದ ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭವು, ಅಭಿವೃದ್ಧಿ ವಿಚಾರಕ್ಕಿಂತ ಹೆಚ್ಚಾಗಿ ರಾಜಕೀಯ ಅಪಪ್ರಚಾರ ಮತ್ತು ಸಣ್ಣತನದ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಕೆಲವು ರಾಜಕಾರಣಿಗಳ ವಿರುದ್ಧ ಅವರು ಪರೋಕ್ಷವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ ಅವರು, ಸಿಗಂದೂರು ಸೇತುವೆ ನಿರ್ಮಾಣದ ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದರೂ, ನದಿಯಲ್ಲಿ ನೀರಿನ ಮಟ್ಟ ಹೆಚ್ಚಾದರೆ ಲಾಂಚ್ ಸಂಚಾರಕ್ಕೆ ಸಮಸ್ಯೆ ಆಗಬಹುದು ಎಂಬ ಮುನ್ನೆಚ್ಚರಿಕೆಯಿಂದ ಅಧಿವೇಶನಕ್ಕೂ ಮುನ್ನವೇ ಸೇತುವೆ ಉದ್ಘಾಟನೆ ನಡೆಸಲಾಯಿತು ಎಂದು ಸ್ಪಷ್ಟಪಡಿಸಿದರು. ಇದನ್ನು ಓದಿ: ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್ !! ಅಪಪ್ರಚಾರ...