ಬೆಂಗಳೂರು: ವಿಶ್ವಗುರು ಬಸವಣ್ಣ ಅವರನ್ನು ‘ಕರ್ನಾಟಕ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದ ವರ್ಷಾಚರಣೆಯ ಬೃಹತ್ ಸಮಾರೋಪ ಸಮಾರಂಭದಲ್ಲಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಮಹತ್ವದ ಮೂಲಸೌಕರ್ಯ ಯೋಜನೆಗೆ ಬಸವಣ್ಣನವರ ಹೆಸರಿಡುವ ಐತಿಹಾಸಿಕ ತೀರ್ಮಾನ ಪ್ರಕಟಿಸಿದ್ದಾರೆ. ಬೆಂಗಳೂರಿನ ‘ನಮ್ಮ ಮೆಟ್ರೋ’ ಯೋಜನೆಗೆ “ಬಸವ ಮೆಟ್ರೋ” ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಅಧಿಕೃತವಾಗಿ ಶಿಫಾರಸ್ಸು ಮಾಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.